Homeಮುಖಪುಟಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕಾಯ್ದೆ 1956 ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಭರತ್ಮಾಲಾ ಪರಿಯೋಜನಾದ- ಮೊದಲ ಹಂತದ ಯೋಜನೆಯ ಭಾಗವಾಗಿ ಎಂಟು ಪಥಗಳ ಚೆನ್ನೈ-ಕೃಷ್ಣಗಿರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು.

ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಮದ್ರಾಸ್‌ ಹೈಕೋರ್ಟ್ 2019ರಲ್ಲಿ ರದ್ದುಪಡಿಸಿತ್ತು.  ಅದರ ವಿರುದ್ಧ ಎನ್‌ಎಚ್‌ಎಐ ಮತ್ತು ಕೇಂದ್ರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಸದ್ಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು ಅಧಿಸೂಚನೆಗಳಿಗೆ ಅಸ್ತು ಎಂದಿದ್ದು, ಮದ್ರಾಸ್‌ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ಆದೇಶದ ಪ್ರಕಾರ, ‘ ರಾಜ್ಯದೊಳಗಿನ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು  (ಅದು ಪ್ರಸ್ತುತ ಇರುವ ರಸ್ತೆ ಮತ್ತು ಹೆದ್ದಾರಿಯ ಹೊರತಾದ ಭೂಮಿ) ಸ್ವಾಧೀನಪಡಿಸಿಕೊಳ್ಳಲು, ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅರ್ಹವಾಗಿದೆ’ ಎಂದು ಪೀಠ ಉಲ್ಲೇಖಿಸಿದೆ.

“ಕೇಂದ್ರ ಸರ್ಕಾರವು, ಸಂಬಂಧಪಟ್ಟ ಪ್ರದೇಶದ ಜನರ ಅಭಿವೃದ್ಧಿಗಾಗಿ ಸಂವಿಧಾನದ ಭಾಗ IV ರ ಅಡಿಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲು ಮುಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಪ್ರದೇಶದಲ್ಲಿ, ಸ್ಥಳೀಯ ಜನರಿಗೆ ಸಾಕಷ್ಟು ಜೀವನೋಪಾಯವನ್ನು ಒದಗಿಸುವುದು, ಹೊಸ ಆರ್ಥಿಕ ಅವಕಾಶಗಳನ್ನು ಒದಗಿಸುವುದು ಮತ್ತು ಆ ಪ್ರದೇಶದ ಜನರನ್ನು ಸಬಲೀಕರಣಗೊಳಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

“ರಾಜ್ಯದ ಯಾವುದೇ ಭಾಗದಲ್ಲಿ ಹೆದ್ದಾರಿಯ ಲಭ್ಯತೆಯು ಸುಸ್ಥಿರ ಅಭಿವೃದ್ಧಿಗೆ ಮತ್ತು ಮಾನವ ಯೋಗಕ್ಷೇಮದ ಒಟ್ಟಾರೆ ವರ್ಧನೆಗೆ ದಾರಿ ಮಾಡಿಕೊಡುತ್ತದೆ, ಅಲ್ಲಿನ ನಿವಾಸಿಗಳಿಗೆ ಯೋಗ್ಯವಾದ ಜೀವನ ನಡೆಸಲು ಅನುಕೂಲವಾಗುವುದು’ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಎನ್‌ಎಚ್‌ಎಐ ಕಾಯ್ದೆಯ ಸೆಕ್ಷನ್ 3 (ಎ) ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಸರ ಇಲಾಖೆ ಅನುಮತಿಯ ನಂತರವೇ ಮಾಡಬಹುದಿತ್ತು ಎಂಬ ಕಾರಣಕ್ಕೆ ಈ ಯೋಜನೆಗೆ ತಡೆ ಒಡ್ಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕಾಗಿ ಕೇಂದ್ರವು ಕೃಷಿಯೋಗ್ಯ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಮೊದಲಿನಿಂದಲೂ ಇರುವ ರಾಜ್ಯ ಹೆದ್ದಾರಿಯನ್ನು ಮಾತ್ರ ಹಾಗೆ ಘೋಷಿಸಬಹುದು ಎಂದು ವಾದಿಸಲಾಗಿತ್ತು.

