Homeಮುಖಪುಟಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ 'ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ...

ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

- Advertisement -
- Advertisement -

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮುಖ್ಯಸ್ಥೆ ಯಾಮಿನಿ ಅಯ್ಯರ್ ಅವರು ರಾಜೀನಾಮೆ ನೀಡಿದ್ದು, ಪ್ರಧಾನಿ ಮೋದಿ ಆಡಳಿತವನ್ನು ಟೀಕಿಸಿ ಲೇಖನವನ್ನು ಪ್ರಕಟಿಸಿದ್ದ ಬೆನ್ನಲ್ಲಿ ಅವರು ಹುದ್ದೆಗೆ ರಾಜೀನಾಮೆ ನೀಡಿರುವುದು ಸಂಶಯಕ್ಕೆ ಕಾರಣವಾಗಿದೆ.

ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಮತ್ತು ವಿದ್ವಾಂಸರಾದ ಯಾಮಿನಿ ಅಯ್ಯರ್ ಅವರು ಮಾ.26ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಾ.23ರಂದು ‘ಯಾಮಿನಿ ಅಯ್ಯರ್‌ ʼಲೆಮೆಂಟ್ಸ್‌ ದಿ ಡ್ಯಾಮೇಜ್‌ ಡನ್‌ ಟು ಇಂಡಿಯನ್‌ ಡೆಮಾಕ್ರೆಸಿ ಅಂಡರ್‌ ನರೇಂದ್ರ ಮೋದಿʼ ಎಂಬ ಲೇಖನವನ್ನು ಬರೆದಿದ್ದಾರೆ. ಲೇಖನದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ. ಭಾರತ ತನ್ನ 18ನೇ ಸಾರ್ವತ್ರಿಕ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದಂತೆ ದೇಶದ ಮೇಲೆ ಸರ್ವಾಧಿಕಾರದ ಗಾಢ ಛಾಯೆ ಮೂಡುತ್ತಿದೆ ಎಂದು ಯಾಮಿನಿ ಅಯ್ಯರ್ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ನಾಯಕತ್ವದ ಬಿಜೆಪಿ ಮೂರನೇ ಬಾರಿಗೆ ಗೆದ್ದ ನಂತರ ಅಧಿಕಾರವನ್ನು ಹಿಡಿಯಲು ಸಜ್ಜಾಗಿದೆ. ಆದರೆ ಆಕ್ರಮಣಕಾರಿ, ಹಿಂದೂ-ರಾಷ್ಟ್ರೀಯವಾದಿ ಸಿದ್ಧಾಂತದ ಮೋದಿ ಆಡಳಿತವು ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ. ರಾಜಕೀಯ ವಿರೋಧಿಗಳು, ಮಾಧ್ಯಮಗಳು, ಶೈಕ್ಷಣಿಕ ಮತ್ತು ನಾಗರಿಕ ಸಮಾಜವು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವಕಾಶ ವೇಗವಾಗಿ ಕುಗ್ಗುತ್ತಿದೆ ಎಂದು ಅವರು ಹೇಳಿದ್ದರು.

ಯಾಮಿನಿ ಅಯ್ಯರ್ ರಾಜೀನಾಮೆ:

ಲೇಖನವನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಸ್ಥಾನದಿಂದ ಯಾಮಿನಿ ಅಯ್ಯರ್ 31 ಮಾರ್ಚ್ 2024ಕ್ಕೆ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಅವರು ತಮ್ಮ ಸಂಶೋಧನೆಗಳಿಗೆ ಹೆಚ್ಚಿನ ಸಮಯವನ್ನು ವಿನಿಯೋಗಿಸುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಅಯ್ಯರ್ ಅವರು ಶೈಕ್ಷಣಿಕ ಪ್ರಕಟಣೆಗಳು ಮತ್ತು ಜನಪ್ರಿಯ ಪತ್ರಿಕೆಗಳಲ್ಲಿ ಲೇಖನವನ್ನು ನಿಯಮಿತವಾಗಿ ಬರೆಯುತ್ತಿದ್ದರು. ಅವರು ಭಾರತೀಯ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಪ್ರಸ್ತುತ ವ್ಯವಹಾರಗಳು ಮತ್ತು ನೀತಿ ವಿಷಯಗಳ ಬಗ್ಗೆ ನಿಯಮಿತವಾಗಿ ಬರೆಯುತ್ತಿದ್ದರು.

ಜಲ ಶಕ್ತಿ ಸಂಶೋಧನಾ ಸಚಿವಾಲಯದ ಹಿರಿಯ ಸಂಶೋಧಕ ಶ್ರೀನಿವಾಸ್ ಚೊಕ್ಕಕುಲ ಅವರನ್ನು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಅಧ್ಯಕ್ಷರನ್ನಾಗಿ ಮತ್ತು ಮುಖ್ಯ ಕಾರ್ಯನಿರ್ವಾಹಕರನ್ನಾಗಿ ನೇಮಿಸಲಾಗಿದೆ. ಅವರು 2024ರ ಏಪ್ರಿಲ್ 1ರಂದು ಜಾರಿಗೆ ಬರುವಂತೆ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...