Homeಮುಖಪುಟ'ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?' ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ.

“ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ.

ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.

ದೆಹಲಿಯ 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಬೇಕು ಎಂದಿರುವ ಅವರು, ಮೀಸಲಾತಿ ಮಿತಿ ಹೆಚ್ಚಿಸಲು ಮೋದಿಯವರಿಗೆ ತಡೆಯಾಗಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

“ಸಾಂವಿಧಾನಿಕ ತಿದ್ದುಪಡಿ ತರಬೇಕು ಮತ್ತು ಮೀಸಲಾತಿ ಮೇಲಿನ ಶೇ. 50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದು ನಡೆದಾಗ ಮಾತ್ರ ಜಾತಿ ಜನಗಣತಿ ಅರ್ಥಪೂರ್ಣವಾಗುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2019 ರ ಡಿಸೆಂಬರ್ ತಿಂಗಳ ಕೇಂದ್ರ ಸಚಿವ ಸಂಪುಟ ಸಭೆಯ ಪತ್ರಿಕಾ ಪ್ರಕಟಣೆಯನ್ನು ಜೈರಾಮ್ ರಮೇಶ್ ಉಲ್ಲೇಖಿಸಿದ್ದು, 8,254 ಕೋಟಿ ರೂಪಾಯಿ ವೆಚ್ಚದಲ್ಲಿ 2021ರಲ್ಲಿ ಜನಗಣತಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಹೇಳಿದ್ದಾರೆ. ಈ ಪತ್ರಿಕಾ ಪ್ರಕಟಣೆಯಲ್ಲಿ ಜಾತಿ ಗಣತಿಯ ಉಲ್ಲೇಖವಿಲ್ಲ ಎಂದಿದ್ದಾರೆ.

“ಈ ಜನಗಣತಿ (ಪತ್ರಿಕಾ ಪ್ರಕಟಣೆ ಹೊರಡಿಸಿರುವ) ನಡೆದಿಲ್ಲ ಮತ್ತು ಘೋಷಣೆಯಾಗಿ ಆರು ವರ್ಷಗಳು ಕಳೆದಿವೆ ಎಂದು ಎಲ್ಲರಿಗೂ ತಿಳಿದಿದೆ. ಆಶ್ಚರ್ಯವೆಂದರೆ, ಸರ್ಕಾರ ನಿನ್ನೆ ಹೊಸದಾಗಿ ಜನಗಣತಿ ಬಗ್ಗೆ ಘೋಷಣೆ ಮಾಡಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶದಾದ್ಯಂತ ಜಾತಿ ಜನಗಣತಿಗೆ ಮಾರ್ಗಸೂಚಿಯನ್ನು ಇಟ್ಟುಕೊಳ್ಳಬೇಕೆಂದು ಜೈರಾಮ್ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದು, 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ ಆಯುಕ್ತರ ಕಚೇರಿಗೆ ಕೇವಲ 575 ಕೋಟಿ ರೂ.ಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಗಮನಸೆಳೆದಿದ್ದಾರೆ.

“ಹಾಗಾದರೆ, ಅವರು 575 ಕೋಟಿ ರೂ.ಗಳಲ್ಲಿ ಯಾವ ರೀತಿಯ ಜನಗಣತಿಯನ್ನು ಮಾಡಲು ಯೋಜಿಸುತ್ತಿದ್ದಾರೆ? ಅದರ ಉದ್ದೇಶವೇನು – ಇದು ಕೇವಲ ಹೆಡ್‌ಲೈನ್ ಕೊಡುವುದಷ್ಟೆಯಾ? ಇಲ್ಲಾ ಏನಾದರು ಉದ್ದೇಶ ಇದೆಯಾ? ಆ ಉದ್ದೇಶದ ಬಗ್ಗೆ ಹಲವು ಪ್ರಶ್ನೆಗಳು ಇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2021ರಲ್ಲಿ ಜನಗಣತಿ ಮಾಡಬೇಕಿತ್ತು. ಆದರೆ, ಅವರು ಕೋವಿಡ್ ನೆಪ ಹೇಳುತ್ತಿದ್ದಾರೆ. 50ಕ್ಕೂ ಹೆಚ್ಚು ದೇಶಗಳು ಕೋವಿಡ್ ಸಮಯದಲ್ಲಿ ತಮ್ಮ ಜನಗಣತಿಯನ್ನು ಮಾಡಿವೆ. 2023, 2024 ರಲ್ಲಿ ಕೋವಿಡ್ ಇರಲಿಲ್ಲ. ಆದರೂ, ಗಣತಿ ಮಾಡಿಲ್ಲ ಎಂದಿದ್ದಾರೆ.

ಕಳೆದ ವರ್ಷ ಪ್ರಧಾನಿಯವರು ಟಿವಿ ಚಾನೆಲ್‌ಗಳಿಗೆ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾಗ, ಜಾತಿ ಜನಗಣತಿಯ ಬಗ್ಗೆ ಮಾತನಾಡುವವರನ್ನು “ನಗರ ನಕ್ಸಲರು” ಎಂದು ಕರೆದಿದ್ದರು.ಅವರು ಯಾವಾಗಿನಿಂದ ನಗರ ನಕ್ಸಲ್ ಆದರು? ಗೃಹ ಸಚಿವ ಅಮಿತ್ ಶಾ ಯಾವಾಗಿನಿಂದ ನಗರ ನಕ್ಸಲ್ ಆದರು? ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...