Homeಮುಖಪುಟಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

- Advertisement -
- Advertisement -

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಪದಚ್ಯುತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಂಸತ್ತಿನಲ್ಲಿ ಬಿರ್ಲಾ ಮತ್ತು ಹರಿವಂಶ್ ಅವರು ಸಭೆ ನಡೆಸಿದರು. ನಂತರ ಅಮಿತ್ ಶಾ ಅವರನ್ನು ಭೇಟಿಯಾದರು ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆ ಬಗ್ಗೆ ತಿಳಿದಿರುವ ಜನರ ಪ್ರಕಾರ, ನ್ಯಾ.ಯಶವಂತ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಶಾಸನಬದ್ಧ ಸಮಿತಿ ರಚಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಾಧೀಶರು ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಮಿತಿಯು ನ್ಯಾ.ಯಶವಂತ್ ವರ್ಮಾ ತಪ್ಪಿತಸ್ಥರೆಂದು ಕಂಡುಕೊಂಡರೆ, ತನಿಖಾ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಯುತ್ತದೆ. ಬಳಿಕ ನ್ಯಾಯಾಧೀಶರ ಪದಚ್ಯುತಿಗೆ ಸಂಬಂಧಿಸಿದಂತೆ ನಿರ್ಣಯದ ಮೇಲೆ ಮತದಾನ ನಡೆಯಲಿದೆ.

ನ್ಯಾ. ಯಶವಂತ್ ವರ್ಮಾ ಅವರ ಪದಚ್ಯುತಿ ವಿಷಯವೇ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಗೆ ಕಾರಣವಾಯಿತು ಎಂದು ವರದಿಯಾಗಿರುವುದರಿಂದ ಉಭಯ ಸದನಗಳ ಮುಖ್ಯಸ್ಥರ ಜೊತೆ ಅಮಿತ್ ಶಾ ನಡೆಸಿದ ಸಭೆ ಮಹತ್ವ ಪಡೆದುಕೊಂಡಿದೆ.

ಧನಕರ್ ಅವರ ಹಠಾತ್ ರಾಜೀನಾಮೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ನ್ಯಾ. ವರ್ಮಾ ಅವರ ಪದಚ್ಯುತಿ ಸಂಬಂಧ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ನೀಡಿದ ನೋಟಿಸ್ ಅಂಗೀಕರಿಸಿದ್ದಕ್ಕೆ ಈ ಬೆಳವಣಿಗೆ ನಡೆದಿದೆ. ಏಕೆಂದರೆ, ವರ್ಮಾ ಅವರ ಪದಚ್ಯುತಿ ವಿಷಯದಲ್ಲಿ ಕೇಂದ್ರ ಸರ್ಕಾರದ ಯೋಜನೆ ಬೇರೆಯೇ ಇತ್ತು ಎಂದು ಹೇಳಲಾಗುತ್ತಿದೆ.

ಸೋಮವಾರ 145 ಲೋಕಸಭೆ ಮತ್ತು 63 ರಾಜ್ಯಸಭಾ ಸಂಸದರು ನ್ಯಾ. ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಧನಕರ್ ಅವರು ವಿರೋಧ ಪಕ್ಷದ ನೋಟಿಸ್ ಪರಿಗಣಿಸಿ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದರು.

ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಧನಕರ್ ಅವರು “ಲೋಕಸಭೆಯಲ್ಲಿ ಇದೇ ರೀತಿಯ ಪ್ರಸ್ತಾವನೆ ಮಂಡಿಸಲಾಗಿದೆಯೇ ಎಂದು ತಿಳಿದುಕೊಳ್ಳಲು ನಾನು ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸುತ್ತೇನೆ. ಉಭಯ ಸದನಗಳಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಪ್ರಸ್ತಾವನೆಯನ್ನು ಮಂಡಿಸಿದರೆ, ಮೊದಲು ಸದನದಲ್ಲಿ ಮಂಡಿಸಲಾದ ಪ್ರಸ್ತಾವನೆಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಮತ್ತು ಎರಡನೇ ಪ್ರಸ್ತಾವನೆಯು ನ್ಯಾಯವ್ಯಾಪ್ತಿಯಿಂದ ಹೊರಗಿರುತ್ತದೆ” ಎಂದು ಅವರು 1968ರ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯನ್ನು ಉಲ್ಲೇಖಿಸಿ ಹೇಳಿದ್ದರು.

ರಾಜ್ಯಸಭೆಯ ನೋಟಿಸ್ ಪ್ರಸ್ತುತ ಸಕ್ರಿಯವಾಗಿದೆ

“ನ್ಯಾ. ವರ್ಮಾ ಅವರ ವಿರುದ್ಧ ರಾಜ್ಯಸಭೆಯಲ್ಲಿ ನೋಟಿಸ್ ನೀಡಲಾಗಿತ್ತು. ಅದನ್ನು ಸಭಾಧ್ಯಕ್ಷರು ಬಹುತೇಕ ಒಪ್ಪಿಕೊಂಡಿದ್ದಾರೆ. ಸಭಾಧ್ಯಕ್ಷರು ನಿಗದಿತ ಅವಶ್ಯಕತೆಯನ್ನು ಪೂರೈಸಿದ್ದಾರೆ” ಎಂಬುವುದಾಗಿ ರಾಜ್ಯಸಭೆಯ ಸದಸ್ಯರೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಆಯೋಗಕ್ಕೆ ಬಿಹಾರದ ಇತಿಹಾಸ-ಭೌಗೋಳಿಕತೆಯ ಅರಿವಿಲ್ಲ..’; ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜೆಡಿಯು ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...