Homeಮುಖಪುಟಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕಾಯ್ದೆ 1956 ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಭರತ್ಮಾಲಾ ಪರಿಯೋಜನಾದ- ಮೊದಲ ಹಂತದ ಯೋಜನೆಯ ಭಾಗವಾಗಿ ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು.

ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಮದ್ರಾಸ್‌ ಹೈಕೋರ್ಟ್ 2019ರಲ್ಲಿ ರದ್ದುಪಡಿಸಿತ್ತು.  ಅದರ ವಿರುದ್ಧ ಎನ್‌ಎಚ್‌ಎಐ ಮತ್ತು ಕೇಂದ್ರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಸದ್ಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು ಅಧಿಸೂಚನೆಗಳಿಗೆ ಅಸ್ತು ಎಂದಿದ್ದು, ಮದ್ರಾಸ್‌ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ಆದೇಶದ ಪ್ರಕಾರ, ‘ ರಾಜ್ಯದೊಳಗಿನ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು  (ಅದು ಪ್ರಸ್ತುತ ಇರುವ ರಸ್ತೆ ಮತ್ತು ಹೆದ್ದಾರಿಯ ಹೊರತಾದ ಭೂಮಿ) ಸ್ವಾಧೀನಪಡಿಸಿಕೊಳ್ಳಲು, ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅರ್ಹವಾಗಿದೆ’ ಎಂದು ಪೀಠ ಉಲ್ಲೇಖಿಸಿದೆ.

“ಕೇಂದ್ರ ಸರ್ಕಾರವು, ಸಂಬಂಧಪಟ್ಟ ಪ್ರದೇಶದ ಜನರ ಅಭಿವೃದ್ಧಿಗಾಗಿ ಸಂವಿಧಾನದ ಭಾಗ IV ರ ಅಡಿಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು ಮುಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಪ್ರದೇಶದಲ್ಲಿ, ಸ್ಥಳೀಯ ಜನರಿಗೆ ಸಾಕಷ್ಟು ಜೀವನೋಪಾಯವನ್ನು ಒದಗಿಸುವುದು, ಹೊಸ ಆರ್ಥಿಕ ಅವಕಾಶಗಳನ್ನು ಒದಗಿಸುವುದು ಮತ್ತು ಆ ಪ್ರದೇಶದ ಜನರನ್ನು ಸಬಲೀಕರಣಗೊಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

“ರಾಜ್ಯದ ಯಾವುದೇ ಭಾಗದಲ್ಲಿ ಹೆದ್ದಾರಿಯ ಲಭ್ಯತೆಯು ಸುಸ್ಥಿರ ಅಭಿವೃದ್ಧಿಗೆ ಮತ್ತು ಮಾನವ ಯೋಗಕ್ಷೇಮದ ಒಟ್ಟಾರೆ ವರ್ಧನೆಗೆ ದಾರಿ ಮಾಡಿಕೊಡುತ್ತದೆ, ಅಲ್ಲಿನ ನಿವಾಸಿಗಳಿಗೆ ಯೋಗ್ಯವಾದ ಜೀವನ ನಡೆಸಲು ಅನುಕೂಲವಾಗುವುದು’ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಎನ್‌ಎಚ್‌ಎಐ ಕಾಯ್ದೆಯ ಸೆಕ್ಷನ್ 3 (ಎ) ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಸರ ಇಲಾಖೆ ಅನುಮತಿಯ ನಂತರವೇ ಮಾಡಬಹುದಿತ್ತು ಎಂಬ ಕಾರಣಕ್ಕೆ ಈ ಯೋಜನೆಗೆ ತಡೆ ಒಡ್ಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕಾಗಿ ಕೇಂದ್ರವು ಕೃಷಿಯೋಗ್ಯ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮೊದಲಿನಿಂದಲೂ ಇರುವ ರಾಜ್ಯ ಹೆದ್ದಾರಿಯನ್ನು ಮಾತ್ರ ಹಾಗೆ ಘೋಷಿಸಬಹುದು ಎಂದು ವಾದಿಸಲಾಗಿತ್ತು.

