Homeಮುಖಪುಟಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

ಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಅರ್ನ್‌ಸ್ಟ್‌ ಆ್ಯಂಡ್‌ ಯಂಗ್‌ನಲ್ಲಿ (ಇವೈ) ಕೆಲಸ ಮಾಡುತ್ತಿದ್ದ 26 ವರ್ಷದ ಚಾರ್ಟರ್ಡ್‌ ಅಕೌಂಟೆಂಟ್‌ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಕೆಲಸದ ಒತ್ತಡದಿಂದ ಸಾವಿಗೀಡಾದ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕೇಂದ್ರ ಕಾರ್ಮಿಕ ಸಚಿವಾಲಯವು ಈ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಯುವತಿಯ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುವುದಾಗಿ ಗುರುವಾರ ತಿಳಿಸಿದೆ.

“ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಆಕೆಗೆ ನ್ಯಾಯ ದೊರಕಿಸಿ ಕೊಡುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಕೇಂದ್ರ  ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಮೃತ ಯುವತಿಯ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಳಿಕ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

“ಇದು ತುಂಬಾ ದುಃಖದ ವಿಷಯ ಮತ್ತು ಹಲವು ರೀತಿಯಲ್ಲಿ ಗೊಂದಲವನ್ನುಂಟುಮಾಡಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಕುರಿತು ಮೃತಳ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಲು ನಾನು ಭಾರತ ಸರ್ಕಾರದ ಸಚಿವರಾದ ಮನ್ಸುಖ್ ಮಾಂಡವೀಯ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಕೋರುತ್ತೇನೆ. ಅವರು (ಕಂಪನಿ) ಯುವತಿಯ ಅನ್ನಾ ಸೆಬಾಸ್ಟಿಯನ್‌ಳ ಭವಿಷ್ಯ ಮತ್ತು ಜೀವವನ್ನು ಬಲಿತೆಗೆದುಕೊಂಡಿದ್ದಾರೆ” ಎಂದು ರಾಜೀವ್ ಚಂದ್ರಶೇಖರ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದರು.

ಇವೈ ಕಂಪನಿಯ ಅಧ್ಯಕ್ಷ ರಾಜೀವ್ ಮೆಮಾನಿ ಅವರಿಗೆ ಪತ್ರವೊಂದನ್ನು ಬರೆದಿರುವ ಅನ್ನಾ ಅವರ ತಾಯಿ ಅನಿತಾ ಅಗಸ್ಟಿನ್ ಮನುಷ್ಯರಿಗೆ ಬೆಲೆ ಇಲ್ಲದ ಅಧಿಕ ಒತ್ತಡದ ಕಂಪನಿಯ ಕೆಲಸದ ವಾತಾವರಣವನ್ನು ಬದಲಾಯಿಸುವಂತೆ ಕೋರಿದ್ದರು.

ಪತ್ರಕ್ಕೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಕಂಪನಿ ” ಅನ್ನಾಳ ಸಾವು ನಮಗೆ ಅತೀವ ದುಖಃ ತಂದಿದೆ. ಆಕೆಯ ತಾಯಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿದೆ.

ಪುಣೆಯ ಯರವಾಡದಲ್ಲಿ ಇವೈ ಗ್ಲೋಬಲ್‌ನ ಸದಸ್ಯ ಸಂಸ್ಥೆಯಾದ ಎಸ್‌ಆರ್ ಬಟ್ಲಿಬೊಯ್ ಜೊತೆ ಕೆಲಸ ಮಾಡುತ್ತಿದ್ದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಜುಲೈ 20ರಂದು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದರು. ಆಕೆ ನಿರಾಳತೆ ಮತ್ತು ಬಳಲಿಕೆಗೆ ಒಳಗಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿರುವುದಾಗಿ ಸಹೋದ್ಯೋಗಿಗಳು ಹೇಳಿದ್ದಾರೆ.

ಮೃತ ಯುವತಿ ಅನ್ನಾ 2023ರಲ್ಲಿ ತನ್ನ ಸಿಎ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು, ಮಾರ್ಚ್ 2024ರಲ್ಲಿ ಇವೈ ಪುಣೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೆಲಸಕ್ಕೆ ಸೇರಿದ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಇವೈ ಕಂಪೆನಿಯ ವಿರುದ್ದ ಅನ್ನಾಳ ತಾಯಿ ಆರೋಪಿಸಿದ್ದಾರೆ. ಕಂಪೆನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಹೊಸ ಪರಿಸರ ಮತ್ತು ಆತಂಕ, ನಿದ್ರಾಹೀನತೆ ಮತ್ತು ಒತ್ತಡವನ್ನು ಅನುಭವಿಸಲು ಪ್ರಾರಂಭಿಸಿದ್ದಳು. ಆದರೆ, ಕಠಿಣ ಪರಿಶ್ರಮ ಯಶಸ್ಸಿಗೆ ಹಾದಿ ಎಂದು ನಂಬುತ್ತಾ ಅವಳು ತನ್ನನ್ನು ತಾನೇ ಬಲಿ ತೆಗೆದುಕೊಂಡಿದ್ದಾಳೆ ಹೇಳಿದ್ದಾರೆ.

ಇದನ್ನೂ ಓದಿ : ದೆಹಲಿ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿರುವ ಎಎಪಿ ನಾಯಕಿ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...