Homeಮುಖಪುಟಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ 'ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ...

ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

- Advertisement -
- Advertisement -

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮುಖ್ಯಸ್ಥೆ ಯಾಮಿನಿ ಅಯ್ಯರ್ ಅವರು ರಾಜೀನಾಮೆ ನೀಡಿದ್ದು, ಪ್ರಧಾನಿ ಮೋದಿ ಆಡಳಿತವನ್ನು ಟೀಕಿಸಿ ಲೇಖನವನ್ನು ಪ್ರಕಟಿಸಿದ್ದ ಬೆನ್ನಲ್ಲಿ ಅವರು ಹುದ್ದೆಗೆ ರಾಜೀನಾಮೆ ನೀಡಿರುವುದು ಸಂಶಯಕ್ಕೆ ಕಾರಣವಾಗಿದೆ.

ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಮತ್ತು ವಿದ್ವಾಂಸರಾದ ಯಾಮಿನಿ ಅಯ್ಯರ್ ಅವರು ಮಾ.26ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಾ.23ರಂದು ‘ಯಾಮಿನಿ ಅಯ್ಯರ್‌ ʼಲೆಮೆಂಟ್ಸ್‌ ದಿ ಡ್ಯಾಮೇಜ್‌ ಡನ್‌ ಟು ಇಂಡಿಯನ್‌ ಡೆಮಾಕ್ರೆಸಿ ಅಂಡರ್‌ ನರೇಂದ್ರ ಮೋದಿʼ ಎಂಬ ಲೇಖನವನ್ನು ಬರೆದಿದ್ದಾರೆ. ಲೇಖನದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ. ಭಾರತ ತನ್ನ 18ನೇ ಸಾರ್ವತ್ರಿಕ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದಂತೆ ದೇಶದ ಮೇಲೆ ಸರ್ವಾಧಿಕಾರದ ಗಾಢ ಛಾಯೆ ಮೂಡುತ್ತಿದೆ ಎಂದು ಯಾಮಿನಿ ಅಯ್ಯರ್ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ನಾಯಕತ್ವದ ಬಿಜೆಪಿ ಮೂರನೇ ಬಾರಿಗೆ ಗೆದ್ದ ನಂತರ ಅಧಿಕಾರವನ್ನು ಹಿಡಿಯಲು ಸಜ್ಜಾಗಿದೆ. ಆದರೆ ಆಕ್ರಮಣಕಾರಿ, ಹಿಂದೂ-ರಾಷ್ಟ್ರೀಯವಾದಿ ಸಿದ್ಧಾಂತದ ಮೋದಿ ಆಡಳಿತವು ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ. ರಾಜಕೀಯ ವಿರೋಧಿಗಳು, ಮಾಧ್ಯಮಗಳು, ಶೈಕ್ಷಣಿಕ ಮತ್ತು ನಾಗರಿಕ ಸಮಾಜವು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವಕಾಶ ವೇಗವಾಗಿ ಕುಗ್ಗುತ್ತಿದೆ ಎಂದು ಅವರು ಹೇಳಿದ್ದರು.

ಯಾಮಿನಿ ಅಯ್ಯರ್ ರಾಜೀನಾಮೆ:

ಲೇಖನವನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಸ್ಥಾನದಿಂದ ಯಾಮಿನಿ ಅಯ್ಯರ್ 31 ಮಾರ್ಚ್ 2024ಕ್ಕೆ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಅವರು ತಮ್ಮ ಸಂಶೋಧನೆಗಳಿಗೆ ಹೆಚ್ಚಿನ ಸಮಯವನ್ನು ವಿನಿಯೋಗಿಸುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಅಯ್ಯರ್ ಅವರು ಶೈಕ್ಷಣಿಕ ಪ್ರಕಟಣೆಗಳು ಮತ್ತು ಜನಪ್ರಿಯ ಪತ್ರಿಕೆಗಳಲ್ಲಿ ಲೇಖನವನ್ನು ನಿಯಮಿತವಾಗಿ ಬರೆಯುತ್ತಿದ್ದರು. ಅವರು ಭಾರತೀಯ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಪ್ರಸ್ತುತ ವ್ಯವಹಾರಗಳು ಮತ್ತು ನೀತಿ ವಿಷಯಗಳ ಬಗ್ಗೆ ನಿಯಮಿತವಾಗಿ ಬರೆಯುತ್ತಿದ್ದರು.

ಜಲ ಶಕ್ತಿ ಸಂಶೋಧನಾ ಸಚಿವಾಲಯದ ಹಿರಿಯ ಸಂಶೋಧಕ ಶ್ರೀನಿವಾಸ್ ಚೊಕ್ಕಕುಲ ಅವರನ್ನು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಅಧ್ಯಕ್ಷರನ್ನಾಗಿ ಮತ್ತು ಮುಖ್ಯ ಕಾರ್ಯನಿರ್ವಾಹಕರನ್ನಾಗಿ ನೇಮಿಸಲಾಗಿದೆ. ಅವರು 2024ರ ಏಪ್ರಿಲ್ 1ರಂದು ಜಾರಿಗೆ ಬರುವಂತೆ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...