HomeಮುಖಪುಟBSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

BSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿದ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರು, 2024ರ ಮೇ 20ರಂದು ಮಾಹಿತಿ ಸೋರಿಕೆಯಾಗಿದೆ ಎಂದಿದ್ದಾರೆ.

ಸೈಬರ್ ಭದ್ರತಾ ಘಟನೆಗಳನ್ನು ನಿಭಾಯಿಸುವ ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್), ಬಿಎಸ್‌ಎನ್‌ಎಲ್‌ನ ಫೈಲ್ ಟ್ರಾನ್ಸ್‌ಫರ್ ಪ್ರೊಟೊಕಾಲ್ (ಎಫ್‌ಟಿಪಿ) ಸರ್ವರ್‌ಗಳಲ್ಲಿ ಇರುವ ಮಾಹಿತಿಯು ಸೋರಿಕೆಯಾಗಿರುವ ಮಾಹಿತಿಗೆ ಹೋಲಿಕೆಯಾಗಿದೆ ಎಂದು ತಿಳಿಸಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ನ ಹೋಮ್ ಲೊಕೇಶನ್ ರಿಜಿಸ್ಟರ್‌ನಲ್ಲಿ (ಹೆಚ್‌ಎಲ್‌ಆರ್) ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸಲಕರಣೆ ತಯಾರಕರು ವರದಿ ಮಾಡಿದ್ದಾರೆ. ಆದ್ದರಿಂದ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್‌ನಲ್ಲಿ ಯಾವುದೇ ಸೇವೆ ಸ್ಥಗಿತಗೊಂಡಿಲ್ಲ” ಎಂದು ಸಚಿವ ಪೆಮ್ಮಸಾನಿ ಹೇಳಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ಗಳನ್ನು ಆಡಿಟ್ ಮಾಡಲು ಮತ್ತು ಭವಿಷ್ಯದ ಮಾಹಿತಿ ಸೋರಿಕೆಯನ್ನು ತಡೆಯಲು ಪರಿಹಾರ ಕ್ರಮಗಳನ್ನು ಸೂಚಿಸಲು ಕೇಂದ್ರ ಸರ್ಕಾರವು ಅಂತರ-ಸಚಿವಾಲಯ ಸಮಿತಿಯನ್ನು (ಐಎಂಸಿ) ಸ್ಥಾಪಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಹ್ಯಾಕ್ ಮಾಡಿರುವ ಡೇಟಾವನ್ನು ಮಾರಾಟ ಮಾಡಲು ಹೆಸರಾದ ವೆಬ್‌ಸೈಟ್ Breachforumsನಲ್ಲಿ ‘kiberphant0m’ಎಂಬ ಹೆಸರಿನ ಬಳಕೆದಾರ ಬಿಎಸ್‌ಎನ್‌ಎಲ್‌ನಿಂದ ಸುಮಾರು 278 ಗಿಗಾಬೈಟ್‌ಗಳಷ್ಟು ಡೇಟಾವನ್ನು ಪಡೆದುಕೊಂಡಿರುವುದಾಗಿ ಹೇಳಿದ ಬಳಿಕ ಮಾಹಿತಿ ಸೋರಿಕೆಯಾಗಿರುವುದು ಗೊತ್ತಾಗಿದೆ.

ಸೋರಿಕೆಯಾದ ಮಾಹಿತಿಗಳಲ್ಲಿ ಐಎಂಎಸ್‌ಐ ಸಂಖ್ಯೆ (ಅಂತಾರಾಷ್ಟ್ರೀಯ ಮೊಬೈಲ್ ಚಂದಾದಾರರ ಗುರುತು), ಸಿಮ್ ವಿವರಗಳು, ಮೊಬೈಲ್ ನೆಟ್‌ವರ್ಕ್‌ನ ಎಲ್ಲಾ ಸಕ್ರಿಯ ಬಳಕೆದಾರರ ಡೇಟಾಬೇಸ್ ಹೆಚ್‌ಎಲ್‌ಆರ್ (ಹೋಮ್ ಲೊಕೇಶನ್ ರಿಜಿಸ್ಟರ್) , ಡಿಪಿ ಕಾರ್ಡ್ ಡೇಟಾ ಮತ್ತು ಬಿಎಸ್‌ಎನ್‌ಎಲ್‌ನ ಭದ್ರತಾ ವ್ಯವಸ್ಥೆಗಳನ್ನು ಬೆಂಬಲಿಸುವ ಡಿಪಿ ಭದ್ರತಾ ಕೀ ಡೇಟಾ ಒಳಗೊಂಡಿದೆ. ಬಳಕೆದಾರ ಈ ಡೇಟಾವನ್ನು 5,000 ಡಾಲರ್‌ಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂದು ವರದಿಗಳು ತಿಳಿಸಿವೆ.

ಭವಿಷ್ಯದ ಸೈಬರ್ ದಾಳಿಗಳನ್ನು ತಡೆಗಟ್ಟಲು, ಬಿಎಸ್‌ಎನ್‌ಎಲ್‌ ಎಲ್ಲಾ ರೀತಿಯ ಎಫ್‌ಟಿಪಿ ಸರ್ವರ್‌ಗಳ ಲಾಗಿನ್ ಪಾಸ್‌ವರ್ಡ್‌ಗಳನ್ನು ಬದಲಾಯಿಸಿದೆ ಮತ್ತು ಸುರಕ್ಷಿತ ಕಂಪ್ಯೂಟರ್ ನೆಟ್‌ವರ್ಕ್ ಭೌತಿಕವಾಗಿ ಪ್ರತ್ಯೇಕವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕಂಪ್ಯೂಟರ್‌ಗಳಲ್ಲಿ ಬಳಸುವ ಭದ್ರತಾ ಕ್ರಮವಾಗಿದ ಎಂಡ್‌ಪಾಯಿಂಟ್‌ಗಳು (ನೆಟ್‌ವರ್ಕ್‌ಗೆ ಸಂಪರ್ಕಗೊಂಡಿರುವ ಸಾಧನಗಳು) ಏರ್ ಗ್ಯಾಪ್ ನಿರ್ವಹಿಸುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ : ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...