Homeಮುಖಪುಟತ್ರಿವಳಿ ತಲಾಖ್ ನಿಷೇಧ : ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ತ್ರಿವಳಿ ತಲಾಖ್ ನಿಷೇಧ : ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

- Advertisement -
- Advertisement -

ತ್ರಿವಳಿ ತಲಾಖ್ ವಿರುದ್ಧದ ಕಾನೂನನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಈ ಸಂಬಂಧಿತ ಕಾಯ್ದೆಯು, ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಲಿಂಗ ಸಮಾನತೆಯನ್ನು ಒದಗಿಸಿಕೊಡುವ ದೊಡ್ಡ ಸಾಂವಿಧಾನಿಕ ಗುರಿಯನ್ನು ಸಾಧಿಸಲು ಮತ್ತು ತಾರತಮ್ಯ ನೀತಿಯನ್ನು ಹೋಗಲಾಡಿಸಿ, ಮಹಿಳೆಯರ ಸಬಲೀಕರಣಕ್ಕೆ ಸಹಾಯ ಮಾಡಲಿದೆ ಎಂದು ಹೇಳಿದೆ.

ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆ-2019 ಅಥವಾ ತ್ರಿವಳಿ ತಲಾಖ್ ನಿಷೇಧ ಕಾಯ್ದೆಯು ಅಸಂವಿಧಾನಿಕ ಮತ್ತು ಸಂವಿಧಾನದ ವಿಧಿಗಳಾದ 14,15, 21, ಮತ್ತು 123 ಅನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಲು ಕೋರಿ ಸಮಸ್ತ ಕೇರಳ ಜಮಿಯತುಲ್ ಉಲಮಾ ಸಲ್ಲಿಸಿದ್ದ ಅರ್ಜಿಗೆ ಈ ತಿಂಗಳ ಆರಂಭದಲ್ಲಿ ಕೇಂದ್ರ ಮೇಲಿನಂತ ಪ್ರತಿಕ್ರಿಯೆ ನೀಡಿದೆ ಎಂದು ತಿಳಿದು ಬಂದಿದೆ.

ತನ್ನ ಅಫಿಡವಿಟ್‌ನಲ್ಲಿ ತ್ರಿವಳಿ ತಲಾಖ್ ನಿಷೇಧ ಕಾನೂನು ಜಾರಿಗೆ ಬಂದ ಸಂದರ್ಭವನ್ನು ವಿವರಿಸಿರುವ ಕೇಂದ್ರ ಸರ್ಕಾರ “ಮೂಲಭೂತವಾಗಿ ತಲಾಖ್-ಎ-ಬಿದ್ದತ್ ಅಥವಾ ತತ್‌ಕ್ಷಣದ ತ್ರಿವಳಿ ತಲಾಖ್‌ನ ಅಭ್ಯಾಸ ಕಾನೂನುಬದ್ಧ ಮತ್ತು ಸಾಂಸ್ಥಿಕವಾಗಿ ಪತ್ನಿಯರನ್ನು ಅವರ ಗಂಡಂದಿರು ತ್ಯಜಿಸುವುದನ್ನು ಹೇಳಿದೆ. ಇದು ವೈಯಕ್ತಿಕವಾಗಿ ಮಾತ್ರವಲ್ಲ, ಸಾಮಾಜಿಕವಾಗಿ ಮತ್ತು ಸಂಪೂರ್ಣ ವೈವಾಹಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಹೇಳಿದೆ.

ಶಾಯರಾ ಬಾನು ಪ್ರಕರಣದಲ್ಲಿ ಆಗಸ್ಟ್ 22, 2017ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮತ್ತು ತ್ರಿವಳಿ ತಲಾಖ್ ತಡೆಯುವ ಸಂಬಂಧ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೀಡಿರುವ ಭರವಸೆಗಳ ಹೊರತಾಗಿಯೂ ದೇಶದ ಹಲವು ಭಾಗಗಳಲ್ಲಿ ತ್ರಿವಳಿ ತಲಾಖ್ ಪ್ರಕರಣಗಳು ವರದಿಯಾಗುತ್ತಿದೆ. ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ನಿಷೇಧ ಮಾಡಿದ್ದರೂ, ಮುಸ್ಲಿಮರಲ್ಲಿ ಅದನ್ನು ಕಡಿಮೆ ಮಾಡಲು ಆಗಿಲ್ಲ. ಆದ್ದರಿಂದ ತ್ರಿವಳಿ ತಲಾಖ್ ಸಂತ್ರಸ್ತರ ಕುಂದು ಕೊರತೆಗಳನ್ನು ಸರ್ಕಾರ ಆಲಿಸಬೇಕಿದೆ. ಅವರಿಗೆ ನ್ಯಾಯ ಒದಗಿಸಲು ಕಾನೂನು ರೂಪಿಸಲಾಗಿದೆ. ಹಾಗಾಗಿ, ಅದನ್ನು ಜಾರಿಗೆ ತರಲು ನ್ಯಾಯಾಲಯ ಅನುಮತಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಅನ್ನು ಕೋರಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಬಿಜೆಪಿಯ ಹಣದ ಪ್ರಭಾವದಿಂದಾಗಿ ಹಿಂಜರಿಕೆಯಿಲ್ಲದೆ ಬಿಜೆಪಿ ಸೇರುತ್ತಿದ್ದಾರೆ: ಹೇಮಂತ್ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...