HomeಮುಖಪುಟBSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

BSNL ಬಳಕೆದಾರರ ಮಾಹಿತಿ ಸೋರಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿದ ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಪೆಮ್ಮಸಾನಿ ಅವರು, 2024ರ ಮೇ 20ರಂದು ಮಾಹಿತಿ ಸೋರಿಕೆಯಾಗಿದೆ ಎಂದಿದ್ದಾರೆ.

ಸೈಬರ್ ಭದ್ರತಾ ಘಟನೆಗಳನ್ನು ನಿಭಾಯಿಸುವ ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್), ಬಿಎಸ್‌ಎನ್‌ಎಲ್‌ನ ಫೈಲ್ ಟ್ರಾನ್ಸ್‌ಫರ್ ಪ್ರೊಟೊಕಾಲ್ (ಎಫ್‌ಟಿಪಿ) ಸರ್ವರ್‌ಗಳಲ್ಲಿ ಇರುವ ಮಾಹಿತಿಯು ಸೋರಿಕೆಯಾಗಿರುವ ಮಾಹಿತಿಗೆ ಹೋಲಿಕೆಯಾಗಿದೆ ಎಂದು ತಿಳಿಸಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ನ ಹೋಮ್ ಲೊಕೇಶನ್ ರಿಜಿಸ್ಟರ್‌ನಲ್ಲಿ (ಹೆಚ್‌ಎಲ್‌ಆರ್) ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸಲಕರಣೆ ತಯಾರಕರು ವರದಿ ಮಾಡಿದ್ದಾರೆ. ಆದ್ದರಿಂದ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್‌ನಲ್ಲಿ ಯಾವುದೇ ಸೇವೆ ಸ್ಥಗಿತಗೊಂಡಿಲ್ಲ” ಎಂದು ಸಚಿವ ಪೆಮ್ಮಸಾನಿ ಹೇಳಿದ್ದಾರೆ.

ಟೆಲಿಕಾಂ ನೆಟ್‌ವರ್ಕ್‌ಗಳನ್ನು ಆಡಿಟ್ ಮಾಡಲು ಮತ್ತು ಭವಿಷ್ಯದ ಮಾಹಿತಿ ಸೋರಿಕೆಯನ್ನು ತಡೆಯಲು ಪರಿಹಾರ ಕ್ರಮಗಳನ್ನು ಸೂಚಿಸಲು ಕೇಂದ್ರ ಸರ್ಕಾರವು ಅಂತರ-ಸಚಿವಾಲಯ ಸಮಿತಿಯನ್ನು (ಐಎಂಸಿ) ಸ್ಥಾಪಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಹ್ಯಾಕ್ ಮಾಡಿರುವ ಡೇಟಾವನ್ನು ಮಾರಾಟ ಮಾಡಲು ಹೆಸರಾದ ವೆಬ್‌ಸೈಟ್ Breachforumsನಲ್ಲಿ ‘kiberphant0m’ಎಂಬ ಹೆಸರಿನ ಬಳಕೆದಾರ ಬಿಎಸ್‌ಎನ್‌ಎಲ್‌ನಿಂದ ಸುಮಾರು 278 ಗಿಗಾಬೈಟ್‌ಗಳಷ್ಟು ಡೇಟಾವನ್ನು ಪಡೆದುಕೊಂಡಿರುವುದಾಗಿ ಹೇಳಿದ ಬಳಿಕ ಮಾಹಿತಿ ಸೋರಿಕೆಯಾಗಿರುವುದು ಗೊತ್ತಾಗಿದೆ.

ಸೋರಿಕೆಯಾದ ಮಾಹಿತಿಗಳಲ್ಲಿ ಐಎಂಎಸ್‌ಐ ಸಂಖ್ಯೆ (ಅಂತಾರಾಷ್ಟ್ರೀಯ ಮೊಬೈಲ್ ಚಂದಾದಾರರ ಗುರುತು), ಸಿಮ್ ವಿವರಗಳು, ಮೊಬೈಲ್ ನೆಟ್‌ವರ್ಕ್‌ನ ಎಲ್ಲಾ ಸಕ್ರಿಯ ಬಳಕೆದಾರರ ಡೇಟಾಬೇಸ್ ಹೆಚ್‌ಎಲ್‌ಆರ್ (ಹೋಮ್ ಲೊಕೇಶನ್ ರಿಜಿಸ್ಟರ್) , ಡಿಪಿ ಕಾರ್ಡ್ ಡೇಟಾ ಮತ್ತು ಬಿಎಸ್‌ಎನ್‌ಎಲ್‌ನ ಭದ್ರತಾ ವ್ಯವಸ್ಥೆಗಳನ್ನು ಬೆಂಬಲಿಸುವ ಡಿಪಿ ಭದ್ರತಾ ಕೀ ಡೇಟಾ ಒಳಗೊಂಡಿದೆ. ಬಳಕೆದಾರ ಈ ಡೇಟಾವನ್ನು 5,000 ಡಾಲರ್‌ಗೆ ಮಾರಾಟ ಮಾಡಲು ಉದ್ದೇಶಿಸಿದ್ದ ಎಂದು ವರದಿಗಳು ತಿಳಿಸಿವೆ.

ಭವಿಷ್ಯದ ಸೈಬರ್ ದಾಳಿಗಳನ್ನು ತಡೆಗಟ್ಟಲು, ಬಿಎಸ್‌ಎನ್‌ಎಲ್‌ ಎಲ್ಲಾ ರೀತಿಯ ಎಫ್‌ಟಿಪಿ ಸರ್ವರ್‌ಗಳ ಲಾಗಿನ್ ಪಾಸ್‌ವರ್ಡ್‌ಗಳನ್ನು ಬದಲಾಯಿಸಿದೆ ಮತ್ತು ಸುರಕ್ಷಿತ ಕಂಪ್ಯೂಟರ್ ನೆಟ್‌ವರ್ಕ್ ಭೌತಿಕವಾಗಿ ಪ್ರತ್ಯೇಕವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕಂಪ್ಯೂಟರ್‌ಗಳಲ್ಲಿ ಬಳಸುವ ಭದ್ರತಾ ಕ್ರಮವಾಗಿದ ಎಂಡ್‌ಪಾಯಿಂಟ್‌ಗಳು (ನೆಟ್‌ವರ್ಕ್‌ಗೆ ಸಂಪರ್ಕಗೊಂಡಿರುವ ಸಾಧನಗಳು) ಏರ್ ಗ್ಯಾಪ್ ನಿರ್ವಹಿಸುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ : ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...