Homeಮುಖಪುಟ'ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?' ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ.

“ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ.

ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.

ದೆಹಲಿಯ 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕಬೇಕು ಎಂದಿರುವ ಅವರು, ಮೀಸಲಾತಿ ಮಿತಿ ಹೆಚ್ಚಿಸಲು ಮೋದಿಯವರಿಗೆ ತಡೆಯಾಗಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

“ಸಾಂವಿಧಾನಿಕ ತಿದ್ದುಪಡಿ ತರಬೇಕು ಮತ್ತು ಮೀಸಲಾತಿ ಮೇಲಿನ ಶೇ. 50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದು ನಡೆದಾಗ ಮಾತ್ರ ಜಾತಿ ಜನಗಣತಿ ಅರ್ಥಪೂರ್ಣವಾಗುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2019 ರ ಡಿಸೆಂಬರ್ ತಿಂಗಳ ಕೇಂದ್ರ ಸಚಿವ ಸಂಪುಟ ಸಭೆಯ ಪತ್ರಿಕಾ ಪ್ರಕಟಣೆಯನ್ನು ಜೈರಾಮ್ ರಮೇಶ್ ಉಲ್ಲೇಖಿಸಿದ್ದು, 8,254 ಕೋಟಿ ರೂಪಾಯಿ ವೆಚ್ಚದಲ್ಲಿ 2021ರಲ್ಲಿ ಜನಗಣತಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಹೇಳಿದ್ದಾರೆ. ಈ ಪತ್ರಿಕಾ ಪ್ರಕಟಣೆಯಲ್ಲಿ ಜಾತಿ ಗಣತಿಯ ಉಲ್ಲೇಖವಿಲ್ಲ ಎಂದಿದ್ದಾರೆ.

“ಈ ಜನಗಣತಿ (ಪತ್ರಿಕಾ ಪ್ರಕಟಣೆ ಹೊರಡಿಸಿರುವ) ನಡೆದಿಲ್ಲ ಮತ್ತು ಘೋಷಣೆಯಾಗಿ ಆರು ವರ್ಷಗಳು ಕಳೆದಿವೆ ಎಂದು ಎಲ್ಲರಿಗೂ ತಿಳಿದಿದೆ. ಆಶ್ಚರ್ಯವೆಂದರೆ, ಸರ್ಕಾರ ನಿನ್ನೆ ಹೊಸದಾಗಿ ಜನಗಣತಿ ಬಗ್ಗೆ ಘೋಷಣೆ ಮಾಡಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶದಾದ್ಯಂತ ಜಾತಿ ಜನಗಣತಿಗೆ ಮಾರ್ಗಸೂಚಿಯನ್ನು ಇಟ್ಟುಕೊಳ್ಳಬೇಕೆಂದು ಜೈರಾಮ್ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದು, 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ ಆಯುಕ್ತರ ಕಚೇರಿಗೆ ಕೇವಲ 575 ಕೋಟಿ ರೂ.ಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಗಮನಸೆಳೆದಿದ್ದಾರೆ.

“ಹಾಗಾದರೆ, ಅವರು 575 ಕೋಟಿ ರೂ.ಗಳಲ್ಲಿ ಯಾವ ರೀತಿಯ ಜನಗಣತಿಯನ್ನು ಮಾಡಲು ಯೋಜಿಸುತ್ತಿದ್ದಾರೆ? ಅದರ ಉದ್ದೇಶವೇನು – ಇದು ಕೇವಲ ಹೆಡ್‌ಲೈನ್ ಕೊಡುವುದಷ್ಟೆಯಾ? ಇಲ್ಲಾ ಏನಾದರು ಉದ್ದೇಶ ಇದೆಯಾ? ಆ ಉದ್ದೇಶದ ಬಗ್ಗೆ ಹಲವು ಪ್ರಶ್ನೆಗಳು ಇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2021ರಲ್ಲಿ ಜನಗಣತಿ ಮಾಡಬೇಕಿತ್ತು. ಆದರೆ, ಅವರು ಕೋವಿಡ್ ನೆಪ ಹೇಳುತ್ತಿದ್ದಾರೆ. 50ಕ್ಕೂ ಹೆಚ್ಚು ದೇಶಗಳು ಕೋವಿಡ್ ಸಮಯದಲ್ಲಿ ತಮ್ಮ ಜನಗಣತಿಯನ್ನು ಮಾಡಿವೆ. 2023, 2024 ರಲ್ಲಿ ಕೋವಿಡ್ ಇರಲಿಲ್ಲ. ಆದರೂ, ಗಣತಿ ಮಾಡಿಲ್ಲ ಎಂದಿದ್ದಾರೆ.

ಕಳೆದ ವರ್ಷ ಪ್ರಧಾನಿಯವರು ಟಿವಿ ಚಾನೆಲ್‌ಗಳಿಗೆ ಸರಣಿ ಸಂದರ್ಶನಗಳನ್ನು ನೀಡುತ್ತಿದ್ದಾಗ, ಜಾತಿ ಜನಗಣತಿಯ ಬಗ್ಗೆ ಮಾತನಾಡುವವರನ್ನು “ನಗರ ನಕ್ಸಲರು” ಎಂದು ಕರೆದಿದ್ದರು.ಅವರು ಯಾವಾಗಿನಿಂದ ನಗರ ನಕ್ಸಲ್ ಆದರು? ಗೃಹ ಸಚಿವ ಅಮಿತ್ ಶಾ ಯಾವಾಗಿನಿಂದ ನಗರ ನಕ್ಸಲ್ ಆದರು? ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...