ಯೋಜನೆಗಾಗಿ ಸೆಕ್ಷನ್ 3 (ಎ) ಅಡಿಯಲ್ಲಿ ಅಧಿಸೂಚನೆ ಹೊರಡಿಸಲು ಪರಿಸರ ಇಲಾಖೆಯಿಂದ ಅನುಮತಿ ಅಗತ್ಯ ಎಂಬ ವಾದವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಏಕೆಂದರೆ ಯೋಜನೆ ಮಾರ್ಗವು 10 ಕಿ.ಮೀ ಅರಣ್ಯ ಪ್ರದೇಶದ ಮೂಲಕ ಹಾದುಹೋಗಲಿದೆ. ಆದರೆ ಸುಪ್ರೀಂಕೋರ್ಟ್, ‘1956ರ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಅನ್ವಯ, ಯೋಜನೆಗರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿಲ್ಲ’ ಎಂದಿದೆ.

ಚೆನ್ನೈ-ಸೇಲಂ ಹೆದ್ದಾರಿ ಯೋಜನೆ: 

ಚೆನ್ನೈ-ಸೇಲಂ ಹೆದ್ದಾರಿ ಯೋಜನೆಯು, 10,000 ಕೋಟಿ ರೂಪಾಯಿ ವೆಚ್ಚದಲ್ಲಿ, 15 ಹಂತಗಳ ಭರತ್ಮಾಲಾ ಪರಿಯೋಜನಾ ಯೋಜನೆಯಾಗಿದೆ. ಈ ಯೋಜನೆಯು ರಾಜಧಾನಿ ಚೆನ್ನೈನಿಂದ ಸೇಲಂಗೆ ಆರು ಗಂಟೆಗಳ ಪ್ರಯಾಣವನ್ನು ಸುಮಾರು ಎರಡೂವರೆ ಗಂಟೆಗಳವರೆಗೆ ಕಡಿತಗೊಳಿಸುತ್ತದೆ.  277.30 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ 2018ರಲ್ಲಿ ಒಪ್ಪಿಗೆ ನೀಡಲಾಗಿತ್ತು.

ಯೋಜನೆಗೆ ವಿರೋಧವೇಕೆ…?

ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಆರಂಭವಾಗುತ್ತಿದ್ದಂತೆ ಸೇಲಂ ಮತ್ತು ಸ್ಥಳೀಯ ಪ್ರದೇಶದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಸೇಲಂನ ರೈತರು ತಮ್ಮ ಕೃಷಿ ಭೂಮಿಯನ್ನು ಯೋಜನೆಗಾಗಿ ತೆಗೆದುಕೊಳ್ಳುವುದನ್ನು ವಿರೋಧಿಸಿದರು. ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿತ್ತು.

PC: E_LakshmiNarayanan

ಜೊತೆಗೆ ಅರಣ್ಯ ಭೂಮಿ ಮತ್ತು ಜಲಮೂಲಗಳು ಸಹ ಯೋಜನೆಯ ಮಾರ್ಗದಲ್ಲಿ ಇದ್ದ ಕಾರಣ ರಾಜ್ಯದ ಪರಿಸರವಾದಿಗಳು ಕೂಡ ಈ ಯೋಜನೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು. ವ್ಯಾಪಕ ವಿರೋಧ ವ್ಯಕ್ತಪಡಿಸಿದ 35 ಭೂಮಾಲೀಕರು ಮತ್ತು ಪಿಎಂಕೆ (Pattali Makkal Katchi) ಯುವ ವಿಭಾಗದ ಮುಖಂಡ ಅನ್ಬುಮಾನಿ ರಾಮದಾಸ್ ಈ ಯೋಜನೆಯ ವಿರುದ್ಧ ಮದ್ರಾಸ್ ಹೈಕೋರ್ಟ್‌ಗೆ ತೆರಳಿದರು.

ಏಪ್ರಿಲ್ 8, 2019 ರಂದು ಮದ್ರಾಸ್ ಹೈಕೋರ್ಟ್ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿದ್ದ ಭೂಸ್ವಾಧೀನವನ್ನು ರದ್ದುಗೊಳಿಸಿತು. ಹೈಕೋರ್ಟ್‌ನ ಆದೇಶದಿಂದ ಈ ಪ್ರದೇಶದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಆದರೆ, ಸುಪ್ರೀಂಕೋರ್ಟ್ ಈಗ ಮದ್ರಾಸ್ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದಿದೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...