Homeಮುಖಪುಟಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕಾಯ್ದೆ 1956 ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಭರತ್ಮಾಲಾ ಪರಿಯೋಜನಾದ- ಮೊದಲ ಹಂತದ ಯೋಜನೆಯ ಭಾಗವಾಗಿ ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು.

ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಮದ್ರಾಸ್‌ ಹೈಕೋರ್ಟ್ 2019ರಲ್ಲಿ ರದ್ದುಪಡಿಸಿತ್ತು.  ಅದರ ವಿರುದ್ಧ ಎನ್‌ಎಚ್‌ಎಐ ಮತ್ತು ಕೇಂದ್ರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಸದ್ಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು ಅಧಿಸೂಚನೆಗಳಿಗೆ ಅಸ್ತು ಎಂದಿದ್ದು, ಮದ್ರಾಸ್‌ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ಆದೇಶದ ಪ್ರಕಾರ, ‘ ರಾಜ್ಯದೊಳಗಿನ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು  (ಅದು ಪ್ರಸ್ತುತ ಇರುವ ರಸ್ತೆ ಮತ್ತು ಹೆದ್ದಾರಿಯ ಹೊರತಾದ ಭೂಮಿ) ಸ್ವಾಧೀನಪಡಿಸಿಕೊಳ್ಳಲು, ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅರ್ಹವಾಗಿದೆ’ ಎಂದು ಪೀಠ ಉಲ್ಲೇಖಿಸಿದೆ.

“ಕೇಂದ್ರ ಸರ್ಕಾರವು, ಸಂಬಂಧಪಟ್ಟ ಪ್ರದೇಶದ ಜನರ ಅಭಿವೃದ್ಧಿಗಾಗಿ ಸಂವಿಧಾನದ ಭಾಗ IV ರ ಅಡಿಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು ಮುಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಪ್ರದೇಶದಲ್ಲಿ, ಸ್ಥಳೀಯ ಜನರಿಗೆ ಸಾಕಷ್ಟು ಜೀವನೋಪಾಯವನ್ನು ಒದಗಿಸುವುದು, ಹೊಸ ಆರ್ಥಿಕ ಅವಕಾಶಗಳನ್ನು ಒದಗಿಸುವುದು ಮತ್ತು ಆ ಪ್ರದೇಶದ ಜನರನ್ನು ಸಬಲೀಕರಣಗೊಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

“ರಾಜ್ಯದ ಯಾವುದೇ ಭಾಗದಲ್ಲಿ ಹೆದ್ದಾರಿಯ ಲಭ್ಯತೆಯು ಸುಸ್ಥಿರ ಅಭಿವೃದ್ಧಿಗೆ ಮತ್ತು ಮಾನವ ಯೋಗಕ್ಷೇಮದ ಒಟ್ಟಾರೆ ವರ್ಧನೆಗೆ ದಾರಿ ಮಾಡಿಕೊಡುತ್ತದೆ, ಅಲ್ಲಿನ ನಿವಾಸಿಗಳಿಗೆ ಯೋಗ್ಯವಾದ ಜೀವನ ನಡೆಸಲು ಅನುಕೂಲವಾಗುವುದು’ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಎನ್‌ಎಚ್‌ಎಐ ಕಾಯ್ದೆಯ ಸೆಕ್ಷನ್ 3 (ಎ) ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಸರ ಇಲಾಖೆ ಅನುಮತಿಯ ನಂತರವೇ ಮಾಡಬಹುದಿತ್ತು ಎಂಬ ಕಾರಣಕ್ಕೆ ಈ ಯೋಜನೆಗೆ ತಡೆ ಒಡ್ಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕಾಗಿ ಕೇಂದ್ರವು ಕೃಷಿಯೋಗ್ಯ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮೊದಲಿನಿಂದಲೂ ಇರುವ ರಾಜ್ಯ ಹೆದ್ದಾರಿಯನ್ನು ಮಾತ್ರ ಹಾಗೆ ಘೋಷಿಸಬಹುದು ಎಂದು ವಾದಿಸಲಾಗಿತ್ತು.

