Homeಮುಖಪುಟಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

ಕೆಲಸದ ಒತ್ತಡದಿಂದ ಖಾಸಗಿ ಕಂಪನಿಯ ಉದ್ಯೋಗಿ ಸಾವು ಪ್ರಕರಣ : ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಅರ್ನ್‌ಸ್ಟ್‌ ಆ್ಯಂಡ್‌ ಯಂಗ್‌ನಲ್ಲಿ (ಇವೈ) ಕೆಲಸ ಮಾಡುತ್ತಿದ್ದ 26 ವರ್ಷದ ಚಾರ್ಟರ್ಡ್‌ ಅಕೌಂಟೆಂಟ್‌ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಕೆಲಸದ ಒತ್ತಡದಿಂದ ಸಾವಿಗೀಡಾದ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕೇಂದ್ರ ಕಾರ್ಮಿಕ ಸಚಿವಾಲಯವು ಈ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಯುವತಿಯ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುವುದಾಗಿ ಗುರುವಾರ ತಿಳಿಸಿದೆ.

“ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಅವರ ದುರಂತ ಸಾವಿನಿಂದ ತೀವ್ರ ದುಃಖವಾಗಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಆಕೆಗೆ ನ್ಯಾಯ ದೊರಕಿಸಿ ಕೊಡುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ಕಾರ್ಮಿಕ ಸಚಿವಾಲಯವು ಅಧಿಕೃತವಾಗಿ ದೂರನ್ನು ಕೈಗೆತ್ತಿಕೊಂಡಿದೆ” ಎಂದು ಕೇಂದ್ರ  ಕಾರ್ಮಿಕ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಮೃತ ಯುವತಿಯ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಳಿಕ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

“ಇದು ತುಂಬಾ ದುಃಖದ ವಿಷಯ ಮತ್ತು ಹಲವು ರೀತಿಯಲ್ಲಿ ಗೊಂದಲವನ್ನುಂಟುಮಾಡಿದೆ. ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಕುರಿತು ಮೃತಳ ತಾಯಿ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಲು ನಾನು ಭಾರತ ಸರ್ಕಾರದ ಸಚಿವರಾದ ಮನ್ಸುಖ್ ಮಾಂಡವೀಯ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಕೋರುತ್ತೇನೆ. ಅವರು (ಕಂಪನಿ) ಯುವತಿಯ ಅನ್ನಾ ಸೆಬಾಸ್ಟಿಯನ್‌ಳ ಭವಿಷ್ಯ ಮತ್ತು ಜೀವವನ್ನು ಬಲಿತೆಗೆದುಕೊಂಡಿದ್ದಾರೆ” ಎಂದು ರಾಜೀವ್ ಚಂದ್ರಶೇಖರ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದರು.

ಇವೈ ಕಂಪನಿಯ ಅಧ್ಯಕ್ಷ ರಾಜೀವ್ ಮೆಮಾನಿ ಅವರಿಗೆ ಪತ್ರವೊಂದನ್ನು ಬರೆದಿರುವ ಅನ್ನಾ ಅವರ ತಾಯಿ ಅನಿತಾ ಅಗಸ್ಟಿನ್ ಮನುಷ್ಯರಿಗೆ ಬೆಲೆ ಇಲ್ಲದ ಅಧಿಕ ಒತ್ತಡದ ಕಂಪನಿಯ ಕೆಲಸದ ವಾತಾವರಣವನ್ನು ಬದಲಾಯಿಸುವಂತೆ ಕೋರಿದ್ದರು.

ಪತ್ರಕ್ಕೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಕಂಪನಿ ” ಅನ್ನಾಳ ಸಾವು ನಮಗೆ ಅತೀವ ದುಖಃ ತಂದಿದೆ. ಆಕೆಯ ತಾಯಿ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದಿದೆ.

ಪುಣೆಯ ಯರವಾಡದಲ್ಲಿ ಇವೈ ಗ್ಲೋಬಲ್‌ನ ಸದಸ್ಯ ಸಂಸ್ಥೆಯಾದ ಎಸ್‌ಆರ್ ಬಟ್ಲಿಬೊಯ್ ಜೊತೆ ಕೆಲಸ ಮಾಡುತ್ತಿದ್ದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರಯಿಲ್ ಜುಲೈ 20ರಂದು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದರು. ಆಕೆ ನಿರಾಳತೆ ಮತ್ತು ಬಳಲಿಕೆಗೆ ಒಳಗಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿರುವುದಾಗಿ ಸಹೋದ್ಯೋಗಿಗಳು ಹೇಳಿದ್ದಾರೆ.

ಮೃತ ಯುವತಿ ಅನ್ನಾ 2023ರಲ್ಲಿ ತನ್ನ ಸಿಎ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು, ಮಾರ್ಚ್ 2024ರಲ್ಲಿ ಇವೈ ಪುಣೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕೆಲಸಕ್ಕೆ ಸೇರಿದ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಇವೈ ಕಂಪೆನಿಯ ವಿರುದ್ದ ಅನ್ನಾಳ ತಾಯಿ ಆರೋಪಿಸಿದ್ದಾರೆ. ಕಂಪೆನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಹೊಸ ಪರಿಸರ ಮತ್ತು ಆತಂಕ, ನಿದ್ರಾಹೀನತೆ ಮತ್ತು ಒತ್ತಡವನ್ನು ಅನುಭವಿಸಲು ಪ್ರಾರಂಭಿಸಿದ್ದಳು. ಆದರೆ, ಕಠಿಣ ಪರಿಶ್ರಮ ಯಶಸ್ಸಿಗೆ ಹಾದಿ ಎಂದು ನಂಬುತ್ತಾ ಅವಳು ತನ್ನನ್ನು ತಾನೇ ಬಲಿ ತೆಗೆದುಕೊಂಡಿದ್ದಾಳೆ ಹೇಳಿದ್ದಾರೆ.

ಇದನ್ನೂ ಓದಿ : ದೆಹಲಿ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿರುವ ಎಎಪಿ ನಾಯಕಿ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...