Homeಮುಖಪುಟದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

- Advertisement -
- Advertisement -

ದೆಹಲಿಯ ಜಾಮಾ ಮಸೀದಿ ಸೇರಿದಂತೆ  ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬುಧವಾರ ನೋಟಿಸ್ ನೀಡಿದೆ.

ಈ ಕುರಿತು ನೇಮಕವಾದ ಇಬ್ಬರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿದಂತೆ 123  ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು ಫೆಬ್ರವರಿಯಲ್ಲೇ ನಿರ್ಧರಿಸಿತ್ತು.

ಫೆಬ್ರವರಿ 8ರ ಪತ್ರದಲ್ಲಿ ಜಮೀನು ಮತ್ತು ಅಭಿವೃದ್ಧಿ ಅಧಿಕಾರಿಯೋರ್ವರು 123 ವಕ್ಫ್ ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ವಿಷಯಗಳಿಂದ ವಕ್ಪ್‌ನಿಂದ ಅದನ್ನು “ಮುಕ್ತಗೊಳಿಸುವ” ನಿರ್ಧಾರದ ಬಗ್ಗೆ ಮಂಡಳಿಗೆ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ಎಸ್‌ಪಿ ಗರ್ಗ್‌ ಅವರ ನೇತೃತ್ವದ ಸಮಿತಿಯೊಂದರ ಶಿಫಾರಸಿನ ಬಗ್ಗೆ ದಿಲ್ಲಿ ವಕ್ಫ್‌ ಮಂಡಳಿಯಿಂದ ಯಾವುದೇ ಮನವಿ ಅಥವಾ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಕೇಂದ್ರ ಸಚಿವಾಲಯದ ಜಮೀನು ಮತ್ತು ಅಭಿವೃದ್ಧಿ ಕಚೇರಿಯು ತಿಳಿಸಿದೆ.

ದಿಲ್ಲಿಯ ಜಾಮಾ ಮಸ್ಜಿದ್‌ ಸೇರಿದಂತೆ 123 ಆಸ್ತಿಗಳನ್ನು ವಕ್ಫ್‌ ಮಂಡಳಿಯಿಂದ ತನ್ನ ಸ್ವಾಧೀನಕ್ಕೆ ಪಡೆಯಲು ಕೇಂದ್ರ ಸರ್ಕಾರ ಆಗಸ್ಟ್‌ 22ರಂದು ನೋಟಿಸ್‌ ಹೊರಡಿಸಿದೆ ಎಂದು ವರದಿಯಾಗಿದೆ.

ಪಟ್ಟಿ ಮಾಡಲಾದ 123 ಆಸ್ತಿಗಳಲ್ಲಿ ದೆಹಲಿ ವಕ್ಫ್ ಬೋರ್ಡ್ ಯಾವುದೇ ಪಾಲನ್ನು ಹೊಂದಿಲ್ಲ. ಅಥವಾ ಅವರು  ವರದಿ ಕುರಿತು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ 123 ವಕ್ಫ್ ಆಸ್ತಿಗಳನ್ನು ದೆಹಲಿ ವಕ್ಫ್ ಮಂಡಳಿಯಿಂದ ವಶಕ್ಕೆ ಪಡೆಯಲಾಗುವುದು ಎಂದು ಜಮೀನು ಮತ್ತು ಅಭಿವೃದ್ಧಿ ಕಚೇರಿ ಪತ್ರದಲ್ಲಿ ತಿಳಿಸಿದೆ.

ನೊಟೀಸ್ ನೀಡಿರುವ ಕುರಿತು ಆಮ್ ಆದ್ಮಿ ಪಕ್ಷದ ಶಾಸಕ ಮತ್ತು ವಕ್ಪ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್‌  ವಿರೋಧವನ್ನು ವ್ಯಕ್ತಪಡಿಸಿದ್ದು, ಈ ನಿರ್ಧಾರವು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾದ  ಆತಂಕ, ಭಯ ಮತ್ತು ಅಸಮಾಧಾನವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಕೆಲವರನ್ನು ಸುಳ್ಳನ್ನು ಹರಡುತ್ತಿದ್ದಾರೆ. ನಾವು ವಕ್ಪ್ ಆಸ್ತಿಯನ್ನು ಯಾರಿಗೂ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು  ಅಮಾನತುಲ್ಲಾ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...