Homeಮುಖಪುಟಆಪರೇಷನ್ ಸಿಂಧೂರ ಹಿನ್ನೆಲೆ ಸರ್ವಪಕ್ಷ ಸಭೆ ನಡೆಸಿದ ಕೇಂದ್ರ: ಪ್ರಧಾನಿ ಮೋದಿ ಗೈರು

ಆಪರೇಷನ್ ಸಿಂಧೂರ ಹಿನ್ನೆಲೆ ಸರ್ವಪಕ್ಷ ಸಭೆ ನಡೆಸಿದ ಕೇಂದ್ರ: ಪ್ರಧಾನಿ ಮೋದಿ ಗೈರು

- Advertisement -
- Advertisement -

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಕೇಂದ್ರ ಸರ್ಕಾರ ಗುರುವಾರ (ಮೇ.8) ಎರಡನೇ ಬಾರಿಗೆ ಸರ್ವಪಕ್ಷ ಸಭೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಸಭೆಗೆ ಗೈರಾಗಿದ್ದರು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಬುಧವಾರ (ಮೇ.7) ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಈ ಸಭೆಯಲ್ಲಿ ವಿವಿಧ ಪಕ್ಷಗಳ ಪ್ರಮುಖರಿಗೆ ಮಾಹಿತಿ ನೀಡಲಾಗಿದೆ.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷಗಳ ನಾಯಕರಿಗೆ ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

“ಇದು ನಿರಂತರ ಕಾರ್ಯಾಚರಣೆ ಎಂದಿರುವ ರಕ್ಷಣಾ ಸಚಿವರು, ಭಾರತದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ದಾಳಿ ಮಾಡಿದರೆ, ಭಾರತ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂಬುವುದಾಗಿ ಹೇಳಿದ್ದಾರೆ” ಎಂದಿವೆ.

ಭಾರತದ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ಲಾಮಾಬಾದ್ ಬುಧವಾರ ಪ್ರತಿಜ್ಞೆ ಮಾಡಿದೆ.

“ಆಪರೇಷನ್ ಸಿಂಧೂರದ ಬಗ್ಗೆ ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿಸಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ನಾಯಕರು ಪ್ರಬುದ್ದತೆ ತೋರಿದ್ದಾರೆ. ಯಾರೂ ಗದ್ದಲ ಸೃಷ್ಟಿಸಿಲ್ಲ” ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆ ಮತ್ತು ಎಲ್ಲಾ ಭಾರತೀಯರ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿನ ಸುರಕ್ಷತೆಯ ವಿಷಯದ ಬಗ್ಗೆ ನಾಯಕರು ತಮ್ಮ ಕಳವಳಗಳನ್ನು ಹಂಚಿಕೊಂಡಿದ್ದಾರೆ. ಆದರೆ, ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ರಾಷ್ಟ್ರವು ಒಗ್ಗಟ್ಟಾಗಿದ್ದು, ಎಲ್ಲರು ಬೆಂಬಲ ವ್ಯಕ್ತಪಡಿಸಿದ್ದಾರೆ” ಎಂದು ಕಿರಣ್ ರಿಜಿಜು ಹೇಳಿದ್ದಾರೆ.

“ನಾವು ಸರ್ಕಾರ ರಚಿಸಲು ಅಥವಾ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡುತ್ತಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿಯೂ ರಾಜಕೀಯ ಮಾಡುತ್ತೇವೆ” ಎಂದು ಸಭೆಯಲ್ಲಿ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ. ಇದು ನಿರಂತರ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ. ಹಾಗಾಗಿ, ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ಆಪರೇಷನ್ ಸಿಂಧೂರ್‌ನ ತಾಂತ್ರಿಕ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಸಶಸ್ತ್ರ ಪಡೆಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಅವರು ಸರ್ವಪಕ್ಷ ಸಭೆಯಲ್ಲಿ ಹಾಜರಿರಲಿಲ್ಲ ಎಂದು ರಿಜಿಜು ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಶಸ್ತ್ರ ಪಡೆಗಳಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ಸರ್ಕಾರದ ಭಯೋತ್ಪಾದನಾ ವಿರೋಧಿ ಕ್ರಮವನ್ನು ಬೆಂಬಲಿಸಿದ್ದಾರೆ.

