Homeಮುಖಪುಟಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು...

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

- Advertisement -
- Advertisement -

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ.

ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ.

ಗಡ್ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ವಿಸ್ತರಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಮಧ್ಯೆ, ಪ್ರಸ್ತಾವಿತ ಸ್ಥಾವರಕ್ಕೆ ಅರಣ್ಯ ಅನುಮತಿ ದೊರೆತಿದೆ.

ಕಳೆದ ತಿಂಗಳು, ಮಹಾರಾಷ್ಟ್ರದ ಸಚಿವ ಸಂಪುಟವು ಪ್ರಮುಖ ಮತ್ತು ಸಣ್ಣ ಖನಿಜಗಳ ನಿರ್ವಹಣೆಗಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಗಡ್ಚಿರೋಲಿ ಜಿಲ್ಲಾ ಗಣಿಗಾರಿಕೆ ಪ್ರಾಧಿಕಾರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಗಡ್ಚಿರೋಲಿ ಜಿಲ್ಲೆಯು ಕಬ್ಬಿಣದ ಅದಿರು, ಸುಣ್ಣದ ಕಲ್ಲು ಮತ್ತು ವಜ್ರ ನಿಕ್ಷೇಪಗಳನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಸುರ್ಜಾಗಢದಲ್ಲಿ ಪ್ರಸ್ತುತ ಇರುವ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಕಂಪನಿಯ ಗಣಿಯಿಂದ ಹೊರತೆಗೆಯುವ ಕಡಿಮೆ ದರ್ಜೆಯ ಕಬ್ಬಿಣದ ಅದಿರನ್ನು (ಹೆಮಟೈಟ್ ಕ್ವಾರ್ಟ್‌ಜೈಟ್) ಸಂಸ್ಕರಿಸಲು ಈ ಹೊಸ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಸುರ್ಜಾಗಢದಲ್ಲಿ 348 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕಬ್ಬಿಣದ ಅದಿರು ಗಣಿಯ ಗುತ್ತಿಗೆಯನ್ನು 2007ರಲ್ಲಿ 20 ವರ್ಷಗಳ ಅವಧಿಗೆ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿಗೆ ನೀಡಲಾಗಿತ್ತು. ನಂತರ ಗುತ್ತಿಗೆಯನ್ನು ಮೇ 2057ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರಕ್ಕೆ ಸಲ್ಲಿಸಿರುವ ಕಂಪನಿ ದಾಖಲೆಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಅರಣ್ಯ ಅನುಮತಿ ಕೋರುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಕೇಂದ್ರ ಸಚಿವಾಲಯದ ಅರಣ್ಯ ಸಲಹಾ ಸಮಿತಿ (ಎಫ್‌ಎಸಿ) ಶಿಫಾರಸಿನ ಮೇರೆಗೆ ಮೇ 12ರಂದು ಹೊಸ ಅದಿರು ಸಂಸ್ಕರಣಾ ಘಟಕಕ್ಕೆ ಷರತ್ತುಬದ್ಧ ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಅರಣ್ಯ ನಾಶಕ್ಕೆ ಪರಿಹಾರವಾಗಿ ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ 900 ಹೆಕ್ಟೇರ್‌ಗೂ ಹೆಚ್ಚು ಭೂಮಿಯಲ್ಲಿ ಅರಣ್ಯ ಬೆಳೆಸಲು ಪ್ರಸ್ತಾಪಿಸಲಾಗಿದೆ ಎಂದು ಎಫ್‌ಎಸಿ ಸಭೆಯ ಮಿನಿಟ್ಸ್ ತೋರಿಸಿದೆ ಎಂದು ವರದಿ ಹೇಳಿದೆ.

ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಕಾಪಾಡಿಕೊಳ್ಳಲು ಗಡ್ಚಿರೋಲಿಯ ಅರಣ್ಯ ಭೂಮಿಯನ್ನು ಹಂತ ಹಂತವಾಗಿ ಮತ್ತು ನಿಯಂತ್ರಿತ ರೀತಿಯಲ್ಲಿ ಕಟ್ಟುನಿಟ್ಟಾಗಿ ಅದಿರು ಸಂಸ್ಕರಣಾ ಘಟಕ ಸ್ಥಾಪನೆಗೆ ಬಳಸಬೇಕು ಎಂಬುದು ಅನುಮತಿ ನೀಡುವಾಗ ವಿಧಿಸಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ.

