Homeಮುಖಪುಟಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

- Advertisement -
- Advertisement -

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಪದಚ್ಯುತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಂಸತ್ತಿನಲ್ಲಿ ಬಿರ್ಲಾ ಮತ್ತು ಹರಿವಂಶ್ ಅವರು ಸಭೆ ನಡೆಸಿದರು. ನಂತರ ಅಮಿತ್ ಶಾ ಅವರನ್ನು ಭೇಟಿಯಾದರು ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆ ಬಗ್ಗೆ ತಿಳಿದಿರುವ ಜನರ ಪ್ರಕಾರ, ನ್ಯಾ.ಯಶವಂತ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಶಾಸನಬದ್ಧ ಸಮಿತಿ ರಚಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಾಧೀಶರು ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಮಿತಿಯು ನ್ಯಾ.ಯಶವಂತ್ ವರ್ಮಾ ತಪ್ಪಿತಸ್ಥರೆಂದು ಕಂಡುಕೊಂಡರೆ, ತನಿಖಾ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಯುತ್ತದೆ. ಬಳಿಕ ನ್ಯಾಯಾಧೀಶರ ಪದಚ್ಯುತಿಗೆ ಸಂಬಂಧಿಸಿದಂತೆ ನಿರ್ಣಯದ ಮೇಲೆ ಮತದಾನ ನಡೆಯಲಿದೆ.

ನ್ಯಾ. ಯಶವಂತ್ ವರ್ಮಾ ಅವರ ಪದಚ್ಯುತಿ ವಿಷಯವೇ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಗೆ ಕಾರಣವಾಯಿತು ಎಂದು ವರದಿಯಾಗಿರುವುದರಿಂದ ಉಭಯ ಸದನಗಳ ಮುಖ್ಯಸ್ಥರ ಜೊತೆ ಅಮಿತ್ ಶಾ ನಡೆಸಿದ ಸಭೆ ಮಹತ್ವ ಪಡೆದುಕೊಂಡಿದೆ.

ಧನಕರ್ ಅವರ ಹಠಾತ್ ರಾಜೀನಾಮೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ನ್ಯಾ. ವರ್ಮಾ ಅವರ ಪದಚ್ಯುತಿ ಸಂಬಂಧ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ನೀಡಿದ ನೋಟಿಸ್ ಅಂಗೀಕರಿಸಿದ್ದಕ್ಕೆ ಈ ಬೆಳವಣಿಗೆ ನಡೆದಿದೆ. ಏಕೆಂದರೆ, ವರ್ಮಾ ಅವರ ಪದಚ್ಯುತಿ ವಿಷಯದಲ್ಲಿ ಕೇಂದ್ರ ಸರ್ಕಾರದ ಯೋಜನೆ ಬೇರೆಯೇ ಇತ್ತು ಎಂದು ಹೇಳಲಾಗುತ್ತಿದೆ.

ಸೋಮವಾರ 145 ಲೋಕಸಭೆ ಮತ್ತು 63 ರಾಜ್ಯಸಭಾ ಸಂಸದರು ನ್ಯಾ. ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಧನಕರ್ ಅವರು ವಿರೋಧ ಪಕ್ಷದ ನೋಟಿಸ್ ಪರಿಗಣಿಸಿ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದರು.

ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಧನಕರ್ ಅವರು “ಲೋಕಸಭೆಯಲ್ಲಿ ಇದೇ ರೀತಿಯ ಪ್ರಸ್ತಾವನೆ ಮಂಡಿಸಲಾಗಿದೆಯೇ ಎಂದು ತಿಳಿದುಕೊಳ್ಳಲು ನಾನು ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸುತ್ತೇನೆ. ಉಭಯ ಸದನಗಳಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಪ್ರಸ್ತಾವನೆಯನ್ನು ಮಂಡಿಸಿದರೆ, ಮೊದಲು ಸದನದಲ್ಲಿ ಮಂಡಿಸಲಾದ ಪ್ರಸ್ತಾವನೆಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಮತ್ತು ಎರಡನೇ ಪ್ರಸ್ತಾವನೆಯು ನ್ಯಾಯವ್ಯಾಪ್ತಿಯಿಂದ ಹೊರಗಿರುತ್ತದೆ” ಎಂದು ಅವರು 1968ರ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯನ್ನು ಉಲ್ಲೇಖಿಸಿ ಹೇಳಿದ್ದರು.

ರಾಜ್ಯಸಭೆಯ ನೋಟಿಸ್ ಪ್ರಸ್ತುತ ಸಕ್ರಿಯವಾಗಿದೆ

“ನ್ಯಾ. ವರ್ಮಾ ಅವರ ವಿರುದ್ಧ ರಾಜ್ಯಸಭೆಯಲ್ಲಿ ನೋಟಿಸ್ ನೀಡಲಾಗಿತ್ತು. ಅದನ್ನು ಸಭಾಧ್ಯಕ್ಷರು ಬಹುತೇಕ ಒಪ್ಪಿಕೊಂಡಿದ್ದಾರೆ. ಸಭಾಧ್ಯಕ್ಷರು ನಿಗದಿತ ಅವಶ್ಯಕತೆಯನ್ನು ಪೂರೈಸಿದ್ದಾರೆ” ಎಂಬುವುದಾಗಿ ರಾಜ್ಯಸಭೆಯ ಸದಸ್ಯರೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಆಯೋಗಕ್ಕೆ ಬಿಹಾರದ ಇತಿಹಾಸ-ಭೌಗೋಳಿಕತೆಯ ಅರಿವಿಲ್ಲ..’; ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜೆಡಿಯು ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....