Homeಮುಖಪುಟರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

ರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

- Advertisement -
- Advertisement -

ಜನವರಿ 22ರಂದು ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ಆಕ್ಷೇಪಾರ್ಹ ಸುದ್ದಿ ಪ್ರಕಟಿಸದಂತೆ ಮುಖ್ಯವಾಹಿನಿ ಮಾದ್ಯಮಗಳಿಗೆ ಮತ್ತು ಸಾಮಾಜಿಕ ಮಾದ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊರಡಿಸಿದ ಸಲಹೆಯಲ್ಲಿ, ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಗಮನಿಸಲಾಗಿದೆ. ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.  ಪತ್ರಿಕೆಗಳು, ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಮತ್ತು  ದೇಶದಲ್ಲಿ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ತಡೆಯುವಂತೆ ಸೂಚನೆಯನ್ನು ನೀಡಿದೆ.

ಇದಲ್ಲದೆ ಸಾಮಾಜಿಕ ಮಾದ್ಯಮಗಳ ಬಳಕೆದಾರರು ಕೂಡ ಯಾವುದೇ ರೀತಿಯ ಸುಳ್ಳು, ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಪ್ರಕಟಿಸದಂತೆ ಸಲಹೆ ನೀಡಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ 1995ರ ಅಡಿಯಲ್ಲಿನ ಪ್ರೋಗ್ರಾಂ ಕೋಡ್‌ನ ನಿಬಂಧನೆಗಳನ್ನು ಮತ್ತು ಪ್ರೆಸ್ ಕೌನ್ಸಿಲ್ ಆಕ್ಟ್-1978ರ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳನ್ನು ಸಲಹೆಯ ಜೊತೆ ಉಲ್ಲೇಖಿಸಿದೆ. ಇದಲ್ಲದೆ ಪತ್ರಿಕಾ ಮಂಡಳಿ ಕಾಯ್ದೆ, ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಾವಳಿಗಳು 2021ರ ಅಡಿ ನಿಬಂಧನೆಗಳನ್ನು ಉಲ್ಲೇಖಿಸಿದೆ. ಈ ನಿಬಂಧನೆಗಳಿಗೆ ಅನುಗುಣವಾಗಿ ಸುಳ್ಳು ಅಥವಾ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಬಹುದಾದ ಯಾವುದೇ ಸುದ್ದಿ, ಮಾಹಿತಿಯನ್ನು ಪ್ರಕಟಿಸದಂತೆ ಮತ್ತು ಪ್ರಚಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ದೇಶದಾದ್ಯಂತ ಕೇಂದ್ರ ಸರಕಾರದ ಅಧೀನದಲ್ಲಿನ ಕಚೇರಿಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಿದೆ. ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿ ಸರಕಾರಗಳು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...