ಮೊದಲ ಹಂತದ ಯಶಸ್ವಿ ಅನುಷ್ಠಾನ ಮತ್ತು ಪರಿಶೀಲನೆ ನಡೆದರೆ ಹಾಗೂ ಭೂಮಿಯ ಸಂಪೂರ್ಣ ಬಳಕೆಯ ನಂತರವೇ ಉಳಿದ 237.077 ಹೆಕ್ಟೇರ್‌ ಬಳಕೆಗೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ತಡೋಬಾ ಹುಲಿ ಮೀಸಲು ಪ್ರದೇಶ ಮತ್ತು ಇಂದ್ರಾವತಿ ಹುಲಿ ಮೀಸಲು ಪ್ರದೇಶಗಳ ನಡುವೆ ಹುಲಿಗಳ ವಲಸೆಗೆ ಸಹಾಯ ಮಾಡುವ ಹುಲಿ ಕಾರಿಡಾರ್ ವ್ಯಾಪ್ತಿಯಲ್ಲಿ ಯೋಜನಾ ಪ್ರದೇಶದ ಒಂದು ಭಾಗ ಬರುವುದರಿಂದ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅನುಮೋದನೆ ಪಡೆಯುವಂತೆ ಸಚಿವಾಲಯವು ಕಂಪನಿಗೆ ನಿರ್ದೇಶನ ನೀಡಿದೆ.

ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿ 2007ರಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಪಡೆದಿದ್ದರೂ, ಗಣಿಗಾರಿಕೆ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು 2016ರಲ್ಲಿ ಆಗಿದೆ. ಮಾವೋವಾದಿಗಳ ತೀವ್ರ ವಿರೋಧ, ಬುಡಕಟ್ಟು ಮತ್ತು ಅರಣ್ಯ ಹಕ್ಕುಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬುಡಕಟ್ಟು ಸಮುದಾಯಗಳಿಂದ ವ್ಯಕ್ತವಾದ ತೀವ್ರ ತರಹದ ಪ್ರತಿಭಟನೆಗಳು ಮತ್ತು ಆಂದೋಲನಗಳು ಗಣಿಗಾರಿಕೆ ಪ್ರಾರಂಭಕ್ಕೆ ಅಡ್ಡಿಯಾಗಿತ್ತು.

ಡಿಸೆಂಬರ್ 2016ರಲ್ಲಿ, ಗಡ್ಚಿರೋಲಿಯ ಸುರ್ಜಾಗಢದಲ್ಲಿ ಮಾವೋವಾದಿಗಳು ಗಣಿಗಾರಿಕೆಗೆ ಸಂಬಂಧಿಸಿದ 69 ಟ್ರಕ್‌ಗಳು ಮತ್ತು ಮೂರು ಮಣ್ಣು ತೆಗೆಯುವ ಯಂತ್ರಗಳನ್ನು ಸುಟ್ಟುಹಾಕಿದ್ದರು. ಇದು ಈ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. 2016ರ ಘಟನೆಗೂ ಮುನ್ನ ಲಾಯ್ಡ್ ಸ್ಟೀಲ್‌ನ ಉಪಾಧ್ಯಕ್ಷ ಜಸ್ಪಾಲ್ ಸಿಂಗ್ ಧಿಲ್ಲೋನ್ ಅವರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಇದನ್ನೂ ಮಾವೋವಾದಿಗಳೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ನಕ್ಸಲ್ ವಿರೋಧಿ ಕಮಾಂಡೋ ಪಡೆ ಸಿ60ಯ ಮತ್ತು ಕೇಂದ್ರ ಪಡೆಗಳ ಕಾರ್ಯಾಚರಣೆಗಳಿಂದಾಗಿ ಗಡ್ಚಿರೋಲಿಯಲ್ಲಿ ಮಾವೋವಾದಿ ಹಿಡಿತ ಕ್ರಮೇಣ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ವರ್ಷದ ಮೊದಲ ದಿನವನ್ನು ಗಡ್ಚಿರೋಲಿಯಲ್ಲಿ ಕಳೆದಿದ್ದರು. ಅಲ್ಲಿ 11 ಮಾವೋವಾದಿಗಳು ಸಿಎಂ ಮುಂದೆ ಶರಣಾಗಿದ್ದರು. ಇದೇ ವೇಳೆ ಸಿಎಂ 32 ಕಿಮೀ ಉದ್ದದ ರಾಜ್ಯ ಸಾರಿಗೆ ಬಸ್ ಸೇವೆಯನ್ನು ಸಹ ಉದ್ಘಾಟಿಸಿದ್ದರು.

ಈಶಾನ್ಯ ರಾಜ್ಯಗಳಲ್ಲಿ ರಿಲಯನ್ಸ್ 75,000 ಕೋಟಿ ರೂ. ಹೂಡಿಕೆ ಮಾಡಲಿದೆ: ಮುಖೇಶ್ ಅಂಬಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...