HomeUncategorizedರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ರಾಜ್ಯಗಳ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ಅಧಿಕಾರ ವ್ಯಾಪ್ತಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಸಿಬಿಐ ಅನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಎಂಟು ರಾಜ್ಯಗಳು ಆರೋಪಿಸಿವೆ

- Advertisement -
- Advertisement -

ರಾಜ್ಯಗಳ ಅನುಮತಿಯಿಲ್ಲದೆ ಕೇಂದ್ರ ಸರ್ಕಾರವು ತಾನಾಗಿಯೇ ಕೇಂದ್ರೀಯ ತನಿಖಾ ದಳದ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಮತ್ತು ಕೇಂದ್ರ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಸಿಬಿಐ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜಸ್ಥಾನ, ಬಂಗಾಳ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಛತ್ತೀಸ್‌ಗಢ, ಪಂಜಾಬ್ ಮತ್ತು ಮಿಜೋರಾಂ ಎಂಟು ರಾಜ್ಯಗಳು ತಮ್ಮ ರಾಜ್ಯಗಳಲ್ಲಿನ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿರುವ ’ಸಾಮಾನ್ಯ ಒಪ್ಪಿಗೆ’ಯನ್ನು ರದ್ದುಪಡಿಸಿವೆ.

ವಿರೋಧ ಪಕ್ಷದ ನಾಯಕರು ಮತ್ತು ಸರ್ಕಾರದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಯನ್ನು ಕೇಂದ್ರ ಸರ್ಕಾರ ದಾಳವಾಗಿ ಬಳಸುತ್ತಿದೆ ಎಂದು ಆರೋಪಿಸಿ ಈ ಎಂಟು ರಾಜ್ಯಗಳು ಈ ಕ್ರಮ ಕೈಗೊಂಡಿವೆ.

“ಕಾನೂನಿನ ಪ್ರಕಾರ, ರಾಜ್ಯದ ಒಪ್ಪಿಗೆ ಅತ್ಯಗತ್ಯ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ”ಎಂದು ಎ.ಎಂ. ಖಾನ್ವಿಲ್ಕರ್ ಮತ್ತು ಬಿ.ಆರ್. ಗವಾಯಿ ನ್ಯಾಯಮೂರ್ತಿಗಳ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ ಹಿಂಪಡೆದ ಕೇರಳ ಸಚಿವ ಸಂಪುಟ

ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳು ಸಲ್ಲಿಸಿದ ಅರ್ಜಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಮೊದಲು ರಾಜ್ಯ ಸರ್ಕಾರದ ಅನುಮೋದನೆ ಪಡೆಯಲಾಗಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ ಸುಪ್ರೀಂ ಕೋರ್ಟ್ ಆರೋಪಿಗಳ ಮನವಿ ತಿರಸ್ಕರಿಸಿದೆ ಜೊತೆಗೆ ಉತ್ತರ ಪ್ರದೇಶವು ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡಿದೆ ಎಂದು ತಿಳಿಸಿದೆ.

ಆರಂಭದಲ್ಲಿ, ಅಂದಿನ ಉತ್ತರ ಪ್ರದೇಶ ಸರ್ಕಾರವು ಸಿಬಿಐನ ವ್ಯಾಪ್ತಿಯನ್ನು ರಾಜ್ಯದೊಳಗೆ ಅನುಮತಿಸುವ ಸಾಮಾನ್ಯ ಒಪ್ಪಿಗೆಯನ್ನು ನೀಡಿದ ನಂತರ ತನಿಖೆ ಪ್ರಾರಂಭವಾಯಿತು.

ಈ ಪ್ರಕರಣದಲ್ಲಿ ಇಬ್ಬರು ರಾಜ್ಯ ಅಧಿಕಾರಿಗಳು ಮತ್ತು ಹಲವಾರು ಖಾಸಗಿ ವ್ಯಕ್ತಿಗಳ ಹೆಸರನ್ನು ಇಡಲಾಗಿದೆ. ಸರ್ಕಾರಿ ನೌಕರರು ತಮ್ಮ ವಿರುದ್ಧದ ಪ್ರಕರಣಕ್ಕೆ ಸಾಮಾನ್ಯ ಒಪ್ಪಿಗೆ ಸಾಕಾಗುವುದಿಲ್ಲ ಮತ್ತು ವಿಶೇಷ ಅನುಮತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು. ಆದರೂ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

“ಈ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದಿರುವ ಬಗ್ಗೆ ಹೈಕೋರ್ಟ್‌ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇನ್ನು, ನ್ಯಾಯಮೂರ್ತಿಗಳು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆಗೂ ಉಲ್ಲೇಖಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಕೇಂದ್ರ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳನ್ನು ಮೀರಿ ಡಿಎಸ್‌ಪಿಇ (ಸಿಬಿಐ) ಸದಸ್ಯರ ಅಧಿಕಾರ ಮತ್ತು ಅಧಿಕಾರ ವ್ಯಾಪ್ತಿಯನ್ನು ಒಂದು ರಾಜ್ಯಕ್ಕೆ ವಿಸ್ತರಿಸಲು ಅನುವು ಮಾಡಿಕೊಡಬಹುದು. ಆದರೆ, ಡಿಎಸ್‌ಪಿಇ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಆ ರಾಜ್ಯವು ಅಂತಹ ವಿಸ್ತರಣೆಗೆ ತನ್ನ ಒಪ್ಪಿಗೆಯನ್ನು ನೀಡದ ಹೊರತು ಅದನ್ನು ಅನುಮತಿಸಲಾಗುವುದಿಲ್ಲ. ಇದು ಸಂವಿಧಾನದ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...