HomeಮುಖಪುಟBSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

BSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿದ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರು, 2024ರ ಮೇ 20ರಂದು ಮಾಹಿತಿ ಸೋರಿಕೆಯಾಗಿದೆ ಎಂದಿದ್ದಾರೆ.

ಸೈಬರ್ ಭದ್ರತಾ ಘಟನೆಗಳನ್ನು ನಿಭಾಯಿಸುವ ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್), ಬಿಎಸ್‌ಎನ್‌ಎಲ್‌ನ ಫೈಲ್ ಟ್ರಾನ್ಸ್‌ಫರ್ ಪ್ರೊಟೊಕಾಲ್ (ಎಫ್‌ಟಿಪಿ) ಸರ್ವರ್‌ಗಳಲ್ಲಿ ಇರುವ ಮಾಹಿತಿಯು ಸೋರಿಕೆಯಾಗಿರುವ ಮಾಹಿತಿಗೆ ಹೋಲಿಕೆಯಾಗಿದೆ ಎಂದು ತಿಳಿಸಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ನ ಹೋಮ್ ಲೊಕೇಶನ್ ರಿಜಿಸ್ಟರ್‌ನಲ್ಲಿ (ಹೆಚ್‌ಎಲ್‌ಆರ್) ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸಲಕರಣೆ ತಯಾರಕರು ವರದಿ ಮಾಡಿದ್ದಾರೆ. ಆದ್ದರಿಂದ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್‌ನಲ್ಲಿ ಯಾವುದೇ ಸೇವೆ ಸ್ಥಗಿತಗೊಂಡಿಲ್ಲ” ಎಂದು ಸಚಿವ ಪೆಮ್ಮಸಾನಿ ಹೇಳಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ಗಳನ್ನು ಆಡಿಟ್ ಮಾಡಲು ಮತ್ತು ಭವಿಷ್ಯದ ಮಾಹಿತಿ ಸೋರಿಕೆಯನ್ನು ತಡೆಯಲು ಪರಿಹಾರ ಕ್ರಮಗಳನ್ನು ಸೂಚಿಸಲು ಕೇಂದ್ರ ಸರ್ಕಾರವು ಅಂತರ-ಸಚಿವಾಲಯ ಸಮಿತಿಯನ್ನು (ಐಎಂಸಿ) ಸ್ಥಾಪಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಹ್ಯಾಕ್ ಮಾಡಿರುವ ಡೇಟಾವನ್ನು ಮಾರಾಟ ಮಾಡಲು ಹೆಸರಾದ ವೆಬ್‌ಸೈಟ್ Breachforumsನಲ್ಲಿ ‘kiberphant0m’ಎಂಬ ಹೆಸರಿನ ಬಳಕೆದಾರ ಬಿಎಸ್‌ಎನ್‌ಎಲ್‌ನಿಂದ ಸುಮಾರು 278 ಗಿಗಾಬೈಟ್‌ಗಳಷ್ಟು ಡೇಟಾವನ್ನು ಪಡೆದುಕೊಂಡಿರುವುದಾಗಿ ಹೇಳಿದ ಬಳಿಕ ಮಾಹಿತಿ ಸೋರಿಕೆಯಾಗಿರುವುದು ಗೊತ್ತಾಗಿದೆ.

ಸೋರಿಕೆಯಾದ ಮಾಹಿತಿಗಳಲ್ಲಿ ಐಎಂಎಸ್‌ಐ ಸಂಖ್ಯೆ (ಅಂತಾರಾಷ್ಟ್ರೀಯ ಮೊಬೈಲ್ ಚಂದಾದಾರರ ಗುರುತು), ಸಿಮ್ ವಿವರಗಳು, ಮೊಬೈಲ್ ನೆಟ್‌ವರ್ಕ್‌ನ ಎಲ್ಲಾ ಸಕ್ರಿಯ ಬಳಕೆದಾರರ ಡೇಟಾಬೇಸ್ ಹೆಚ್‌ಎಲ್‌ಆರ್ (ಹೋಮ್ ಲೊಕೇಶನ್ ರಿಜಿಸ್ಟರ್) , ಡಿಪಿ ಕಾರ್ಡ್ ಡೇಟಾ ಮತ್ತು ಬಿಎಸ್‌ಎನ್‌ಎಲ್‌ನ ಭದ್ರತಾ ವ್ಯವಸ್ಥೆಗಳನ್ನು ಬೆಂಬಲಿಸುವ ಡಿಪಿ ಭದ್ರತಾ ಕೀ ಡೇಟಾ ಒಳಗೊಂಡಿದೆ. ಬಳಕೆದಾರ ಈ ಡೇಟಾವನ್ನು 5,000 ಡಾಲರ್‌ಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂದು ವರದಿಗಳು ತಿಳಿಸಿವೆ.

ಭವಿಷ್ಯದ ಸೈಬರ್ ದಾಳಿಗಳನ್ನು ತಡೆಗಟ್ಟಲು, ಬಿಎಸ್‌ಎನ್‌ಎಲ್‌ ಎಲ್ಲಾ ರೀತಿಯ ಎಫ್‌ಟಿಪಿ ಸರ್ವರ್‌ಗಳ ಲಾಗಿನ್ ಪಾಸ್‌ವರ್ಡ್‌ಗಳನ್ನು ಬದಲಾಯಿಸಿದೆ ಮತ್ತು ಸುರಕ್ಷಿತ ಕಂಪ್ಯೂಟರ್ ನೆಟ್‌ವರ್ಕ್ ಭೌತಿಕವಾಗಿ ಪ್ರತ್ಯೇಕವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕಂಪ್ಯೂಟರ್‌ಗಳಲ್ಲಿ ಬಳಸುವ ಭದ್ರತಾ ಕ್ರಮವಾಗಿದ ಎಂಡ್‌ಪಾಯಿಂಟ್‌ಗಳು (ನೆಟ್‌ವರ್ಕ್‌ಗೆ ಸಂಪರ್ಕಗೊಂಡಿರುವ ಸಾಧನಗಳು) ಏರ್ ಗ್ಯಾಪ್ ನಿರ್ವಹಿಸುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ : ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...