Homeಮುಖಪುಟದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

- Advertisement -
- Advertisement -

ದೆಹಲಿಯ ಜಾಮಾ ಮಸೀದಿ ಸೇರಿದಂತೆ  ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬುಧವಾರ ನೋಟಿಸ್ ನೀಡಿದೆ.

ಈ ಕುರಿತು ನೇಮಕವಾದ ಇಬ್ಬರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿದಂತೆ 123  ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು ಫೆಬ್ರವರಿಯಲ್ಲೇ ನಿರ್ಧರಿಸಿತ್ತು.

ಫೆಬ್ರವರಿ 8ರ ಪತ್ರದಲ್ಲಿ ಜಮೀನು ಮತ್ತು ಅಭಿವೃದ್ಧಿ ಅಧಿಕಾರಿಯೋರ್ವರು 123 ವಕ್ಫ್ ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ವಿಷಯಗಳಿಂದ ವಕ್ಪ್‌ನಿಂದ ಅದನ್ನು “ಮುಕ್ತಗೊಳಿಸುವ” ನಿರ್ಧಾರದ ಬಗ್ಗೆ ಮಂಡಳಿಗೆ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ಎಸ್‌ಪಿ ಗರ್ಗ್‌ ಅವರ ನೇತೃತ್ವದ ಸಮಿತಿಯೊಂದರ ಶಿಫಾರಸಿನ ಬಗ್ಗೆ ದಿಲ್ಲಿ ವಕ್ಫ್‌ ಮಂಡಳಿಯಿಂದ ಯಾವುದೇ ಮನವಿ ಅಥವಾ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಕೇಂದ್ರ ಸಚಿವಾಲಯದ ಜಮೀನು ಮತ್ತು ಅಭಿವೃದ್ಧಿ ಕಚೇರಿಯು ತಿಳಿಸಿದೆ.

ದಿಲ್ಲಿಯ ಜಾಮಾ ಮಸ್ಜಿದ್‌ ಸೇರಿದಂತೆ 123 ಆಸ್ತಿಗಳನ್ನು ವಕ್ಫ್‌ ಮಂಡಳಿಯಿಂದ ತನ್ನ ಸ್ವಾಧೀನಕ್ಕೆ ಪಡೆಯಲು ಕೇಂದ್ರ ಸರ್ಕಾರ ಆಗಸ್ಟ್‌ 22ರಂದು ನೋಟಿಸ್‌ ಹೊರಡಿಸಿದೆ ಎಂದು ವರದಿಯಾಗಿದೆ.

ಪಟ್ಟಿ ಮಾಡಲಾದ 123 ಆಸ್ತಿಗಳಲ್ಲಿ ದೆಹಲಿ ವಕ್ಫ್ ಬೋರ್ಡ್ ಯಾವುದೇ ಪಾಲನ್ನು ಹೊಂದಿಲ್ಲ. ಅಥವಾ ಅವರು  ವರದಿ ಕುರಿತು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ 123 ವಕ್ಫ್ ಆಸ್ತಿಗಳನ್ನು ದೆಹಲಿ ವಕ್ಫ್ ಮಂಡಳಿಯಿಂದ ವಶಕ್ಕೆ ಪಡೆಯಲಾಗುವುದು ಎಂದು ಜಮೀನು ಮತ್ತು ಅಭಿವೃದ್ಧಿ ಕಚೇರಿ ಪತ್ರದಲ್ಲಿ ತಿಳಿಸಿದೆ.

ನೊಟೀಸ್ ನೀಡಿರುವ ಕುರಿತು ಆಮ್ ಆದ್ಮಿ ಪಕ್ಷದ ಶಾಸಕ ಮತ್ತು ವಕ್ಪ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್‌  ವಿರೋಧವನ್ನು ವ್ಯಕ್ತಪಡಿಸಿದ್ದು, ಈ ನಿರ್ಧಾರವು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾದ  ಆತಂಕ, ಭಯ ಮತ್ತು ಅಸಮಾಧಾನವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಕೆಲವರನ್ನು ಸುಳ್ಳನ್ನು ಹರಡುತ್ತಿದ್ದಾರೆ. ನಾವು ವಕ್ಪ್ ಆಸ್ತಿಯನ್ನು ಯಾರಿಗೂ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು  ಅಮಾನತುಲ್ಲಾ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....