“ನಾವು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ, ಸರ್ಕಾರ ನಮ್ಮೊಂದಿಗೆ ಚರ್ಚಿಸಲು ಬಯಸದ ಕೆಲವು ವಿಷಯಗಳಿವೆ ಎಂದಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಸಭೆಯಲ್ಲಿ, ಸರ್ಕಾರ ಹೇಳಿದ್ದನ್ನು ನಾವು ಕೇಳಿದ್ದೇವೆ. ಕೆಲವು ಗೌಪ್ಯ ಮಾಹಿತಿಯನ್ನು ಹೊರಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ನಾವೆಲ್ಲರೂ ಸರ್ಕಾರದೊಂದಿಗಿದ್ದೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಖರ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ ನಡೆಸಿದ್ದಕ್ಕಾಗಿ ಸಶಸ್ತ್ರ ಪಡೆಗಳು ಮತ್ತು ಭಾರತ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

“ನಾವು ದಿ ರೆಸಿಸ್ಟ್‌ಟೆಂಟ್ ಫ್ರಂಟ್ (ಟಿಆರ್‌ಎಫ್) ವಿರುದ್ಧ ಅಂತಾರಾಷ್ಟ್ರೀಯ ಅಭಿಯಾನವನ್ನು ನಡೆಸಬೇಕು ಮತ್ತು ಯುಎನ್ ಸೆಕ್ಯುರಿಟಿ ಕೌನ್ಸಿಲ್ ಅದನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ನಾನು ಹೇಳಿದ್ದೇನೆ. ದೇಶದಲ್ಲಿ ಟಿಆರ್‌ಎಫ್ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸುವಂತೆ ನಾವು ಅಮೆರಿಕವನ್ನು ಕೇಳಬೇಕಾಗಿದೆ” ಎಂದು ಓವೈಸಿ ಪ್ರತಿಕ್ರಿಯಿಸಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಎಸ್. ಜೈಶಂಕರ್, ಜೆ.ಪಿ ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಸರ್ಕಾರವನ್ನು ಪ್ರತಿನಿಧಿಸಿದರೆ, ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ.ಆರ್ ಬಾಲು ಇದ್ದರು.

ಇನ್ನುಳಿದಂತೆ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ)ಯ ಸುಪ್ರಿಯಾ ಸುಳೆ, ಬಿಜೆಡಿಯ ಸಸ್ಮಿತ್ ಪಾತ್ರ ಮತ್ತು ಸಿಪಿಐ (ಎಂ)ನ ಜಾನ್ ಬ್ರಿಟ್ಟಾಸ್ ಭಾಗವಹಿಸಿದ್ದರು.

ಜೆಡಿಯು ನಾಯಕ ಸಂಜಯ್ ಝಾ, ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಭೆಗೆ ಗೈರಾಗಿದ್ದರು. ಏಪ್ರಿಲ್ 24ರಂದು ನಡೆದ ಸರ್ವಪಕ್ಷ ಸಭೆಯಲ್ಲೂ ಅವರು ಭಾಗವಹಿಸಿರಲಿಲ್ಲ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾಗಿದ್ದರು. ಏಪ್ರಿಲ್ 24ರಂದು ಸರ್ವಪಕ್ಷ ಸಭೆ ನಡೆಸಿದ್ದ ಕೇಂದ್ರ ಸರ್ಕಾರ ಈ ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ಇದೀಗ ಆಪರೇಷನ್ ಸಿಂಧೂರ ಬಳಿಕ ಎರಡನೇ ಬಾರಿ ಸರ್ವಪಕ್ಷ ಸಭೆ ನಡೆಸಿದೆ.

ಬಿಹಾರ| ಎನ್‌ಡಿಎ ತೊರೆದ ಇಬ್ಬರು ಹಿರಿಯ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....