Homeಮುಖಪುಟಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕಾಯ್ದೆ 1956 ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಭರತ್ಮಾಲಾ ಪರಿಯೋಜನಾದ- ಮೊದಲ ಹಂತದ ಯೋಜನೆಯ ಭಾಗವಾಗಿ ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು.

ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಮದ್ರಾಸ್‌ ಹೈಕೋರ್ಟ್ 2019ರಲ್ಲಿ ರದ್ದುಪಡಿಸಿತ್ತು.  ಅದರ ವಿರುದ್ಧ ಎನ್‌ಎಚ್‌ಎಐ ಮತ್ತು ಕೇಂದ್ರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಸದ್ಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು ಅಧಿಸೂಚನೆಗಳಿಗೆ ಅಸ್ತು ಎಂದಿದ್ದು, ಮದ್ರಾಸ್‌ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ಆದೇಶದ ಪ್ರಕಾರ, ‘ ರಾಜ್ಯದೊಳಗಿನ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು  (ಅದು ಪ್ರಸ್ತುತ ಇರುವ ರಸ್ತೆ ಮತ್ತು ಹೆದ್ದಾರಿಯ ಹೊರತಾದ ಭೂಮಿ) ಸ್ವಾಧೀನಪಡಿಸಿಕೊಳ್ಳಲು, ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅರ್ಹವಾಗಿದೆ’ ಎಂದು ಪೀಠ ಉಲ್ಲೇಖಿಸಿದೆ.

“ಕೇಂದ್ರ ಸರ್ಕಾರವು, ಸಂಬಂಧಪಟ್ಟ ಪ್ರದೇಶದ ಜನರ ಅಭಿವೃದ್ಧಿಗಾಗಿ ಸಂವಿಧಾನದ ಭಾಗ IV ರ ಅಡಿಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು ಮುಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಪ್ರದೇಶದಲ್ಲಿ, ಸ್ಥಳೀಯ ಜನರಿಗೆ ಸಾಕಷ್ಟು ಜೀವನೋಪಾಯವನ್ನು ಒದಗಿಸುವುದು, ಹೊಸ ಆರ್ಥಿಕ ಅವಕಾಶಗಳನ್ನು ಒದಗಿಸುವುದು ಮತ್ತು ಆ ಪ್ರದೇಶದ ಜನರನ್ನು ಸಬಲೀಕರಣಗೊಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

“ರಾಜ್ಯದ ಯಾವುದೇ ಭಾಗದಲ್ಲಿ ಹೆದ್ದಾರಿಯ ಲಭ್ಯತೆಯು ಸುಸ್ಥಿರ ಅಭಿವೃದ್ಧಿಗೆ ಮತ್ತು ಮಾನವ ಯೋಗಕ್ಷೇಮದ ಒಟ್ಟಾರೆ ವರ್ಧನೆಗೆ ದಾರಿ ಮಾಡಿಕೊಡುತ್ತದೆ, ಅಲ್ಲಿನ ನಿವಾಸಿಗಳಿಗೆ ಯೋಗ್ಯವಾದ ಜೀವನ ನಡೆಸಲು ಅನುಕೂಲವಾಗುವುದು’ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಎನ್‌ಎಚ್‌ಎಐ ಕಾಯ್ದೆಯ ಸೆಕ್ಷನ್ 3 (ಎ) ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಸರ ಇಲಾಖೆ ಅನುಮತಿಯ ನಂತರವೇ ಮಾಡಬಹುದಿತ್ತು ಎಂಬ ಕಾರಣಕ್ಕೆ ಈ ಯೋಜನೆಗೆ ತಡೆ ಒಡ್ಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕಾಗಿ ಕೇಂದ್ರವು ಕೃಷಿಯೋಗ್ಯ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮೊದಲಿನಿಂದಲೂ ಇರುವ ರಾಜ್ಯ ಹೆದ್ದಾರಿಯನ್ನು ಮಾತ್ರ ಹಾಗೆ ಘೋಷಿಸಬಹುದು ಎಂದು ವಾದಿಸಲಾಗಿತ್ತು.

