HomeಮುಖಪುಟBSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

BSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿದ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರು, 2024ರ ಮೇ 20ರಂದು ಮಾಹಿತಿ ಸೋರಿಕೆಯಾಗಿದೆ ಎಂದಿದ್ದಾರೆ.

ಸೈಬರ್ ಭದ್ರತಾ ಘಟನೆಗಳನ್ನು ನಿಭಾಯಿಸುವ ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್), ಬಿಎಸ್‌ಎನ್‌ಎಲ್‌ನ ಫೈಲ್ ಟ್ರಾನ್ಸ್‌ಫರ್ ಪ್ರೊಟೊಕಾಲ್ (ಎಫ್‌ಟಿಪಿ) ಸರ್ವರ್‌ಗಳಲ್ಲಿ ಇರುವ ಮಾಹಿತಿಯು ಸೋರಿಕೆಯಾಗಿರುವ ಮಾಹಿತಿಗೆ ಹೋಲಿಕೆಯಾಗಿದೆ ಎಂದು ತಿಳಿಸಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ನ ಹೋಮ್ ಲೊಕೇಶನ್ ರಿಜಿಸ್ಟರ್‌ನಲ್ಲಿ (ಹೆಚ್‌ಎಲ್‌ಆರ್) ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸಲಕರಣೆ ತಯಾರಕರು ವರದಿ ಮಾಡಿದ್ದಾರೆ. ಆದ್ದರಿಂದ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್‌ನಲ್ಲಿ ಯಾವುದೇ ಸೇವೆ ಸ್ಥಗಿತಗೊಂಡಿಲ್ಲ” ಎಂದು ಸಚಿವ ಪೆಮ್ಮಸಾನಿ ಹೇಳಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ಗಳನ್ನು ಆಡಿಟ್ ಮಾಡಲು ಮತ್ತು ಭವಿಷ್ಯದ ಮಾಹಿತಿ ಸೋರಿಕೆಯನ್ನು ತಡೆಯಲು ಪರಿಹಾರ ಕ್ರಮಗಳನ್ನು ಸೂಚಿಸಲು ಕೇಂದ್ರ ಸರ್ಕಾರವು ಅಂತರ-ಸಚಿವಾಲಯ ಸಮಿತಿಯನ್ನು (ಐಎಂಸಿ) ಸ್ಥಾಪಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಹ್ಯಾಕ್ ಮಾಡಿರುವ ಡೇಟಾವನ್ನು ಮಾರಾಟ ಮಾಡಲು ಹೆಸರಾದ ವೆಬ್‌ಸೈಟ್ Breachforumsನಲ್ಲಿ ‘kiberphant0m’ಎಂಬ ಹೆಸರಿನ ಬಳಕೆದಾರ ಬಿಎಸ್‌ಎನ್‌ಎಲ್‌ನಿಂದ ಸುಮಾರು 278 ಗಿಗಾಬೈಟ್‌ಗಳಷ್ಟು ಡೇಟಾವನ್ನು ಪಡೆದುಕೊಂಡಿರುವುದಾಗಿ ಹೇಳಿದ ಬಳಿಕ ಮಾಹಿತಿ ಸೋರಿಕೆಯಾಗಿರುವುದು ಗೊತ್ತಾಗಿದೆ.

ಸೋರಿಕೆಯಾದ ಮಾಹಿತಿಗಳಲ್ಲಿ ಐಎಂಎಸ್‌ಐ ಸಂಖ್ಯೆ (ಅಂತಾರಾಷ್ಟ್ರೀಯ ಮೊಬೈಲ್ ಚಂದಾದಾರರ ಗುರುತು), ಸಿಮ್ ವಿವರಗಳು, ಮೊಬೈಲ್ ನೆಟ್‌ವರ್ಕ್‌ನ ಎಲ್ಲಾ ಸಕ್ರಿಯ ಬಳಕೆದಾರರ ಡೇಟಾಬೇಸ್ ಹೆಚ್‌ಎಲ್‌ಆರ್ (ಹೋಮ್ ಲೊಕೇಶನ್ ರಿಜಿಸ್ಟರ್) , ಡಿಪಿ ಕಾರ್ಡ್ ಡೇಟಾ ಮತ್ತು ಬಿಎಸ್‌ಎನ್‌ಎಲ್‌ನ ಭದ್ರತಾ ವ್ಯವಸ್ಥೆಗಳನ್ನು ಬೆಂಬಲಿಸುವ ಡಿಪಿ ಭದ್ರತಾ ಕೀ ಡೇಟಾ ಒಳಗೊಂಡಿದೆ. ಬಳಕೆದಾರ ಈ ಡೇಟಾವನ್ನು 5,000 ಡಾಲರ್‌ಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂದು ವರದಿಗಳು ತಿಳಿಸಿವೆ.

ಭವಿಷ್ಯದ ಸೈಬರ್ ದಾಳಿಗಳನ್ನು ತಡೆಗಟ್ಟಲು, ಬಿಎಸ್‌ಎನ್‌ಎಲ್‌ ಎಲ್ಲಾ ರೀತಿಯ ಎಫ್‌ಟಿಪಿ ಸರ್ವರ್‌ಗಳ ಲಾಗಿನ್ ಪಾಸ್‌ವರ್ಡ್‌ಗಳನ್ನು ಬದಲಾಯಿಸಿದೆ ಮತ್ತು ಸುರಕ್ಷಿತ ಕಂಪ್ಯೂಟರ್ ನೆಟ್‌ವರ್ಕ್ ಭೌತಿಕವಾಗಿ ಪ್ರತ್ಯೇಕವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕಂಪ್ಯೂಟರ್‌ಗಳಲ್ಲಿ ಬಳಸುವ ಭದ್ರತಾ ಕ್ರಮವಾಗಿದ ಎಂಡ್‌ಪಾಯಿಂಟ್‌ಗಳು (ನೆಟ್‌ವರ್ಕ್‌ಗೆ ಸಂಪರ್ಕಗೊಂಡಿರುವ ಸಾಧನಗಳು) ಏರ್ ಗ್ಯಾಪ್ ನಿರ್ವಹಿಸುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ : ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...