Homeಮುಖಪುಟ'ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?' ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ.

“ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ.

ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.

ದೆಹಲಿಯ 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಬೇಕು ಎಂದಿರುವ ಅವರು, ಮೀಸಲಾತಿ ಮಿತಿ ಹೆಚ್ಚಿಸಲು ಮೋದಿಯವರಿಗೆ ತಡೆಯಾಗಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

“ಸಾಂವಿಧಾನಿಕ ತಿದ್ದುಪಡಿ ತರಬೇಕು ಮತ್ತು ಮೀಸಲಾತಿ ಮೇಲಿನ ಶೇ. 50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದು ನಡೆದಾಗ ಮಾತ್ರ ಜಾತಿ ಜನಗಣತಿ ಅರ್ಥಪೂರ್ಣವಾಗುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2019 ರ ಡಿಸೆಂಬರ್ ತಿಂಗಳ ಕೇಂದ್ರ ಸಚಿವ ಸಂಪುಟ ಸಭೆಯ ಪತ್ರಿಕಾ ಪ್ರಕಟಣೆಯನ್ನು ಜೈರಾಮ್ ರಮೇಶ್ ಉಲ್ಲೇಖಿಸಿದ್ದು, 8,254 ಕೋಟಿ ರೂಪಾಯಿ ವೆಚ್ಚದಲ್ಲಿ 2021ರಲ್ಲಿ ಜನಗಣತಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಹೇಳಿದ್ದಾರೆ. ಈ ಪತ್ರಿಕಾ ಪ್ರಕಟಣೆಯಲ್ಲಿ ಜಾತಿ ಗಣತಿಯ ಉಲ್ಲೇಖವಿಲ್ಲ ಎಂದಿದ್ದಾರೆ.

“ಈ ಜನಗಣತಿ (ಪತ್ರಿಕಾ ಪ್ರಕಟಣೆ ಹೊರಡಿಸಿರುವ) ನಡೆದಿಲ್ಲ ಮತ್ತು ಘೋಷಣೆಯಾಗಿ ಆರು ವರ್ಷಗಳು ಕಳೆದಿವೆ ಎಂದು ಎಲ್ಲರಿಗೂ ತಿಳಿದಿದೆ. ಆಶ್ಚರ್ಯವೆಂದರೆ, ಸರ್ಕಾರ ನಿನ್ನೆ ಹೊಸದಾಗಿ ಜನಗಣತಿ ಬಗ್ಗೆ ಘೋಷಣೆ ಮಾಡಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶದಾದ್ಯಂತ ಜಾತಿ ಜನಗಣತಿಗೆ ಮಾರ್ಗಸೂಚಿಯನ್ನು ಇಟ್ಟುಕೊಳ್ಳಬೇಕೆಂದು ಜೈರಾಮ್ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದು, 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ ಆಯುಕ್ತರ ಕಚೇರಿಗೆ ಕೇವಲ 575 ಕೋಟಿ ರೂ.ಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಗಮನಸೆಳೆದಿದ್ದಾರೆ.

“ಹಾಗಾದರೆ, ಅವರು 575 ಕೋಟಿ ರೂ.ಗಳಲ್ಲಿ ಯಾವ ರೀತಿಯ ಜನಗಣತಿಯನ್ನು ಮಾಡಲು ಯೋಜಿಸುತ್ತಿದ್ದಾರೆ? ಅದರ ಉದ್ದೇಶವೇನು – ಇದು ಕೇವಲ ಹೆಡ್‌ಲೈನ್ ಕೊಡುವುದಷ್ಟೆಯಾ? ಇಲ್ಲಾ ಏನಾದರು ಉದ್ದೇಶ ಇದೆಯಾ? ಆ ಉದ್ದೇಶದ ಬಗ್ಗೆ ಹಲವು ಪ್ರಶ್ನೆಗಳು ಇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2021ರಲ್ಲಿ ಜನಗಣತಿ ಮಾಡಬೇಕಿತ್ತು. ಆದರೆ, ಅವರು ಕೋವಿಡ್ ನೆಪ ಹೇಳುತ್ತಿದ್ದಾರೆ. 50ಕ್ಕೂ ಹೆಚ್ಚು ದೇಶಗಳು ಕೋವಿಡ್ ಸಮಯದಲ್ಲಿ ತಮ್ಮ ಜನಗಣತಿಯನ್ನು ಮಾಡಿವೆ. 2023, 2024 ರಲ್ಲಿ ಕೋವಿಡ್ ಇರಲಿಲ್ಲ. ಆದರೂ, ಗಣತಿ ಮಾಡಿಲ್ಲ ಎಂದಿದ್ದಾರೆ.

ಕಳೆದ ವರ್ಷ ಪ್ರಧಾನಿಯವರು ಟಿವಿ ಚಾನೆಲ್‌ಗಳಿಗೆ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾಗ, ಜಾತಿ ಜನಗಣತಿಯ ಬಗ್ಗೆ ಮಾತನಾಡುವವರನ್ನು “ನಗರ ನಕ್ಸಲರು” ಎಂದು ಕರೆದಿದ್ದರು.ಅವರು ಯಾವಾಗಿನಿಂದ ನಗರ ನಕ್ಸಲ್ ಆದರು? ಗೃಹ ಸಚಿವ ಅಮಿತ್ ಶಾ ಯಾವಾಗಿನಿಂದ ನಗರ ನಕ್ಸಲ್ ಆದರು? ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...