Homeಮುಖಪುಟಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ 'ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ...

ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

- Advertisement -
- Advertisement -

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮುಖ್ಯಸ್ಥೆ ಯಾಮಿನಿ ಅಯ್ಯರ್ ಅವರು ರಾಜೀನಾಮೆ ನೀಡಿದ್ದು, ಪ್ರಧಾನಿ ಮೋದಿ ಆಡಳಿತವನ್ನು ಟೀಕಿಸಿ ಲೇಖನವನ್ನು ಪ್ರಕಟಿಸಿದ್ದ ಬೆನ್ನಲ್ಲಿ ಅವರು ಹುದ್ದೆಗೆ ರಾಜೀನಾಮೆ ನೀಡಿರುವುದು ಸಂಶಯಕ್ಕೆ ಕಾರಣವಾಗಿದೆ.

ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಮತ್ತು ವಿದ್ವಾಂಸರಾದ ಯಾಮಿನಿ ಅಯ್ಯರ್ ಅವರು ಮಾ.26ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಾ.23ರಂದು ‘ಯಾಮಿನಿ ಅಯ್ಯರ್‌ ʼಲೆಮೆಂಟ್ಸ್‌ ದಿ ಡ್ಯಾಮೇಜ್‌ ಡನ್‌ ಟು ಇಂಡಿಯನ್‌ ಡೆಮಾಕ್ರೆಸಿ ಅಂಡರ್‌ ನರೇಂದ್ರ ಮೋದಿʼ ಎಂಬ ಲೇಖನವನ್ನು ಬರೆದಿದ್ದಾರೆ. ಲೇಖನದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ. ಭಾರತ ತನ್ನ 18ನೇ ಸಾರ್ವತ್ರಿಕ ಚುನಾವಣೆಗೆ ಸಿದ್ಧಗೊಳ್ಳುತ್ತಿದ್ದಂತೆ ದೇಶದ ಮೇಲೆ ಸರ್ವಾಧಿಕಾರದ ಗಾಢ ಛಾಯೆ ಮೂಡುತ್ತಿದೆ ಎಂದು ಯಾಮಿನಿ ಅಯ್ಯರ್ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ನಾಯಕತ್ವದ ಬಿಜೆಪಿ ಮೂರನೇ ಬಾರಿಗೆ ಗೆದ್ದ ನಂತರ ಅಧಿಕಾರವನ್ನು ಹಿಡಿಯಲು ಸಜ್ಜಾಗಿದೆ. ಆದರೆ ಆಕ್ರಮಣಕಾರಿ, ಹಿಂದೂ-ರಾಷ್ಟ್ರೀಯವಾದಿ ಸಿದ್ಧಾಂತದ ಮೋದಿ ಆಡಳಿತವು ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ. ರಾಜಕೀಯ ವಿರೋಧಿಗಳು, ಮಾಧ್ಯಮಗಳು, ಶೈಕ್ಷಣಿಕ ಮತ್ತು ನಾಗರಿಕ ಸಮಾಜವು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅವಕಾಶ ವೇಗವಾಗಿ ಕುಗ್ಗುತ್ತಿದೆ ಎಂದು ಅವರು ಹೇಳಿದ್ದರು.

ಯಾಮಿನಿ ಅಯ್ಯರ್ ರಾಜೀನಾಮೆ:

ಲೇಖನವನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನೀತಿ ಸಂಶೋಧನಾ ಕೇಂದ್ರದ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಸ್ಥಾನದಿಂದ ಯಾಮಿನಿ ಅಯ್ಯರ್ 31 ಮಾರ್ಚ್ 2024ಕ್ಕೆ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಅವರು ತಮ್ಮ ಸಂಶೋಧನೆಗಳಿಗೆ ಹೆಚ್ಚಿನ ಸಮಯವನ್ನು ವಿನಿಯೋಗಿಸುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಅಯ್ಯರ್ ಅವರು ಶೈಕ್ಷಣಿಕ ಪ್ರಕಟಣೆಗಳು ಮತ್ತು ಜನಪ್ರಿಯ ಪತ್ರಿಕೆಗಳಲ್ಲಿ ಲೇಖನವನ್ನು ನಿಯಮಿತವಾಗಿ ಬರೆಯುತ್ತಿದ್ದರು. ಅವರು ಭಾರತೀಯ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಪ್ರಸ್ತುತ ವ್ಯವಹಾರಗಳು ಮತ್ತು ನೀತಿ ವಿಷಯಗಳ ಬಗ್ಗೆ ನಿಯಮಿತವಾಗಿ ಬರೆಯುತ್ತಿದ್ದರು.

ಜಲ ಶಕ್ತಿ ಸಂಶೋಧನಾ ಸಚಿವಾಲಯದ ಹಿರಿಯ ಸಂಶೋಧಕ ಶ್ರೀನಿವಾಸ್ ಚೊಕ್ಕಕುಲ ಅವರನ್ನು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಅಧ್ಯಕ್ಷರನ್ನಾಗಿ ಮತ್ತು ಮುಖ್ಯ ಕಾರ್ಯನಿರ್ವಾಹಕರನ್ನಾಗಿ ನೇಮಿಸಲಾಗಿದೆ. ಅವರು 2024ರ ಏಪ್ರಿಲ್ 1ರಂದು ಜಾರಿಗೆ ಬರುವಂತೆ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಬರೀ 56 ಇಂಚಿನ ಎದೆ ಇರೋದಲ್ಲ, ಎದೆಯೊಳಗೆ ಹೃದಯ ಇರಬೇಕು: ಮೋದಿ ವಿರುದ್ಧ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...