Homeಮುಖಪುಟಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು...

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

- Advertisement -
- Advertisement -

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ.

ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ.

ಗಡ್ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ವಿಸ್ತರಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಮಧ್ಯೆ, ಪ್ರಸ್ತಾವಿತ ಸ್ಥಾವರಕ್ಕೆ ಅರಣ್ಯ ಅನುಮತಿ ದೊರೆತಿದೆ.

ಕಳೆದ ತಿಂಗಳು, ಮಹಾರಾಷ್ಟ್ರದ ಸಚಿವ ಸಂಪುಟವು ಪ್ರಮುಖ ಮತ್ತು ಸಣ್ಣ ಖನಿಜಗಳ ನಿರ್ವಹಣೆಗಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಗಡ್ಚಿರೋಲಿ ಜಿಲ್ಲಾ ಗಣಿಗಾರಿಕೆ ಪ್ರಾಧಿಕಾರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಗಡ್ಚಿರೋಲಿ ಜಿಲ್ಲೆಯು ಕಬ್ಬಿಣದ ಅದಿರು, ಸುಣ್ಣದ ಕಲ್ಲು ಮತ್ತು ವಜ್ರ ನಿಕ್ಷೇಪಗಳನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಸುರ್ಜಾಗಢದಲ್ಲಿ ಪ್ರಸ್ತುತ ಇರುವ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಕಂಪನಿಯ ಗಣಿಯಿಂದ ಹೊರತೆಗೆಯುವ ಕಡಿಮೆ ದರ್ಜೆಯ ಕಬ್ಬಿಣದ ಅದಿರನ್ನು (ಹೆಮಟೈಟ್ ಕ್ವಾರ್ಟ್‌ಜೈಟ್) ಸಂಸ್ಕರಿಸಲು ಈ ಹೊಸ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಸುರ್ಜಾಗಢದಲ್ಲಿ 348 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕಬ್ಬಿಣದ ಅದಿರು ಗಣಿಯ ಗುತ್ತಿಗೆಯನ್ನು 2007ರಲ್ಲಿ 20 ವರ್ಷಗಳ ಅವಧಿಗೆ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿಗೆ ನೀಡಲಾಗಿತ್ತು. ನಂತರ ಗುತ್ತಿಗೆಯನ್ನು ಮೇ 2057ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರಕ್ಕೆ ಸಲ್ಲಿಸಿರುವ ಕಂಪನಿ ದಾಖಲೆಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಅರಣ್ಯ ಅನುಮತಿ ಕೋರುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಕೇಂದ್ರ ಸಚಿವಾಲಯದ ಅರಣ್ಯ ಸಲಹಾ ಸಮಿತಿ (ಎಫ್‌ಎಸಿ) ಶಿಫಾರಸಿನ ಮೇರೆಗೆ ಮೇ 12ರಂದು ಹೊಸ ಅದಿರು ಸಂಸ್ಕರಣಾ ಘಟಕಕ್ಕೆ ಷರತ್ತುಬದ್ಧ ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಅರಣ್ಯ ನಾಶಕ್ಕೆ ಪರಿಹಾರವಾಗಿ ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ 900 ಹೆಕ್ಟೇರ್‌ಗೂ ಹೆಚ್ಚು ಭೂಮಿಯಲ್ಲಿ ಅರಣ್ಯ ಬೆಳೆಸಲು ಪ್ರಸ್ತಾಪಿಸಲಾಗಿದೆ ಎಂದು ಎಫ್‌ಎಸಿ ಸಭೆಯ ಮಿನಿಟ್ಸ್ ತೋರಿಸಿದೆ ಎಂದು ವರದಿ ಹೇಳಿದೆ.

ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಕಾಪಾಡಿಕೊಳ್ಳಲು ಗಡ್ಚಿರೋಲಿಯ ಅರಣ್ಯ ಭೂಮಿಯನ್ನು ಹಂತ ಹಂತವಾಗಿ ಮತ್ತು ನಿಯಂತ್ರಿತ ರೀತಿಯಲ್ಲಿ ಕಟ್ಟುನಿಟ್ಟಾಗಿ ಅದಿರು ಸಂಸ್ಕರಣಾ ಘಟಕ ಸ್ಥಾಪನೆಗೆ ಬಳಸಬೇಕು ಎಂಬುದು ಅನುಮತಿ ನೀಡುವಾಗ ವಿಧಿಸಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ.

