Homeಕರ್ನಾಟಕ60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

- Advertisement -
- Advertisement -

ಭಾರತದ ವಿರುದ್ಧ ನಕಲಿ ಸುದ್ದಿಗಳನ್ನು ಹರಡಲು ಬಳಸಲಾಗುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದ 60ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಕಳೆದ ಎರಡು ತಿಂಗಳಲ್ಲಿ ನಿರ್ಬಂಧಿಸಲಾಗಿದೆ ಎಂದು ಒಕ್ಕೂಟ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ಹೇಳಿದೆ.

ದೇಶ ವಿರೋಧಿ ಮತ್ತು ನಕಲಿ ಸುದ್ದಿಗಳನ್ನು ವಿಷಯಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್, “ಸರ್ಕಾರವು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ದೇಶ ವಿರೋಧಿ ನಕಲಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದ ಯೂಟ್ಯೂಬ್, ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 60ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಜನವರಿ 21 ರಂದು 35 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳನ್ನು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಸಚಿವಾಲಯವು ಆದೇಶಿಸಿದೆ. ಡಿಸೆಂಬರ್‌ನಲ್ಲಿಯೂ 20 ಯೂಟ್ಯೂಬ್ ಚಾನೆಲ್‌ಗಳು ಮತ್ತು ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ. ನಿರ್ಬಂಧಿಸಲಾದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಪಾಕಿಸ್ತಾನದಿಂದ ಪ್ರಾಯೋಜಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಸುಳ್ಳು ಸುದ್ದಿಗಳ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಸ್ವಾಯತ್ತ ಶಾಸನಬದ್ಧ ಸಂಸ್ಥೆಯಾಗಿದೆ. ಅದು ಪತ್ರಕರ್ತರ ನೀತಿ ಸಂಹಿತೆಯ ಬಗ್ಗೆ ಗಮನ ಹರಿಸುತ್ತದೆ. ಪತ್ರಕರ್ತರು ನೀತಿ ಸಂಹಿತೆಯನ್ನು ಅನುಸರಿಸಬೇಕು, ಪತ್ರಿಕಾ ಮಂಡಳಿ ಕಾಯಿದೆ ಸೆಕ್ಷನ್ 14ರ ಅಡಿಯಲ್ಲಿ ಎಲ್ಲೆಲ್ಲಿ ನೀತಿ ಸಂಹಿತೆ ಪಾಲಿಸಿಲ್ಲವೋ ಅಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪತ್ರಕರ್ತರ ವಿರುದ್ಧ ಕ್ರಮಕೈಗೊಂಡಿದ್ದೇವೆ’ ಎಂದು ವಿವರಿಸಿದ್ದಾರೆ.

2019ರ ನವೆಂಬರ್‌ನಲ್ಲಿ ಸಚಿವಾಲಯದ ಪತ್ರಿಕಾ ಮಾಹಿತಿ ಬ್ಯೂರೋ ಅಡಿಯಲ್ಲಿ, ‘ಫ್ಯಾಕ್ಟ್ ಚೆಕ್ ಘಟಕ’ ಸ್ಥಾಪಿಸಲಾಗಿದೆ. ಇದು ಸ್ವಯಂ ಪ್ರೇರಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಸುದ್ದಿಗಳ ಬಗ್ಗೆ ಜನರಿಗೆ ಅರಿವನ್ನು ಮೂಡಿಸುತ್ತದೆ. ಘಟಕವು @PIBFactcheck ಎಂಬ ಟ್ವಿಟರ್ ಖಾತೆಯನ್ನು ಸಹ ನಿರ್ವಹಿಸುತ್ತದೆ. ನಕಲಿ ಸುದ್ದಿಗಳ ಪ್ರಕರಣಗಳನ್ನು ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಈವರೆಗೂ, ಪಿಐಬಿ ಫ್ಯಾಕ್ಟ್ ಚೆಕ್ ಘಟಕವು 30,533 ಫ್ಯಾಕ್ಟ್‌ಚೆಕ್ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದೆ” ಎಂದು ಸಚಿವರು ಹೇಳಿದ್ದಾರೆ.

ವಿದ್ಯುನ್ಮಾನ ಮಾಧ್ಯಮಕ್ಕಾಗಿ (ದೂರದರ್ಶನ), ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ-1995 ರ ಅಡಿಯಲ್ಲಿ ಎಲ್ಲಾ ಟಿವಿ ಚಾನೆಲ್‌ಗಳು ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು. ಕೋಡ್ ಪ್ರಕಾರ, ಟಿವಿ ಕಾರ್ಯಕ್ರಮಗಳು ಅಶ್ಲೀಲ, ಮಾನಹಾನಿಕರ, ದುರುದ್ದೇಶಪೂರ್ವಕ, ಸುಳ್ಳು ಮತ್ತು ಅರ್ಧ-ಸತ್ಯಗಳನ್ನು ಒಳಗೊಂಡಿರಬಾರದು. ಡಿಜಿಟಲ್ ಸುದ್ದಿಗಾಗಿ, ಮಾಹಿತಿ ತಂತ್ರಜ್ಞಾನ ಕಾಯಿದೆ-2000 ಅಡಿಯಲ್ಲಿ, 2021ರ ಫೆಬ್ರವರಿ 25 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು-2021ನ್ನು ಸರ್ಕಾರವು ಸೂಚಿಸಿದೆ. ಇದು ಡಿಜಿಟಲ್ ಸುದ್ದಿ ಪ್ರಕಾಶಕರು ಅನುಸರಿಸಲು ನೀತಿ ಸಂಹಿತೆಯನ್ನು ಒದಗಿಸುತ್ತದೆ. ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...