HomeUncategorizedರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಸಿಬಿಐ ಅನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಎಂಟು ರಾಜ್ಯಗಳು ಆರೋಪಿಸಿವೆ

- Advertisement -
- Advertisement -

ರಾಜ್ಯಗಳ ಅನುಮತಿಯಿಲ್ಲದೆ ಕೇಂದ್ರ ಸರ್ಕಾರವು ತಾನಾಗಿಯೇ ಕೇಂದ್ರೀಯ ತನಿಖಾ ದಳದ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಮತ್ತು ಕೇಂದ್ರ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಸಿಬಿಐ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜಸ್ಥಾನ, ಬಂಗಾಳ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಛತ್ತೀಸ್‌ಗಢ, ಪಂಜಾಬ್ ಮತ್ತು ಮಿಜೋರಾಂ ಎಂಟು ರಾಜ್ಯಗಳು ತಮ್ಮ ರಾಜ್ಯಗಳಲ್ಲಿನ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿರುವ ’ಸಾಮಾನ್ಯ ಒಪ್ಪಿಗೆ’ಯನ್ನು ರದ್ದುಪಡಿಸಿವೆ.

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಯನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಆರೋಪಿಸಿ ಈ ಎಂಟು ರಾಜ್ಯಗಳು ಈ ಕ್ರಮ ಕೈಗೊಂಡಿವೆ.

“ಕಾನೂನಿನ ಪ್ರಕಾರ, ರಾಜ್ಯದ ಒಪ್ಪಿಗೆ ಅತ್ಯಗತ್ಯ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ”ಎಂದು ಎ.ಎಂ. ಖಾನ್ವಿಲ್ಕರ್ ಮತ್ತು ಬಿ.ಆರ್. ಗವಾಯಿ ನ್ಯಾಯಮೂರ್ತಿಗಳ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ ಹಿಂಪಡೆದ ಕೇರಳ ಸಚಿವ ಸಂಪುಟ

ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳು ಸಲ್ಲಿಸಿದ ಅರ್ಜಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ ಸುಪ್ರೀಂ ಕೋರ್ಟ್ ಆರೋಪಿಗಳ ಮನವಿ ತಿರಸ್ಕರಿಸಿದೆ ಜೊತೆಗೆ ಉತ್ತರ ಪ್ರದೇಶವು ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡಿದೆ ಎಂದು ತಿಳಿಸಿದೆ.

ಆರಂಭದಲ್ಲಿ, ಅಂದಿನ ಉತ್ತರ ಪ್ರದೇಶ ಸರ್ಕಾರವು ಸಿಬಿಐನ ವ್ಯಾಪ್ತಿಯನ್ನು ರಾಜ್ಯದೊಳಗೆ ಅನುಮತಿಸುವ ಸಾಮಾನ್ಯ ಒಪ್ಪಿಗೆಯನ್ನು ನೀಡಿದ ನಂತರ ತನಿಖೆ ಪ್ರಾರಂಭವಾಯಿತು.

ಈ ಪ್ರಕರಣದಲ್ಲಿ ಇಬ್ಬರು ರಾಜ್ಯ ಅಧಿಕಾರಿಗಳು ಮತ್ತು ಹಲವಾರು ಖಾಸಗಿ ವ್ಯಕ್ತಿಗಳ ಹೆಸರನ್ನು ಇಡಲಾಗಿದೆ. ಸರ್ಕಾರಿ ನೌಕರರು ತಮ್ಮ ವಿರುದ್ಧದ ಪ್ರಕರಣಕ್ಕೆ ಸಾಮಾನ್ಯ ಒಪ್ಪಿಗೆ ಸಾಕಾಗುವುದಿಲ್ಲ ಮತ್ತು ವಿಶೇಷ ಅನುಮತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು. ಆದರೂ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

“ಈ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದಿರುವ ಬಗ್ಗೆ ಹೈಕೋರ್ಟ್‌ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇನ್ನು, ನ್ಯಾಯಮೂರ್ತಿಗಳು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆಗೂ ಉಲ್ಲೇಖಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಕೇಂದ್ರ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳನ್ನು ಮೀರಿ ಡಿಎಸ್‌ಪಿಇ (ಸಿಬಿಐ) ಸದಸ್ಯರ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ಒಂದು ರಾಜ್ಯಕ್ಕೆ ವಿಸ್ತರಿಸಲು ಅನುವು ಮಾಡಿಕೊಡಬಹುದು. ಆದರೆ, ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಆ ರಾಜ್ಯವು ಅಂತಹ ವಿಸ್ತರಣೆಗೆ ತನ್ನ ಒಪ್ಪಿಗೆಯನ್ನು ನೀಡದ ಹೊರತು ಅದನ್ನು ಅನುಮತಿಸಲಾಗುವುದಿಲ್ಲ. ಇದು ಸಂವಿಧಾನದ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...