Homeಮುಖಪುಟ'ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?' ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ.

“ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ.

ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.

ದೆಹಲಿಯ 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಬೇಕು ಎಂದಿರುವ ಅವರು, ಮೀಸಲಾತಿ ಮಿತಿ ಹೆಚ್ಚಿಸಲು ಮೋದಿಯವರಿಗೆ ತಡೆಯಾಗಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

“ಸಾಂವಿಧಾನಿಕ ತಿದ್ದುಪಡಿ ತರಬೇಕು ಮತ್ತು ಮೀಸಲಾತಿ ಮೇಲಿನ ಶೇ. 50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದು ನಡೆದಾಗ ಮಾತ್ರ ಜಾತಿ ಜನಗಣತಿ ಅರ್ಥಪೂರ್ಣವಾಗುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2019 ರ ಡಿಸೆಂಬರ್ ತಿಂಗಳ ಕೇಂದ್ರ ಸಚಿವ ಸಂಪುಟ ಸಭೆಯ ಪತ್ರಿಕಾ ಪ್ರಕಟಣೆಯನ್ನು ಜೈರಾಮ್ ರಮೇಶ್ ಉಲ್ಲೇಖಿಸಿದ್ದು, 8,254 ಕೋಟಿ ರೂಪಾಯಿ ವೆಚ್ಚದಲ್ಲಿ 2021ರಲ್ಲಿ ಜನಗಣತಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಹೇಳಿದ್ದಾರೆ. ಈ ಪತ್ರಿಕಾ ಪ್ರಕಟಣೆಯಲ್ಲಿ ಜಾತಿ ಗಣತಿಯ ಉಲ್ಲೇಖವಿಲ್ಲ ಎಂದಿದ್ದಾರೆ.

“ಈ ಜನಗಣತಿ (ಪತ್ರಿಕಾ ಪ್ರಕಟಣೆ ಹೊರಡಿಸಿರುವ) ನಡೆದಿಲ್ಲ ಮತ್ತು ಘೋಷಣೆಯಾಗಿ ಆರು ವರ್ಷಗಳು ಕಳೆದಿವೆ ಎಂದು ಎಲ್ಲರಿಗೂ ತಿಳಿದಿದೆ. ಆಶ್ಚರ್ಯವೆಂದರೆ, ಸರ್ಕಾರ ನಿನ್ನೆ ಹೊಸದಾಗಿ ಜನಗಣತಿ ಬಗ್ಗೆ ಘೋಷಣೆ ಮಾಡಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶದಾದ್ಯಂತ ಜಾತಿ ಜನಗಣತಿಗೆ ಮಾರ್ಗಸೂಚಿಯನ್ನು ಇಟ್ಟುಕೊಳ್ಳಬೇಕೆಂದು ಜೈರಾಮ್ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದು, 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ ಆಯುಕ್ತರ ಕಚೇರಿಗೆ ಕೇವಲ 575 ಕೋಟಿ ರೂ.ಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಗಮನಸೆಳೆದಿದ್ದಾರೆ.

“ಹಾಗಾದರೆ, ಅವರು 575 ಕೋಟಿ ರೂ.ಗಳಲ್ಲಿ ಯಾವ ರೀತಿಯ ಜನಗಣತಿಯನ್ನು ಮಾಡಲು ಯೋಜಿಸುತ್ತಿದ್ದಾರೆ? ಅದರ ಉದ್ದೇಶವೇನು – ಇದು ಕೇವಲ ಹೆಡ್‌ಲೈನ್ ಕೊಡುವುದಷ್ಟೆಯಾ? ಇಲ್ಲಾ ಏನಾದರು ಉದ್ದೇಶ ಇದೆಯಾ? ಆ ಉದ್ದೇಶದ ಬಗ್ಗೆ ಹಲವು ಪ್ರಶ್ನೆಗಳು ಇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2021ರಲ್ಲಿ ಜನಗಣತಿ ಮಾಡಬೇಕಿತ್ತು. ಆದರೆ, ಅವರು ಕೋವಿಡ್ ನೆಪ ಹೇಳುತ್ತಿದ್ದಾರೆ. 50ಕ್ಕೂ ಹೆಚ್ಚು ದೇಶಗಳು ಕೋವಿಡ್ ಸಮಯದಲ್ಲಿ ತಮ್ಮ ಜನಗಣತಿಯನ್ನು ಮಾಡಿವೆ. 2023, 2024 ರಲ್ಲಿ ಕೋವಿಡ್ ಇರಲಿಲ್ಲ. ಆದರೂ, ಗಣತಿ ಮಾಡಿಲ್ಲ ಎಂದಿದ್ದಾರೆ.

ಕಳೆದ ವರ್ಷ ಪ್ರಧಾನಿಯವರು ಟಿವಿ ಚಾನೆಲ್‌ಗಳಿಗೆ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾಗ, ಜಾತಿ ಜನಗಣತಿಯ ಬಗ್ಗೆ ಮಾತನಾಡುವವರನ್ನು “ನಗರ ನಕ್ಸಲರು” ಎಂದು ಕರೆದಿದ್ದರು.ಅವರು ಯಾವಾಗಿನಿಂದ ನಗರ ನಕ್ಸಲ್ ಆದರು? ಗೃಹ ಸಚಿವ ಅಮಿತ್ ಶಾ ಯಾವಾಗಿನಿಂದ ನಗರ ನಕ್ಸಲ್ ಆದರು? ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...