Homeಮುಖಪುಟಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

ಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಅರ್ನ್‌ಸ್ಟ್‌ ಆ್ಯಂಡ್‌ ಯಂಗ್‌ನಲ್ಲಿ (ಇವೈ) ಕೆಲಸ ಮಾಡುತ್ತಿದ್ದ 26 ವರ್ಷದ ಚಾರ್ಟರ್ಡ್‌ ಅಕೌಂಟೆಂಟ್‌ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಕೆಲಸದ ಒತ್ತಡದಿಂದ ಸಾವಿಗೀಡಾದ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕೇಂದ್ರ ಕಾರ್ಮಿಕ ಸಚಿವಾಲಯವು ಈ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಯುವತಿಯ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುವುದಾಗಿ ಗುರುವಾರ ತಿಳಿಸಿದೆ.

“ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಆಕೆಗೆ ನ್ಯಾಯ ದೊರಕಿಸಿ ಕೊಡುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಕೇಂದ್ರ  ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಮೃತ ಯುವತಿಯ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಳಿಕ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

“ಇದು ತುಂಬಾ ದುಃಖದ ವಿಷಯ ಮತ್ತು ಹಲವು ರೀತಿಯಲ್ಲಿ ಗೊಂದಲವನ್ನುಂಟುಮಾಡಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಕುರಿತು ಮೃತಳ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಲು ನಾನು ಭಾರತ ಸರ್ಕಾರದ ಸಚಿವರಾದ ಮನ್ಸುಖ್ ಮಾಂಡವೀಯ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಕೋರುತ್ತೇನೆ. ಅವರು (ಕಂಪನಿ) ಯುವತಿಯ ಅನ್ನಾ ಸೆಬಾಸ್ಟಿಯನ್‌ಳ ಭವಿಷ್ಯ ಮತ್ತು ಜೀವವನ್ನು ಬಲಿತೆಗೆದುಕೊಂಡಿದ್ದಾರೆ” ಎಂದು ರಾಜೀವ್ ಚಂದ್ರಶೇಖರ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದರು.

ಇವೈ ಕಂಪನಿಯ ಅಧ್ಯಕ್ಷ ರಾಜೀವ್ ಮೆಮಾನಿ ಅವರಿಗೆ ಪತ್ರವೊಂದನ್ನು ಬರೆದಿರುವ ಅನ್ನಾ ಅವರ ತಾಯಿ ಅನಿತಾ ಅಗಸ್ಟಿನ್ ಮನುಷ್ಯರಿಗೆ ಬೆಲೆ ಇಲ್ಲದ ಅಧಿಕ ಒತ್ತಡದ ಕಂಪನಿಯ ಕೆಲಸದ ವಾತಾವರಣವನ್ನು ಬದಲಾಯಿಸುವಂತೆ ಕೋರಿದ್ದರು.

ಪತ್ರಕ್ಕೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಕಂಪನಿ ” ಅನ್ನಾಳ ಸಾವು ನಮಗೆ ಅತೀವ ದುಖಃ ತಂದಿದೆ. ಆಕೆಯ ತಾಯಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿದೆ.

ಪುಣೆಯ ಯರವಾಡದಲ್ಲಿ ಇವೈ ಗ್ಲೋಬಲ್‌ನ ಸದಸ್ಯ ಸಂಸ್ಥೆಯಾದ ಎಸ್‌ಆರ್ ಬಟ್ಲಿಬೊಯ್ ಜೊತೆ ಕೆಲಸ ಮಾಡುತ್ತಿದ್ದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಜುಲೈ 20ರಂದು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದರು. ಆಕೆ ನಿರಾಳತೆ ಮತ್ತು ಬಳಲಿಕೆಗೆ ಒಳಗಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿರುವುದಾಗಿ ಸಹೋದ್ಯೋಗಿಗಳು ಹೇಳಿದ್ದಾರೆ.

ಮೃತ ಯುವತಿ ಅನ್ನಾ 2023ರಲ್ಲಿ ತನ್ನ ಸಿಎ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು, ಮಾರ್ಚ್ 2024ರಲ್ಲಿ ಇವೈ ಪುಣೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೆಲಸಕ್ಕೆ ಸೇರಿದ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಇವೈ ಕಂಪೆನಿಯ ವಿರುದ್ದ ಅನ್ನಾಳ ತಾಯಿ ಆರೋಪಿಸಿದ್ದಾರೆ. ಕಂಪೆನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಹೊಸ ಪರಿಸರ ಮತ್ತು ಆತಂಕ, ನಿದ್ರಾಹೀನತೆ ಮತ್ತು ಒತ್ತಡವನ್ನು ಅನುಭವಿಸಲು ಪ್ರಾರಂಭಿಸಿದ್ದಳು. ಆದರೆ, ಕಠಿಣ ಪರಿಶ್ರಮ ಯಶಸ್ಸಿಗೆ ಹಾದಿ ಎಂದು ನಂಬುತ್ತಾ ಅವಳು ತನ್ನನ್ನು ತಾನೇ ಬಲಿ ತೆಗೆದುಕೊಂಡಿದ್ದಾಳೆ ಹೇಳಿದ್ದಾರೆ.

ಇದನ್ನೂ ಓದಿ : ದೆಹಲಿ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿರುವ ಎಎಪಿ ನಾಯಕಿ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...