Homeಮುಖಪುಟರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

ರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

- Advertisement -
- Advertisement -

ಜನವರಿ 22ರಂದು ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ಆಕ್ಷೇಪಾರ್ಹ ಸುದ್ದಿ ಪ್ರಕಟಿಸದಂತೆ ಮುಖ್ಯವಾಹಿನಿ ಮಾದ್ಯಮಗಳಿಗೆ ಮತ್ತು ಸಾಮಾಜಿಕ ಮಾದ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊರಡಿಸಿದ ಸಲಹೆಯಲ್ಲಿ, ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಗಮನಿಸಲಾಗಿದೆ. ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.  ಪತ್ರಿಕೆಗಳು, ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಮತ್ತು  ದೇಶದಲ್ಲಿ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ತಡೆಯುವಂತೆ ಸೂಚನೆಯನ್ನು ನೀಡಿದೆ.

ಇದಲ್ಲದೆ ಸಾಮಾಜಿಕ ಮಾದ್ಯಮಗಳ ಬಳಕೆದಾರರು ಕೂಡ ಯಾವುದೇ ರೀತಿಯ ಸುಳ್ಳು, ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಪ್ರಕಟಿಸದಂತೆ ಸಲಹೆ ನೀಡಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ 1995ರ ಅಡಿಯಲ್ಲಿನ ಪ್ರೋಗ್ರಾಂ ಕೋಡ್‌ನ ನಿಬಂಧನೆಗಳನ್ನು ಮತ್ತು ಪ್ರೆಸ್ ಕೌನ್ಸಿಲ್ ಆಕ್ಟ್-1978ರ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳನ್ನು ಸಲಹೆಯ ಜೊತೆ ಉಲ್ಲೇಖಿಸಿದೆ. ಇದಲ್ಲದೆ ಪತ್ರಿಕಾ ಮಂಡಳಿ ಕಾಯ್ದೆ, ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಾವಳಿಗಳು 2021ರ ಅಡಿ ನಿಬಂಧನೆಗಳನ್ನು ಉಲ್ಲೇಖಿಸಿದೆ. ಈ ನಿಬಂಧನೆಗಳಿಗೆ ಅನುಗುಣವಾಗಿ ಸುಳ್ಳು ಅಥವಾ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಬಹುದಾದ ಯಾವುದೇ ಸುದ್ದಿ, ಮಾಹಿತಿಯನ್ನು ಪ್ರಕಟಿಸದಂತೆ ಮತ್ತು ಪ್ರಚಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ದೇಶದಾದ್ಯಂತ ಕೇಂದ್ರ ಸರಕಾರದ ಅಧೀನದಲ್ಲಿನ ಕಚೇರಿಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಿದೆ. ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿ ಸರಕಾರಗಳು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...