Homeಮುಖಪುಟಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು...

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

- Advertisement -
- Advertisement -

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ.

ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ.

ಗಡ್ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ವಿಸ್ತರಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಮಧ್ಯೆ, ಪ್ರಸ್ತಾವಿತ ಸ್ಥಾವರಕ್ಕೆ ಅರಣ್ಯ ಅನುಮತಿ ದೊರೆತಿದೆ.

ಕಳೆದ ತಿಂಗಳು, ಮಹಾರಾಷ್ಟ್ರದ ಸಚಿವ ಸಂಪುಟವು ಪ್ರಮುಖ ಮತ್ತು ಸಣ್ಣ ಖನಿಜಗಳ ನಿರ್ವಹಣೆಗಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಗಡ್ಚಿರೋಲಿ ಜಿಲ್ಲಾ ಗಣಿಗಾರಿಕೆ ಪ್ರಾಧಿಕಾರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಗಡ್ಚಿರೋಲಿ ಜಿಲ್ಲೆಯು ಕಬ್ಬಿಣದ ಅದಿರು, ಸುಣ್ಣದ ಕಲ್ಲು ಮತ್ತು ವಜ್ರ ನಿಕ್ಷೇಪಗಳನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಸುರ್ಜಾಗಢದಲ್ಲಿ ಪ್ರಸ್ತುತ ಇರುವ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಕಂಪನಿಯ ಗಣಿಯಿಂದ ಹೊರತೆಗೆಯುವ ಕಡಿಮೆ ದರ್ಜೆಯ ಕಬ್ಬಿಣದ ಅದಿರನ್ನು (ಹೆಮಟೈಟ್ ಕ್ವಾರ್ಟ್‌ಜೈಟ್) ಸಂಸ್ಕರಿಸಲು ಈ ಹೊಸ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಸುರ್ಜಾಗಢದಲ್ಲಿ 348 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕಬ್ಬಿಣದ ಅದಿರು ಗಣಿಯ ಗುತ್ತಿಗೆಯನ್ನು 2007ರಲ್ಲಿ 20 ವರ್ಷಗಳ ಅವಧಿಗೆ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿಗೆ ನೀಡಲಾಗಿತ್ತು. ನಂತರ ಗುತ್ತಿಗೆಯನ್ನು ಮೇ 2057ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರಕ್ಕೆ ಸಲ್ಲಿಸಿರುವ ಕಂಪನಿ ದಾಖಲೆಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಅರಣ್ಯ ಅನುಮತಿ ಕೋರುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಕೇಂದ್ರ ಸಚಿವಾಲಯದ ಅರಣ್ಯ ಸಲಹಾ ಸಮಿತಿ (ಎಫ್‌ಎಸಿ) ಶಿಫಾರಸಿನ ಮೇರೆಗೆ ಮೇ 12ರಂದು ಹೊಸ ಅದಿರು ಸಂಸ್ಕರಣಾ ಘಟಕಕ್ಕೆ ಷರತ್ತುಬದ್ಧ ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಅರಣ್ಯ ನಾಶಕ್ಕೆ ಪರಿಹಾರವಾಗಿ ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ 900 ಹೆಕ್ಟೇರ್‌ಗೂ ಹೆಚ್ಚು ಭೂಮಿಯಲ್ಲಿ ಅರಣ್ಯ ಬೆಳೆಸಲು ಪ್ರಸ್ತಾಪಿಸಲಾಗಿದೆ ಎಂದು ಎಫ್‌ಎಸಿ ಸಭೆಯ ಮಿನಿಟ್ಸ್ ತೋರಿಸಿದೆ ಎಂದು ವರದಿ ಹೇಳಿದೆ.

ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಕಾಪಾಡಿಕೊಳ್ಳಲು ಗಡ್ಚಿರೋಲಿಯ ಅರಣ್ಯ ಭೂಮಿಯನ್ನು ಹಂತ ಹಂತವಾಗಿ ಮತ್ತು ನಿಯಂತ್ರಿತ ರೀತಿಯಲ್ಲಿ ಕಟ್ಟುನಿಟ್ಟಾಗಿ ಅದಿರು ಸಂಸ್ಕರಣಾ ಘಟಕ ಸ್ಥಾಪನೆಗೆ ಬಳಸಬೇಕು ಎಂಬುದು ಅನುಮತಿ ನೀಡುವಾಗ ವಿಧಿಸಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ.

