Homeಮುಖಪುಟ'ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?' ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ.

“ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ.

ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.

ದೆಹಲಿಯ 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಬೇಕು ಎಂದಿರುವ ಅವರು, ಮೀಸಲಾತಿ ಮಿತಿ ಹೆಚ್ಚಿಸಲು ಮೋದಿಯವರಿಗೆ ತಡೆಯಾಗಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

“ಸಾಂವಿಧಾನಿಕ ತಿದ್ದುಪಡಿ ತರಬೇಕು ಮತ್ತು ಮೀಸಲಾತಿ ಮೇಲಿನ ಶೇ. 50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದು ನಡೆದಾಗ ಮಾತ್ರ ಜಾತಿ ಜನಗಣತಿ ಅರ್ಥಪೂರ್ಣವಾಗುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2019 ರ ಡಿಸೆಂಬರ್ ತಿಂಗಳ ಕೇಂದ್ರ ಸಚಿವ ಸಂಪುಟ ಸಭೆಯ ಪತ್ರಿಕಾ ಪ್ರಕಟಣೆಯನ್ನು ಜೈರಾಮ್ ರಮೇಶ್ ಉಲ್ಲೇಖಿಸಿದ್ದು, 8,254 ಕೋಟಿ ರೂಪಾಯಿ ವೆಚ್ಚದಲ್ಲಿ 2021ರಲ್ಲಿ ಜನಗಣತಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಹೇಳಿದ್ದಾರೆ. ಈ ಪತ್ರಿಕಾ ಪ್ರಕಟಣೆಯಲ್ಲಿ ಜಾತಿ ಗಣತಿಯ ಉಲ್ಲೇಖವಿಲ್ಲ ಎಂದಿದ್ದಾರೆ.

“ಈ ಜನಗಣತಿ (ಪತ್ರಿಕಾ ಪ್ರಕಟಣೆ ಹೊರಡಿಸಿರುವ) ನಡೆದಿಲ್ಲ ಮತ್ತು ಘೋಷಣೆಯಾಗಿ ಆರು ವರ್ಷಗಳು ಕಳೆದಿವೆ ಎಂದು ಎಲ್ಲರಿಗೂ ತಿಳಿದಿದೆ. ಆಶ್ಚರ್ಯವೆಂದರೆ, ಸರ್ಕಾರ ನಿನ್ನೆ ಹೊಸದಾಗಿ ಜನಗಣತಿ ಬಗ್ಗೆ ಘೋಷಣೆ ಮಾಡಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶದಾದ್ಯಂತ ಜಾತಿ ಜನಗಣತಿಗೆ ಮಾರ್ಗಸೂಚಿಯನ್ನು ಇಟ್ಟುಕೊಳ್ಳಬೇಕೆಂದು ಜೈರಾಮ್ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದು, 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ ಆಯುಕ್ತರ ಕಚೇರಿಗೆ ಕೇವಲ 575 ಕೋಟಿ ರೂ.ಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಗಮನಸೆಳೆದಿದ್ದಾರೆ.

“ಹಾಗಾದರೆ, ಅವರು 575 ಕೋಟಿ ರೂ.ಗಳಲ್ಲಿ ಯಾವ ರೀತಿಯ ಜನಗಣತಿಯನ್ನು ಮಾಡಲು ಯೋಜಿಸುತ್ತಿದ್ದಾರೆ? ಅದರ ಉದ್ದೇಶವೇನು – ಇದು ಕೇವಲ ಹೆಡ್‌ಲೈನ್ ಕೊಡುವುದಷ್ಟೆಯಾ? ಇಲ್ಲಾ ಏನಾದರು ಉದ್ದೇಶ ಇದೆಯಾ? ಆ ಉದ್ದೇಶದ ಬಗ್ಗೆ ಹಲವು ಪ್ರಶ್ನೆಗಳು ಇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2021ರಲ್ಲಿ ಜನಗಣತಿ ಮಾಡಬೇಕಿತ್ತು. ಆದರೆ, ಅವರು ಕೋವಿಡ್ ನೆಪ ಹೇಳುತ್ತಿದ್ದಾರೆ. 50ಕ್ಕೂ ಹೆಚ್ಚು ದೇಶಗಳು ಕೋವಿಡ್ ಸಮಯದಲ್ಲಿ ತಮ್ಮ ಜನಗಣತಿಯನ್ನು ಮಾಡಿವೆ. 2023, 2024 ರಲ್ಲಿ ಕೋವಿಡ್ ಇರಲಿಲ್ಲ. ಆದರೂ, ಗಣತಿ ಮಾಡಿಲ್ಲ ಎಂದಿದ್ದಾರೆ.

ಕಳೆದ ವರ್ಷ ಪ್ರಧಾನಿಯವರು ಟಿವಿ ಚಾನೆಲ್‌ಗಳಿಗೆ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾಗ, ಜಾತಿ ಜನಗಣತಿಯ ಬಗ್ಗೆ ಮಾತನಾಡುವವರನ್ನು “ನಗರ ನಕ್ಸಲರು” ಎಂದು ಕರೆದಿದ್ದರು.ಅವರು ಯಾವಾಗಿನಿಂದ ನಗರ ನಕ್ಸಲ್ ಆದರು? ಗೃಹ ಸಚಿವ ಅಮಿತ್ ಶಾ ಯಾವಾಗಿನಿಂದ ನಗರ ನಕ್ಸಲ್ ಆದರು? ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...