Homeಮುಖಪುಟಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

ಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಅರ್ನ್‌ಸ್ಟ್‌ ಆ್ಯಂಡ್‌ ಯಂಗ್‌ನಲ್ಲಿ (ಇವೈ) ಕೆಲಸ ಮಾಡುತ್ತಿದ್ದ 26 ವರ್ಷದ ಚಾರ್ಟರ್ಡ್‌ ಅಕೌಂಟೆಂಟ್‌ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಕೆಲಸದ ಒತ್ತಡದಿಂದ ಸಾವಿಗೀಡಾದ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕೇಂದ್ರ ಕಾರ್ಮಿಕ ಸಚಿವಾಲಯವು ಈ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಯುವತಿಯ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುವುದಾಗಿ ಗುರುವಾರ ತಿಳಿಸಿದೆ.

“ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಆಕೆಗೆ ನ್ಯಾಯ ದೊರಕಿಸಿ ಕೊಡುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಕೇಂದ್ರ  ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಮೃತ ಯುವತಿಯ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಳಿಕ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

“ಇದು ತುಂಬಾ ದುಃಖದ ವಿಷಯ ಮತ್ತು ಹಲವು ರೀತಿಯಲ್ಲಿ ಗೊಂದಲವನ್ನುಂಟುಮಾಡಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಕುರಿತು ಮೃತಳ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಲು ನಾನು ಭಾರತ ಸರ್ಕಾರದ ಸಚಿವರಾದ ಮನ್ಸುಖ್ ಮಾಂಡವೀಯ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಕೋರುತ್ತೇನೆ. ಅವರು (ಕಂಪನಿ) ಯುವತಿಯ ಅನ್ನಾ ಸೆಬಾಸ್ಟಿಯನ್‌ಳ ಭವಿಷ್ಯ ಮತ್ತು ಜೀವವನ್ನು ಬಲಿತೆಗೆದುಕೊಂಡಿದ್ದಾರೆ” ಎಂದು ರಾಜೀವ್ ಚಂದ್ರಶೇಖರ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದರು.

ಇವೈ ಕಂಪನಿಯ ಅಧ್ಯಕ್ಷ ರಾಜೀವ್ ಮೆಮಾನಿ ಅವರಿಗೆ ಪತ್ರವೊಂದನ್ನು ಬರೆದಿರುವ ಅನ್ನಾ ಅವರ ತಾಯಿ ಅನಿತಾ ಅಗಸ್ಟಿನ್ ಮನುಷ್ಯರಿಗೆ ಬೆಲೆ ಇಲ್ಲದ ಅಧಿಕ ಒತ್ತಡದ ಕಂಪನಿಯ ಕೆಲಸದ ವಾತಾವರಣವನ್ನು ಬದಲಾಯಿಸುವಂತೆ ಕೋರಿದ್ದರು.

ಪತ್ರಕ್ಕೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಕಂಪನಿ ” ಅನ್ನಾಳ ಸಾವು ನಮಗೆ ಅತೀವ ದುಖಃ ತಂದಿದೆ. ಆಕೆಯ ತಾಯಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿದೆ.

ಪುಣೆಯ ಯರವಾಡದಲ್ಲಿ ಇವೈ ಗ್ಲೋಬಲ್‌ನ ಸದಸ್ಯ ಸಂಸ್ಥೆಯಾದ ಎಸ್‌ಆರ್ ಬಟ್ಲಿಬೊಯ್ ಜೊತೆ ಕೆಲಸ ಮಾಡುತ್ತಿದ್ದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಜುಲೈ 20ರಂದು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದರು. ಆಕೆ ನಿರಾಳತೆ ಮತ್ತು ಬಳಲಿಕೆಗೆ ಒಳಗಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿರುವುದಾಗಿ ಸಹೋದ್ಯೋಗಿಗಳು ಹೇಳಿದ್ದಾರೆ.

ಮೃತ ಯುವತಿ ಅನ್ನಾ 2023ರಲ್ಲಿ ತನ್ನ ಸಿಎ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು, ಮಾರ್ಚ್ 2024ರಲ್ಲಿ ಇವೈ ಪುಣೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೆಲಸಕ್ಕೆ ಸೇರಿದ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಇವೈ ಕಂಪೆನಿಯ ವಿರುದ್ದ ಅನ್ನಾಳ ತಾಯಿ ಆರೋಪಿಸಿದ್ದಾರೆ. ಕಂಪೆನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಹೊಸ ಪರಿಸರ ಮತ್ತು ಆತಂಕ, ನಿದ್ರಾಹೀನತೆ ಮತ್ತು ಒತ್ತಡವನ್ನು ಅನುಭವಿಸಲು ಪ್ರಾರಂಭಿಸಿದ್ದಳು. ಆದರೆ, ಕಠಿಣ ಪರಿಶ್ರಮ ಯಶಸ್ಸಿಗೆ ಹಾದಿ ಎಂದು ನಂಬುತ್ತಾ ಅವಳು ತನ್ನನ್ನು ತಾನೇ ಬಲಿ ತೆಗೆದುಕೊಂಡಿದ್ದಾಳೆ ಹೇಳಿದ್ದಾರೆ.

ಇದನ್ನೂ ಓದಿ : ದೆಹಲಿ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿರುವ ಎಎಪಿ ನಾಯಕಿ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...