ಮೊದಲ ಹಂತದ ಯಶಸ್ವಿ ಅನುಷ್ಠಾನ ಮತ್ತು ಪರಿಶೀಲನೆ ನಡೆದರೆ ಹಾಗೂ ಭೂಮಿಯ ಸಂಪೂರ್ಣ ಬಳಕೆಯ ನಂತರವೇ ಉಳಿದ 237.077 ಹೆಕ್ಟೇರ್‌ ಬಳಕೆಗೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ತಡೋಬಾ ಹುಲಿ ಮೀಸಲು ಪ್ರದೇಶ ಮತ್ತು ಇಂದ್ರಾವತಿ ಹುಲಿ ಮೀಸಲು ಪ್ರದೇಶಗಳ ನಡುವೆ ಹುಲಿಗಳ ವಲಸೆಗೆ ಸಹಾಯ ಮಾಡುವ ಹುಲಿ ಕಾರಿಡಾರ್ ವ್ಯಾಪ್ತಿಯಲ್ಲಿ ಯೋಜನಾ ಪ್ರದೇಶದ ಒಂದು ಭಾಗ ಬರುವುದರಿಂದ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅನುಮೋದನೆ ಪಡೆಯುವಂತೆ ಸಚಿವಾಲಯವು ಕಂಪನಿಗೆ ನಿರ್ದೇಶನ ನೀಡಿದೆ.

ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿ 2007ರಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಪಡೆದಿದ್ದರೂ, ಗಣಿಗಾರಿಕೆ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು 2016ರಲ್ಲಿ ಆಗಿದೆ. ಮಾವೋವಾದಿಗಳ ತೀವ್ರ ವಿರೋಧ, ಬುಡಕಟ್ಟು ಮತ್ತು ಅರಣ್ಯ ಹಕ್ಕುಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬುಡಕಟ್ಟು ಸಮುದಾಯಗಳಿಂದ ವ್ಯಕ್ತವಾದ ತೀವ್ರ ತರಹದ ಪ್ರತಿಭಟನೆಗಳು ಮತ್ತು ಆಂದೋಲನಗಳು ಗಣಿಗಾರಿಕೆ ಪ್ರಾರಂಭಕ್ಕೆ ಅಡ್ಡಿಯಾಗಿತ್ತು.

ಡಿಸೆಂಬರ್ 2016ರಲ್ಲಿ, ಗಡ್ಚಿರೋಲಿಯ ಸುರ್ಜಾಗಢದಲ್ಲಿ ಮಾವೋವಾದಿಗಳು ಗಣಿಗಾರಿಕೆಗೆ ಸಂಬಂಧಿಸಿದ 69 ಟ್ರಕ್‌ಗಳು ಮತ್ತು ಮೂರು ಮಣ್ಣು ತೆಗೆಯುವ ಯಂತ್ರಗಳನ್ನು ಸುಟ್ಟುಹಾಕಿದ್ದರು. ಇದು ಈ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. 2016ರ ಘಟನೆಗೂ ಮುನ್ನ ಲಾಯ್ಡ್ ಸ್ಟೀಲ್‌ನ ಉಪಾಧ್ಯಕ್ಷ ಜಸ್ಪಾಲ್ ಸಿಂಗ್ ಧಿಲ್ಲೋನ್ ಅವರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಇದನ್ನೂ ಮಾವೋವಾದಿಗಳೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ನಕ್ಸಲ್ ವಿರೋಧಿ ಕಮಾಂಡೋ ಪಡೆ ಸಿ60ಯ ಮತ್ತು ಕೇಂದ್ರ ಪಡೆಗಳ ಕಾರ್ಯಾಚರಣೆಗಳಿಂದಾಗಿ ಗಡ್ಚಿರೋಲಿಯಲ್ಲಿ ಮಾವೋವಾದಿ ಹಿಡಿತ ಕ್ರಮೇಣ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ವರ್ಷದ ಮೊದಲ ದಿನವನ್ನು ಗಡ್ಚಿರೋಲಿಯಲ್ಲಿ ಕಳೆದಿದ್ದರು. ಅಲ್ಲಿ 11 ಮಾವೋವಾದಿಗಳು ಸಿಎಂ ಮುಂದೆ ಶರಣಾಗಿದ್ದರು. ಇದೇ ವೇಳೆ ಸಿಎಂ 32 ಕಿಮೀ ಉದ್ದದ ರಾಜ್ಯ ಸಾರಿಗೆ ಬಸ್ ಸೇವೆಯನ್ನು ಸಹ ಉದ್ಘಾಟಿಸಿದ್ದರು.

ಈಶಾನ್ಯ ರಾಜ್ಯಗಳಲ್ಲಿ ರಿಲಯನ್ಸ್ 75,000 ಕೋಟಿ ರೂ. ಹೂಡಿಕೆ ಮಾಡಲಿದೆ: ಮುಖೇಶ್ ಅಂಬಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....