Homeಅಂಕಣಗಳುತಜ್ಞರ ಸಮಾಲೋಚನೆಯಿಲ್ಲದೆ ಕ್ರಿಮಿನಲ್ ಕಾನೂನುಗಳ ಬದಲಾವಣೆ; ಮುಂದಿನ ಟಾರ್ಗೆಟ್ ಸಂವಿಧಾನವೇ?

ತಜ್ಞರ ಸಮಾಲೋಚನೆಯಿಲ್ಲದೆ ಕ್ರಿಮಿನಲ್ ಕಾನೂನುಗಳ ಬದಲಾವಣೆ; ಮುಂದಿನ ಟಾರ್ಗೆಟ್ ಸಂವಿಧಾನವೇ?

- Advertisement -
- Advertisement -

ಐಪಿಸಿ, ಸಿಆರ್‌ಪಿಸಿ ಮತ್ತು ಐಇಎ ಕಾನೂನುಗಳಲ್ಲಿದ್ದ ವಸಾಹತು ಕುರುಹುಗಳನ್ನು ತೆಗೆದಿದ್ದೇವೆ ಎಂದು ಪ್ರತಿಪಾದಿಸಿಕೊಂಡು, ಬದಲಾದ ಮಸೂದೆಗಳನ್ನು ಸಂಸ್ಕೃತ ಶೀರ್ಷಿಕೆಗಳಿಂದ ಮರುನಾಮಕರಣ ಮಾಡಿ ಗೃಹ ಸಚಿವ ಅಮಿತ್ ಶಾ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದರು. ಬದಲಾದ ಈ ಮೂರು ಮಸೂದೆಗಳನ್ನು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಗೆ ಕಳುಹಿಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ತಿಳಿಸಿದ್ದಾರೆ. ದೇಶದಾದ್ಯಂತ ಹಲವು ತಜ್ಞರು ಈ ಕಾನೂನುಗಳ ಬದಲಾವಣೆಗಳ ಬಗ್ಗೆ ಅಸಮಾಧಾನ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ. ಗೃಹಸಚಿವರು ಆಡಿದ ವಸಾಹತುಶಾಹಿ ಕಾನೂನನ್ನು ಸರಿಪಡಿಸಿದ್ದೇವೆ ಎಂಬ ಮಾತುಗಳ ಮರ್ಮದ ಸತ್ಯಾಸತ್ಯತೆಯನ್ನು ಈ ಒಂದು ಉದಾಹರಣೆಯ ಮೂಲಕ ಅವಲೋಕಿಸಬಹುದು. ಸೆಡಿಷನ್ ಅಥವಾ ಐಪಿಸಿಯ 124ಎ ಅಡಿಯ ದೇಶದ್ರೋಹ ಕಾನೂನು ಅಂತಹ ಒಂದು ವಸಾಹತು ಪಳೆಯುಳಿಕೆ. ಇದರ ದುರುಪಯೋಗದ ಬಗ್ಗೆ ದೇಶದಾದ್ಯಂತ ನೂರಾರು ಟೀಕೆಗಳು ಬಂದಿದ್ದವು. ಜಗತ್ತಿನಾದ್ಯಂತ (ಭಾರತದಲ್ಲಿ ಅದನ್ನು ಪರಿಚಯಿಸಿದ ಬ್ರಿಟನ್ ಸೇರಿದಂತೆ) ಹಲವು ದೇಶಗಳು ದೇಶದ್ರೋಹ ಕಾನೂನನ್ನು ತೊಡೆದುಹಾಕಿರುವ ಹಿನ್ನೆಲೆಯಲ್ಲಿ ಭಾರತಲ್ಲೂ ಅದನ್ನು ನಿರ್ಮೂಲನೆ ಮಾಡುವ ಕೂಗು ಹೆಚ್ಚಿತು. ಮೇ 2022ರಲ್ಲಿ ಸುಪ್ರೀಂಕೋರ್ಟ್ ತನ್ನ ತೀರ್ಪೊಂದರಲ್ಲಿ ದೇಶದ್ರೋಹ ಕಾನೂನನ್ನು ಅಮಾನತ್ತಿನಲ್ಲಿಟ್ಟು, ಇದರ ಬಗ್ಗೆ ನಿಲುವು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ನಂತರ ಕೇಂದ್ರ ಸರ್ಕಾರ ರಚಿಸಿದ್ದ ರಿತುಲಾಲ್ ಅವಸ್ಥಿ ನೇತೃತ್ವದ 22ನೇ ಕಾನೂನು ಆಯೋಗ ’124ಎ’ಅನ್ನು ಉಳಿಸಿಕೊಳ್ಳುವಂತೆ ಆಘಾತಕಾರಿ ಶಿಫಾರಸ್ಸು ನೀಡಿತು. ಕರ್ನಾಟಕದ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಾಧೀಶರಾಗಿದ್ದಾಗ, ಕರ್ನಾಟಕ ಬಿಜೆಪಿ ಸರ್ಕಾರ ಆದೇಶಿಸಿದ್ದ, ’ಶಾಲೆಗಳಲ್ಲಿ ಹಿಜಾಬ್ ನಿಷೇಧ’ವನ್ನು ಎತ್ತಿಹಿಡಿದಿದ್ದವರು ಅವಸ್ಥಿ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳುವುದು ಮುಖ್ಯವಾದೀತು. ಈಗ ವಸಾಹತು ಪಳೆಯುಳಿಕೆ ಸೆಡಿಶನ್‌ಅನ್ನು ತೆಗೆದುಹಾಕಿದ್ದೇವೆ ಎಂದು ಘೋಷಿಸಿಕೊಂಡಿರುವ ಅಮಿತ್ ಶಾ, ಐಪಿಸಿ ಬದಲು ಮಂಡಿಸಿರುವ ಭಾರತೀಯ ನ್ಯಾಯಸಂಹಿತಾ 2023ನ ಸೆಕ್ಷನ್ 150ರಲ್ಲಿ ’ದೇಶದ್ರೋಹ’ ಹೆಸರನ್ನಷ್ಟೇ ಕೈಬಿಟ್ಟು, ಅದರ ಕರಾಳತೆಯನ್ನು ಇನ್ನಷ್ಟು ವಿಸ್ತರಿಸಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ! ಹೀಗೆ ದೇಶವನ್ನು ಕರಾಳತೆಯತ್ತ ಒಯ್ಯಲು ಮಾಡುತ್ತಿರುವ ಕಾನೂನು ತಿದ್ದುಪಡಿಗಳ ಪರ್ವವನ್ನು ಈ ಸರ್ಕಾರ ಮುಂದುವರಿಸಿದೆ. ಇದರ ಬೆನ್ನಲ್ಲೇ ಸಂಘಪರಿವಾರದ ದೀರ್ಘಕಾಲದ ಯೋಜನೆಯಾದ ಸಂವಿಧಾನ ಬದಲಾವಣೆಯ ಮಾತುಗಳನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಂಬಂಧಿಸಿದವರು ಮತ್ತೆ ಮುನ್ನಲೆಗೆ ತಂದಿದ್ದಾರೆ.