ಯೋಜನೆಗಾಗಿ ಸೆಕ್ಷನ್ 3 (ಎ) ಅಡಿಯಲ್ಲಿ ಅಧಿಸೂಚನೆ ಹೊರಡಿಸಲು ಪರಿಸರ ಇಲಾಖೆಯಿಂದ ಅನುಮತಿ ಅಗತ್ಯ ಎಂಬ ವಾದವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಏಕೆಂದರೆ ಯೋಜನೆ ಮಾರ್ಗವು 10 ಕಿ.ಮೀ ಅರಣ್ಯ ಪ್ರದೇಶದ ಮೂಲಕ ಹಾದುಹೋಗಲಿದೆ. ಆದರೆ ಸುಪ್ರೀಂಕೋರ್ಟ್, ‘1956ರ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಅನ್ವಯ, ಯೋಜನೆಗರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿಲ್ಲ’ ಎಂದಿದೆ.

ಚೆನ್ನೈ-ಸೇಲಂ ಹೆದ್ದಾರಿ ಯೋಜನೆ: 

ಚೆನ್ನೈ-ಸೇಲಂ ಹೆದ್ದಾರಿ ಯೋಜನೆಯು, 10,000 ಕೋಟಿ ರೂಪಾಯಿ ವೆಚ್ಚದಲ್ಲಿ, 15 ಹಂತಗಳ ಭರತ್ಮಾಲಾ ಪರಿಯೋಜನಾ ಯೋಜನೆಯಾಗಿದೆ. ಈ ಯೋಜನೆಯು ರಾಜಧಾನಿ ಚೆನ್ನೈನಿಂದ ಸೇಲಂಗೆ ಆರು ಗಂಟೆಗಳ ಪ್ರಯಾಣವನ್ನು ಸುಮಾರು ಎರಡೂವರೆ ಗಂಟೆಗಳವರೆಗೆ ಕಡಿತಗೊಳಿಸುತ್ತದೆ.  277.30 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ 2018ರಲ್ಲಿ ಒಪ್ಪಿಗೆ ನೀಡಲಾಗಿತ್ತು.

ಯೋಜನೆಗೆ ವಿರೋಧವೇಕೆ…?

ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಆರಂಭವಾಗುತ್ತಿದ್ದಂತೆ ಸೇಲಂ ಮತ್ತು ಸ್ಥಳೀಯ ಪ್ರದೇಶದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಸೇಲಂನ ರೈತರು ತಮ್ಮ ಕೃಷಿ ಭೂಮಿಯನ್ನು ಯೋಜನೆಗಾಗಿ ತೆಗೆದುಕೊಳ್ಳುವುದನ್ನು ವಿರೋಧಿಸಿದರು. ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿತ್ತು.

PC: E_LakshmiNarayanan

ಜೊತೆಗೆ ಅರಣ್ಯ ಭೂಮಿ ಮತ್ತು ಜಲಮೂಲಗಳು ಸಹ ಯೋಜನೆಯ ಮಾರ್ಗದಲ್ಲಿ ಇದ್ದ ಕಾರಣ ರಾಜ್ಯದ ಪರಿಸರವಾದಿಗಳು ಕೂಡ ಈ ಯೋಜನೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು. ವ್ಯಾಪಕ ವಿರೋಧ ವ್ಯಕ್ತಪಡಿಸಿದ 35 ಭೂಮಾಲೀಕರು ಮತ್ತು ಪಿಎಂಕೆ (Pattali Makkal Katchi) ಯುವ ವಿಭಾಗದ ಮುಖಂಡ ಅನ್ಬುಮಾನಿ ರಾಮದಾಸ್ ಈ ಯೋಜನೆಯ ವಿರುದ್ಧ ಮದ್ರಾಸ್ ಹೈಕೋರ್ಟ್‌ಗೆ ತೆರಳಿದರು.

ಏಪ್ರಿಲ್ 8, 2019 ರಂದು ಮದ್ರಾಸ್ ಹೈಕೋರ್ಟ್ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿದ್ದ ಭೂಸ್ವಾಧೀನವನ್ನು ರದ್ದುಗೊಳಿಸಿತು. ಹೈಕೋರ್ಟ್‌ನ ಆದೇಶದಿಂದ ಈ ಪ್ರದೇಶದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಆದರೆ, ಸುಪ್ರೀಂಕೋರ್ಟ್ ಈಗ ಮದ್ರಾಸ್ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದಿದೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....