HomeUncategorizedರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಸಿಬಿಐ ಅನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಎಂಟು ರಾಜ್ಯಗಳು ಆರೋಪಿಸಿವೆ

- Advertisement -
- Advertisement -

ರಾಜ್ಯಗಳ ಅನುಮತಿಯಿಲ್ಲದೆ ಕೇಂದ್ರ ಸರ್ಕಾರವು ತಾನಾಗಿಯೇ ಕೇಂದ್ರೀಯ ತನಿಖಾ ದಳದ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಮತ್ತು ಕೇಂದ್ರ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಸಿಬಿಐ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜಸ್ಥಾನ, ಬಂಗಾಳ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಛತ್ತೀಸ್‌ಗಢ, ಪಂಜಾಬ್ ಮತ್ತು ಮಿಜೋರಾಂ ಎಂಟು ರಾಜ್ಯಗಳು ತಮ್ಮ ರಾಜ್ಯಗಳಲ್ಲಿನ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿರುವ ’ಸಾಮಾನ್ಯ ಒಪ್ಪಿಗೆ’ಯನ್ನು ರದ್ದುಪಡಿಸಿವೆ.

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಯನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಆರೋಪಿಸಿ ಈ ಎಂಟು ರಾಜ್ಯಗಳು ಈ ಕ್ರಮ ಕೈಗೊಂಡಿವೆ.

“ಕಾನೂನಿನ ಪ್ರಕಾರ, ರಾಜ್ಯದ ಒಪ್ಪಿಗೆ ಅತ್ಯಗತ್ಯ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ”ಎಂದು ಎ.ಎಂ. ಖಾನ್ವಿಲ್ಕರ್ ಮತ್ತು ಬಿ.ಆರ್. ಗವಾಯಿ ನ್ಯಾಯಮೂರ್ತಿಗಳ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ ಹಿಂಪಡೆದ ಕೇರಳ ಸಚಿವ ಸಂಪುಟ

ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳು ಸಲ್ಲಿಸಿದ ಅರ್ಜಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ ಸುಪ್ರೀಂ ಕೋರ್ಟ್ ಆರೋಪಿಗಳ ಮನವಿ ತಿರಸ್ಕರಿಸಿದೆ ಜೊತೆಗೆ ಉತ್ತರ ಪ್ರದೇಶವು ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡಿದೆ ಎಂದು ತಿಳಿಸಿದೆ.

ಆರಂಭದಲ್ಲಿ, ಅಂದಿನ ಉತ್ತರ ಪ್ರದೇಶ ಸರ್ಕಾರವು ಸಿಬಿಐನ ವ್ಯಾಪ್ತಿಯನ್ನು ರಾಜ್ಯದೊಳಗೆ ಅನುಮತಿಸುವ ಸಾಮಾನ್ಯ ಒಪ್ಪಿಗೆಯನ್ನು ನೀಡಿದ ನಂತರ ತನಿಖೆ ಪ್ರಾರಂಭವಾಯಿತು.

ಈ ಪ್ರಕರಣದಲ್ಲಿ ಇಬ್ಬರು ರಾಜ್ಯ ಅಧಿಕಾರಿಗಳು ಮತ್ತು ಹಲವಾರು ಖಾಸಗಿ ವ್ಯಕ್ತಿಗಳ ಹೆಸರನ್ನು ಇಡಲಾಗಿದೆ. ಸರ್ಕಾರಿ ನೌಕರರು ತಮ್ಮ ವಿರುದ್ಧದ ಪ್ರಕರಣಕ್ಕೆ ಸಾಮಾನ್ಯ ಒಪ್ಪಿಗೆ ಸಾಕಾಗುವುದಿಲ್ಲ ಮತ್ತು ವಿಶೇಷ ಅನುಮತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು. ಆದರೂ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

“ಈ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದಿರುವ ಬಗ್ಗೆ ಹೈಕೋರ್ಟ್‌ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇನ್ನು, ನ್ಯಾಯಮೂರ್ತಿಗಳು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆಗೂ ಉಲ್ಲೇಖಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಕೇಂದ್ರ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳನ್ನು ಮೀರಿ ಡಿಎಸ್‌ಪಿಇ (ಸಿಬಿಐ) ಸದಸ್ಯರ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ಒಂದು ರಾಜ್ಯಕ್ಕೆ ವಿಸ್ತರಿಸಲು ಅನುವು ಮಾಡಿಕೊಡಬಹುದು. ಆದರೆ, ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಆ ರಾಜ್ಯವು ಅಂತಹ ವಿಸ್ತರಣೆಗೆ ತನ್ನ ಒಪ್ಪಿಗೆಯನ್ನು ನೀಡದ ಹೊರತು ಅದನ್ನು ಅನುಮತಿಸಲಾಗುವುದಿಲ್ಲ. ಇದು ಸಂವಿಧಾನದ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...