Homeಮುಖಪುಟದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

- Advertisement -
- Advertisement -

ದೆಹಲಿಯ ಜಾಮಾ ಮಸೀದಿ ಸೇರಿದಂತೆ  ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬುಧವಾರ ನೋಟಿಸ್ ನೀಡಿದೆ.

ಈ ಕುರಿತು ನೇಮಕವಾದ ಇಬ್ಬರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿದಂತೆ 123  ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು ಫೆಬ್ರವರಿಯಲ್ಲೇ ನಿರ್ಧರಿಸಿತ್ತು.

ಫೆಬ್ರವರಿ 8ರ ಪತ್ರದಲ್ಲಿ ಜಮೀನು ಮತ್ತು ಅಭಿವೃದ್ಧಿ ಅಧಿಕಾರಿಯೋರ್ವರು 123 ವಕ್ಫ್ ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ವಿಷಯಗಳಿಂದ ವಕ್ಪ್‌ನಿಂದ ಅದನ್ನು “ಮುಕ್ತಗೊಳಿಸುವ” ನಿರ್ಧಾರದ ಬಗ್ಗೆ ಮಂಡಳಿಗೆ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ಎಸ್‌ಪಿ ಗರ್ಗ್‌ ಅವರ ನೇತೃತ್ವದ ಸಮಿತಿಯೊಂದರ ಶಿಫಾರಸಿನ ಬಗ್ಗೆ ದಿಲ್ಲಿ ವಕ್ಫ್‌ ಮಂಡಳಿಯಿಂದ ಯಾವುದೇ ಮನವಿ ಅಥವಾ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಕೇಂದ್ರ ಸಚಿವಾಲಯದ ಜಮೀನು ಮತ್ತು ಅಭಿವೃದ್ಧಿ ಕಚೇರಿಯು ತಿಳಿಸಿದೆ.

ದಿಲ್ಲಿಯ ಜಾಮಾ ಮಸ್ಜಿದ್‌ ಸೇರಿದಂತೆ 123 ಆಸ್ತಿಗಳನ್ನು ವಕ್ಫ್‌ ಮಂಡಳಿಯಿಂದ ತನ್ನ ಸ್ವಾಧೀನಕ್ಕೆ ಪಡೆಯಲು ಕೇಂದ್ರ ಸರ್ಕಾರ ಆಗಸ್ಟ್‌ 22ರಂದು ನೋಟಿಸ್‌ ಹೊರಡಿಸಿದೆ ಎಂದು ವರದಿಯಾಗಿದೆ.

ಪಟ್ಟಿ ಮಾಡಲಾದ 123 ಆಸ್ತಿಗಳಲ್ಲಿ ದೆಹಲಿ ವಕ್ಫ್ ಬೋರ್ಡ್ ಯಾವುದೇ ಪಾಲನ್ನು ಹೊಂದಿಲ್ಲ. ಅಥವಾ ಅವರು  ವರದಿ ಕುರಿತು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ 123 ವಕ್ಫ್ ಆಸ್ತಿಗಳನ್ನು ದೆಹಲಿ ವಕ್ಫ್ ಮಂಡಳಿಯಿಂದ ವಶಕ್ಕೆ ಪಡೆಯಲಾಗುವುದು ಎಂದು ಜಮೀನು ಮತ್ತು ಅಭಿವೃದ್ಧಿ ಕಚೇರಿ ಪತ್ರದಲ್ಲಿ ತಿಳಿಸಿದೆ.

ನೊಟೀಸ್ ನೀಡಿರುವ ಕುರಿತು ಆಮ್ ಆದ್ಮಿ ಪಕ್ಷದ ಶಾಸಕ ಮತ್ತು ವಕ್ಪ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್‌  ವಿರೋಧವನ್ನು ವ್ಯಕ್ತಪಡಿಸಿದ್ದು, ಈ ನಿರ್ಧಾರವು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾದ  ಆತಂಕ, ಭಯ ಮತ್ತು ಅಸಮಾಧಾನವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಕೆಲವರನ್ನು ಸುಳ್ಳನ್ನು ಹರಡುತ್ತಿದ್ದಾರೆ. ನಾವು ವಕ್ಪ್ ಆಸ್ತಿಯನ್ನು ಯಾರಿಗೂ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು  ಅಮಾನತುಲ್ಲಾ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...