ಯೋಜನೆಗಾಗಿ ಸೆಕ್ಷನ್ 3 (ಎ) ಅಡಿಯಲ್ಲಿ ಅಧಿಸೂಚನೆ ಹೊರಡಿಸಲು ಪರಿಸರ ಇಲಾಖೆಯಿಂದ ಅನುಮತಿ ಅಗತ್ಯ ಎಂಬ ವಾದವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಏಕೆಂದರೆ ಯೋಜನೆ ಮಾರ್ಗವು 10 ಕಿ.ಮೀ ಅರಣ್ಯ ಪ್ರದೇಶದ ಮೂಲಕ ಹಾದುಹೋಗಲಿದೆ. ಆದರೆ ಸುಪ್ರೀಂಕೋರ್ಟ್, ‘1956ರ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಅನ್ವಯ, ಯೋಜನೆಗರ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿಲ್ಲ’ ಎಂದಿದೆ.

ಚೆನ್ನೈ-ಸೇಲಂ ಹೆದ್ದಾರಿ ಯೋಜನೆ: 

ಚೆನ್ನೈ-ಸೇಲಂ ಹೆದ್ದಾರಿ ಯೋಜನೆಯು, 10,000 ಕೋಟಿ ರೂಪಾಯಿ ವೆಚ್ಚದಲ್ಲಿ, 15 ಹಂತಗಳ ಭರತ್ಮಾಲಾ ಪರಿಯೋಜನಾ ಯೋಜನೆಯಾಗಿದೆ. ಈ ಯೋಜನೆಯು ರಾಜಧಾನಿ ಚೆನ್ನೈನಿಂದ ಸೇಲಂಗೆ ಆರು ಗಂಟೆಗಳ ಪ್ರಯಾಣವನ್ನು ಸುಮಾರು ಎರಡೂವರೆ ಗಂಟೆಗಳವರೆಗೆ ಕಡಿತಗೊಳಿಸುತ್ತದೆ.  277.30 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ 2018ರಲ್ಲಿ ಒಪ್ಪಿಗೆ ನೀಡಲಾಗಿತ್ತು.

ಯೋಜನೆಗೆ ವಿರೋಧವೇಕೆ…?

ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಆರಂಭವಾಗುತ್ತಿದ್ದಂತೆ ಸೇಲಂ ಮತ್ತು ಸ್ಥಳೀಯ ಪ್ರದೇಶದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಸೇಲಂನ ರೈತರು ತಮ್ಮ ಕೃಷಿ ಭೂಮಿಯನ್ನು ಯೋಜನೆಗಾಗಿ ತೆಗೆದುಕೊಳ್ಳುವುದನ್ನು ವಿರೋಧಿಸಿದರು. ಈ ಯೋಜನೆಗಾಗಿ ಸುಮಾರು 5,000 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಲಾಗಿತ್ತು.

PC: E_LakshmiNarayanan

ಜೊತೆಗೆ ಅರಣ್ಯ ಭೂಮಿ ಮತ್ತು ಜಲಮೂಲಗಳು ಸಹ ಯೋಜನೆಯ ಮಾರ್ಗದಲ್ಲಿ ಇದ್ದ ಕಾರಣ ರಾಜ್ಯದ ಪರಿಸರವಾದಿಗಳು ಕೂಡ ಈ ಯೋಜನೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು. ವ್ಯಾಪಕ ವಿರೋಧ ವ್ಯಕ್ತಪಡಿಸಿದ 35 ಭೂಮಾಲೀಕರು ಮತ್ತು ಪಿಎಂಕೆ (Pattali Makkal Katchi) ಯುವ ವಿಭಾಗದ ಮುಖಂಡ ಅನ್ಬುಮಾನಿ ರಾಮದಾಸ್ ಈ ಯೋಜನೆಯ ವಿರುದ್ಧ ಮದ್ರಾಸ್ ಹೈಕೋರ್ಟ್‌ಗೆ ತೆರಳಿದರು.

ಏಪ್ರಿಲ್ 8, 2019 ರಂದು ಮದ್ರಾಸ್ ಹೈಕೋರ್ಟ್ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿದ್ದ ಭೂಸ್ವಾಧೀನವನ್ನು ರದ್ದುಗೊಳಿಸಿತು. ಹೈಕೋರ್ಟ್‌ನ ಆದೇಶದಿಂದ ಈ ಪ್ರದೇಶದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಆದರೆ, ಸುಪ್ರೀಂಕೋರ್ಟ್ ಈಗ ಮದ್ರಾಸ್ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಅಥವಾ ಹೊಸ ಹೆದ್ದಾರಿ ನಿರ್ಮಿಸಲು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಅಧಿಕಾರ ಇದೆ ಎಂದಿದೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...