ಮೊದಲ ಹಂತದ ಯಶಸ್ವಿ ಅನುಷ್ಠಾನ ಮತ್ತು ಪರಿಶೀಲನೆ ನಡೆದರೆ ಹಾಗೂ ಭೂಮಿಯ ಸಂಪೂರ್ಣ ಬಳಕೆಯ ನಂತರವೇ ಉಳಿದ 237.077 ಹೆಕ್ಟೇರ್‌ ಬಳಕೆಗೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ತಡೋಬಾ ಹುಲಿ ಮೀಸಲು ಪ್ರದೇಶ ಮತ್ತು ಇಂದ್ರಾವತಿ ಹುಲಿ ಮೀಸಲು ಪ್ರದೇಶಗಳ ನಡುವೆ ಹುಲಿಗಳ ವಲಸೆಗೆ ಸಹಾಯ ಮಾಡುವ ಹುಲಿ ಕಾರಿಡಾರ್ ವ್ಯಾಪ್ತಿಯಲ್ಲಿ ಯೋಜನಾ ಪ್ರದೇಶದ ಒಂದು ಭಾಗ ಬರುವುದರಿಂದ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅನುಮೋದನೆ ಪಡೆಯುವಂತೆ ಸಚಿವಾಲಯವು ಕಂಪನಿಗೆ ನಿರ್ದೇಶನ ನೀಡಿದೆ.

ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿ 2007ರಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಪಡೆದಿದ್ದರೂ, ಗಣಿಗಾರಿಕೆ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು 2016ರಲ್ಲಿ ಆಗಿದೆ. ಮಾವೋವಾದಿಗಳ ತೀವ್ರ ವಿರೋಧ, ಬುಡಕಟ್ಟು ಮತ್ತು ಅರಣ್ಯ ಹಕ್ಕುಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬುಡಕಟ್ಟು ಸಮುದಾಯಗಳಿಂದ ವ್ಯಕ್ತವಾದ ತೀವ್ರ ತರಹದ ಪ್ರತಿಭಟನೆಗಳು ಮತ್ತು ಆಂದೋಲನಗಳು ಗಣಿಗಾರಿಕೆ ಪ್ರಾರಂಭಕ್ಕೆ ಅಡ್ಡಿಯಾಗಿತ್ತು.

ಡಿಸೆಂಬರ್ 2016ರಲ್ಲಿ, ಗಡ್ಚಿರೋಲಿಯ ಸುರ್ಜಾಗಢದಲ್ಲಿ ಮಾವೋವಾದಿಗಳು ಗಣಿಗಾರಿಕೆಗೆ ಸಂಬಂಧಿಸಿದ 69 ಟ್ರಕ್‌ಗಳು ಮತ್ತು ಮೂರು ಮಣ್ಣು ತೆಗೆಯುವ ಯಂತ್ರಗಳನ್ನು ಸುಟ್ಟುಹಾಕಿದ್ದರು. ಇದು ಈ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. 2016ರ ಘಟನೆಗೂ ಮುನ್ನ ಲಾಯ್ಡ್ ಸ್ಟೀಲ್‌ನ ಉಪಾಧ್ಯಕ್ಷ ಜಸ್ಪಾಲ್ ಸಿಂಗ್ ಧಿಲ್ಲೋನ್ ಅವರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಇದನ್ನೂ ಮಾವೋವಾದಿಗಳೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ನಕ್ಸಲ್ ವಿರೋಧಿ ಕಮಾಂಡೋ ಪಡೆ ಸಿ60ಯ ಮತ್ತು ಕೇಂದ್ರ ಪಡೆಗಳ ಕಾರ್ಯಾಚರಣೆಗಳಿಂದಾಗಿ ಗಡ್ಚಿರೋಲಿಯಲ್ಲಿ ಮಾವೋವಾದಿ ಹಿಡಿತ ಕ್ರಮೇಣ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ವರ್ಷದ ಮೊದಲ ದಿನವನ್ನು ಗಡ್ಚಿರೋಲಿಯಲ್ಲಿ ಕಳೆದಿದ್ದರು. ಅಲ್ಲಿ 11 ಮಾವೋವಾದಿಗಳು ಸಿಎಂ ಮುಂದೆ ಶರಣಾಗಿದ್ದರು. ಇದೇ ವೇಳೆ ಸಿಎಂ 32 ಕಿಮೀ ಉದ್ದದ ರಾಜ್ಯ ಸಾರಿಗೆ ಬಸ್ ಸೇವೆಯನ್ನು ಸಹ ಉದ್ಘಾಟಿಸಿದ್ದರು.

ಈಶಾನ್ಯ ರಾಜ್ಯಗಳಲ್ಲಿ ರಿಲಯನ್ಸ್ 75,000 ಕೋಟಿ ರೂ. ಹೂಡಿಕೆ ಮಾಡಲಿದೆ: ಮುಖೇಶ್ ಅಂಬಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...