ಯೋಜನೆಗಾಗಿ ಸೆಕ್ಷನ್ 3 (ಎ) ಅಡಿಯಲ್ಲಿ ಅಧಿಸೂಚನೆ ಹೊರಡಿಸಲು ಪರಿಸರ ಇಲಾಖೆಯಿಂದ ಅನುಮತಿ ಅಗತ್ಯ ಎಂಬ ವಾದವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಏಕೆಂದರೆ ಯೋಜನೆ ಮಾರ್ಗವು 10 ಕಿ.ಮೀ ಅರಣ್ಯ ಪ್ರದೇಶದ ಮೂಲಕ ಹಾದುಹೋಗಲಿದೆ. ಆದರೆ ಸುಪ್ರೀಂಕೋರ್ಟ್, ‘1956ರ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಅನ್ವಯ, ಯೋಜನೆಗರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿಲ್ಲ’ ಎಂದಿದೆ.

ಚೆನ್ನೈ-ಸೇಲಂ ಹೆದ್ದಾರಿ ಯೋಜನೆ: 

ಚೆನ್ನೈ-ಸೇಲಂ ಹೆದ್ದಾರಿ ಯೋಜನೆಯು, 10,000 ಕೋಟಿ ರೂಪಾಯಿ ವೆಚ್ಚದಲ್ಲಿ, 15 ಹಂತಗಳ ಭರತ್ಮಾಲಾ ಪರಿಯೋಜನಾ ಯೋಜನೆಯಾಗಿದೆ. ಈ ಯೋಜನೆಯು ರಾಜಧಾನಿ ಚೆನ್ನೈನಿಂದ ಸೇಲಂಗೆ ಆರು ಗಂಟೆಗಳ ಪ್ರಯಾಣವನ್ನು ಸುಮಾರು ಎರಡೂವರೆ ಗಂಟೆಗಳವರೆಗೆ ಕಡಿತಗೊಳಿಸುತ್ತದೆ.  277.30 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ 2018ರಲ್ಲಿ ಒಪ್ಪಿಗೆ ನೀಡಲಾಗಿತ್ತು.

ಯೋಜನೆಗೆ ವಿರೋಧವೇಕೆ…?

ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಆರಂಭವಾಗುತ್ತಿದ್ದಂತೆ ಸೇಲಂ ಮತ್ತು ಸ್ಥಳೀಯ ಪ್ರದೇಶದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಸೇಲಂನ ರೈತರು ತಮ್ಮ ಕೃಷಿ ಭೂಮಿಯನ್ನು ಯೋಜನೆಗಾಗಿ ತೆಗೆದುಕೊಳ್ಳುವುದನ್ನು ವಿರೋಧಿಸಿದರು. ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿತ್ತು.

PC: E_LakshmiNarayanan

ಜೊತೆಗೆ ಅರಣ್ಯ ಭೂಮಿ ಮತ್ತು ಜಲಮೂಲಗಳು ಸಹ ಯೋಜನೆಯ ಮಾರ್ಗದಲ್ಲಿ ಇದ್ದ ಕಾರಣ ರಾಜ್ಯದ ಪರಿಸರವಾದಿಗಳು ಕೂಡ ಈ ಯೋಜನೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು. ವ್ಯಾಪಕ ವಿರೋಧ ವ್ಯಕ್ತಪಡಿಸಿದ 35 ಭೂಮಾಲೀಕರು ಮತ್ತು ಪಿಎಂಕೆ (Pattali Makkal Katchi) ಯುವ ವಿಭಾಗದ ಮುಖಂಡ ಅನ್ಬುಮಾನಿ ರಾಮದಾಸ್ ಈ ಯೋಜನೆಯ ವಿರುದ್ಧ ಮದ್ರಾಸ್ ಹೈಕೋರ್ಟ್‌ಗೆ ತೆರಳಿದರು.

ಏಪ್ರಿಲ್ 8, 2019 ರಂದು ಮದ್ರಾಸ್ ಹೈಕೋರ್ಟ್ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿದ್ದ ಭೂಸ್ವಾಧೀನವನ್ನು ರದ್ದುಗೊಳಿಸಿತು. ಹೈಕೋರ್ಟ್‌ನ ಆದೇಶದಿಂದ ಈ ಪ್ರದೇಶದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಆದರೆ, ಸುಪ್ರೀಂಕೋರ್ಟ್ ಈಗ ಮದ್ರಾಸ್ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದಿದೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...