Homeಮುಖಪುಟ'ರಶ್ಮಿಕಾ ಮಂದಣ್ಣ'ರ ಡೀಪ್‌ಫೇಕ್‌ ವಿಡಿಯೋ ಡಿಲೀಟ್ ಮಾಡಲು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಸಲಹೆ

‘ರಶ್ಮಿಕಾ ಮಂದಣ್ಣ’ರ ಡೀಪ್‌ಫೇಕ್‌ ವಿಡಿಯೋ ಡಿಲೀಟ್ ಮಾಡಲು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಸಲಹೆ

- Advertisement -
- Advertisement -

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. 24 ಗಂಟೆಗಳ ಒಳಗೆ ಆ ವಿಡಿಯೋವನ್ನು ತೆಗೆದುಹಾಕುವಂತೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು (MeitY) ಸಲಹೆ ನೀಡಿದೆ.

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಒಂದು ದಿನದ ನಂತರ ಈ ಸಲಹೆ ಬಂದಿದೆ.

”ಇದು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66D ಅಡಿ ಬರುತ್ತದೆ. ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವಂಚನೆ ಮಾಡುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸುತ್ತದೆ” ಸರ್ಕಾರದ ಮೂಲಗಳು ಹೇಳಿವೆ.

ಮಂದಣ್ಣ ಅವರ ಇತ್ತೀಚಿನ ಡೀಪ್‌ಫೇಕ್ ಪ್ರಸ್ತುತ ಇನ್‌ಸ್ಟಾಗ್ರಾಮ್‌ನಂತಹ ಸೈಟ್‌ಗಳಲ್ಲಿ ವೈರಲ್ ಆಗಿದೆ, ಅಲ್ಲಿ ಅವರ ಮುಖವನ್ನು ವೀಡಿಯೊದಲ್ಲಿ ಮಾರ್ಫ್ ಮಾಡಲಾಗಿದೆ, ಅಲ್ಲಿ ಮಹಿಳೆಯೊಬ್ಬರು ಬಹಿರಂಗವಾದ ಬಟ್ಟೆಗಳನ್ನು ಧರಿಸಿ ಲಿಫ್ಟ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಮೂಲ ವೀಡಿಯೊ ಬ್ರಿಟಿಷ್-ಭಾರತೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಸೇರಿದ್ದು ಮತ್ತು ಕಳೆದ ತಿಂಗಳು Instagramಗೆ ಆ ವಿಡಿಯೋ ಅಪ್‌ಲೋಡ್ ಮಾಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ, ”ಆನ್​ಲೈನ್​ನಲ್ಲಿ ನನ್ನ ಬಗ್ಗೆ ಡೀಪ್‌ಫೇಕ್​ ವಿಡಿಯೋ ಹರಿದಾಡಿದ ಬಗ್ಗೆ ಮಾತನಾಡಲು ನನಗೆ ನಿಜಕ್ಕೂ ನೋವಾಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನನಗೆ ಮಾತ್ರವಲ್ಲದೇ ಎಲ್ಲರಿಗೂ ಭಯವಾಗುತ್ತಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಇಂದು ನನಗೆ ಬೆಂಬಲ ಮತ್ತು ರಕ್ಷಣೆ ನೀಡಿರುವ ನನ್ನ ಕುಟುಂಬ ಮತ್ತು ಸ್ನೇಹಿತರಿಗೆ ಓರ್ವ ಮಹಿಳೆಯಾಗಿ, ನಟಿಯಾಗಿ ನಾನು ಋಣಿ ಆಗಿದ್ದೇನೆ. ಆದರೆ ಇದು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಆಗಿದ್ದರೆ ಇದನ್ನು ನಾನು ಹೇಗೆ ಸರಿಪಡಿಸುತ್ತಿದ್ದೆನೋ ಗೊತ್ತಿಲ್ಲ. ಇಂಥ ಘಟನೆಗಳಿಂದ ನಮ್ಮಂತಹ ಹೆಚ್ಚಿನ ಜನರು ತೊಂದರೆಗೆ ಒಳಗಾಗುವುದಕ್ಕೂ ಮುನ್ನವೇ ಈ ಸಮಸ್ಯೆಯ ಬಗ್ಗೆ ನಾವು ಗಮನ ಹರಿಸಬೇಕಿದೆ” ಎಂದು ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ.

ಈ ಡೀಪ್‌ಫೇಕ್ ವೀಡಿಯೊವನ್ನು ನಟರು ಮತ್ತು ರಾಜಕಾರಣಿಗಳು ಟೀಕಿಸಿದ್ದಾರೆ, ಅವರು ಕಾನೂನು ಕ್ರಮಕ್ಕೆ ಕರೆ ನೀಡಿದರು.

ರಶ್ಮಿಕಾ ಅವರ ಈ ಡೀಪ್‌ಫೇಕ್ ವೀಡಿಯೊದ ಸತ್ಯಾಸತ್ಯತೆಯ ಕುರಿತು ಅಭಿಷೇಕ್ ಎಂಬುವವರು Xನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು, ಈ ಡೀಪ್‌ಫೇಕ್ ವಿಡಿಯೋ ರಚಿಸಲು ಬಳಸಿದ ಮೂಲ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ”ಭಾರತದಲ್ಲಿ ಡೀಪ್‌ಫೇಕ್ ವಿಡಿಯೋಗಳ ತೊಂದರೆ ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆಯಿದೆ. ನಟಿ ರಶ್ಮಿಕಾ ಮಂದಣ್ಣ ಅವರ ಈ ವೈರಲ್ ವೀಡಿಯೊವನ್ನು ನೀವು Instagram ನಲ್ಲಿ ನೋಡಿರಬಹುದು. ಆದರೆ ನಿರೀಕ್ಷಿಸಿ, ಇದು ಜರಾ ಪಟೇಲ್ (sic) ಅವರ ಡೀಪ್‌ಫೇಕ್ ವೀಡಿಯೊ” ಎಂದು ಅಭಿಷೇಕ್ ತಿಳಿಸಿದ್ದಾರೆ.

ರಶ್ಮಿಕಾ ಅವರ ಮುಖ ಕಾಣಿಸಿಕೊಳ್ಳುವ ಮೊದಲು ಡೀಪ್‌ಫೇಕ್ ವೀಡಿಯೊದಲ್ಲಿ ಜರಾ ಅವರ ಮುಖವು ಒಂದು ಸೆಕೆಂಡ್ ಗೋಚರಿಸುತ್ತದೆ ಎಂದು ಅಭಿಷೇಕ್ ಗಮನಸೆಳೆದಿದ್ದಾರೆ. ”ಇದು ಡೀಪ್‌ಫೇಕ್ ವಿಡಿಯೋ ಎನ್ನುವುದು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ತಿಳಿಯುವಷ್ಟು ಸ್ಪಷ್ಟವಾಗಿದೆ. ನೀವು ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ಮೊದಲ 0:01ಸೆಕೆಂಡ್ ನಲ್ಲಿ ಜರಾ ಅವರ ಮುಖ ಕಾಣಿಸಿ ನಂತರ ರಶ್ಮಿಕಾ ಮುಖ ಕಾಣಿಸಿಕೊಳ್ಳುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್: ನೋವು ಹಂಚಿಕೊಂಡ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...