ಅಮಿತ್ ಶಾ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ವಿವಾದಾತ್ಮಕ ಮತ್ತು ಬಿಜೆಪಿಗೆ ಸಹಾಯವಾಗುವಂತಹ ತೀರ್ಪು ನೀಡಿದ ಪೀಠದಲ್ಲಿದ್ದ ಅಂದಿನ ಸುಪ್ರೀಂಕೋರ್ಟ್ ನ್ಯಾಯಾಧೀಶ ರಂಜನ್ ಗೊಗೊಯ್ ಅವರು ಈಗ ಬಿಜೆಪಿ ಪಕ್ಷ ನಾಮನಿರ್ದೇಶನ ಮಾಡಿರುವ ರಾಜ್ಯಸಭಾ ಸದಸ್ಯ. ಮುಂಗಾರು ಸಂಸತ್ ಅಧಿವೇಶನದಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ರಂಜನ್ ಗೊಗೊಯ್ ಅವರು ಆಗಸ್ಟ್ 8ರಂದು “ಭಾರತದ ಸಂವಿಧಾನದ ಮೂಲ ರಚನೆಯ ಸಿದ್ಧಾಂತ ನ್ಯಾಯದಾನ ವ್ಯವಸ್ಥೆಯ ಆಧಾರದಲ್ಲಿ ಚರ್ಚಾಸ್ಪದವಾದುದು” ಎಂದು ಹೇಳುವ ಮೂಲಕ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದರು. ಈಗಿರುವ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಸಂವಿಧಾನಕ್ಕೆ ತರಲಾಗುವ ಯಾವುದೇ ತಿದ್ದುಪಡಿ ಭಾರತದ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವಂತಿಲ್ಲ. ಈ ತೀರ್ಪು, ಮಾನವ ಹಕ್ಕುಗಳಿಗೆ ಕವಡೆ ಕಿಮ್ಮತ್ತು ನೀಡದ ಸಂಘಪರಿವಾರಕ್ಕೆ ಮನುಧರ್ಮಶಾಸ್ತ್ರದ ಕುಟಿಲ ನೀತಿಗಳನ್ನು ಸಂವಿಧಾನಕ್ಕೆ ತರಲು ಕೈಕಟ್ಟಿಹಾಕಿದೆ. ಆದುದರಿಂದ ಅವಕಾಶ ಸಿಕ್ಕಾಗಲೆಲ್ಲಾ ಸಂವಿಧಾನವನ್ನು ಬದಲಿಸುವ ಮಾತನ್ನಾಡುವುದರ ಜೊತೆಗೆ ಅದು ಏನೋ ಸಾಮಾನ್ಯ ಸಂಗತಿ ಎಂಬಂತೆ ಜನರ ಮನಸ್ಸಿನಲ್ಲಿ ಭಾವನೆ ಮೂಡಿಸುವುದಕ್ಕೆ, ಅವರಲ್ಲಿ ಅದರ ಬಗ್ಗೆ ಒಪ್ಪಿಗೆಯನ್ನು ಉತ್ಪಾದಿಸುವುದಕ್ಕೆ ನಾಗಪುರದ ಗಿಡುಗಗಳು ಸದಾ ಪ್ರಯತ್ನಿಸುತ್ತಿರುತ್ತವೆ. ಇದು ರಂಜನ್ ಗೊಗೊಯ್ ಅವರ ಹೇಳಿಕೆಗೆ ಮಾತ್ರ ನಿಲ್ಲದೆ ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಸಮಿತಿಯ ಮುಖ್ಯಸ್ಥ ಬಿಬೇಕ್ ದೇಬರಾಯ್ ಎನ್ನುವ ವ್ಯಕ್ತಿ ’ಮಿಂಟ್’ ದಿನಪತ್ರಿಕೆಯಲ್ಲಿ ಬರಹವೊಂದನ್ನು ಬರೆದು ’ನಾವು ಜನಗಳು’ ಹೊಸ ಸಂವಿಧಾನವನ್ನು ಅಪ್ಪಿಕೊಳ್ಳಬೇಕೆಂದು ವಾದಮಾಡಿ ಕರೆ ನೀಡುತ್ತಾರೆ. ಅಷ್ಟಕ್ಕೇ ನಿಲ್ಲದೆ ಭಾರತದ ಸಂವಿಧಾನ ಮುಖ್ಯವಾಗಿ 1935ರ ಗವರ್ನಮೆಂಟ್ ಆಫ್ ಇಂಡಿಯಾ ಆಕ್ಟ್‌ನ ಆಧಾರದಲ್ಲಿ ರೂಪಿತವಾಗಿದೆ ಎಂಬ ಅರ್ಧಸತ್ಯವನ್ನು ಹೇಳಿ ಅದಕ್ಕೆ ವಸಾಹತುಶಾಹಿ ಪರಂಪರೆಯ ಸಂಬಂಧವಿದೆ ಎನ್ನುವ ಮೂಲಕ ಬದಲಾವಣೆ ಮಾಡಲು ಸಜ್ಜಾಗಿರುವ ಬಗ್ಗೆ ಹಿಂಟ್ ಕೂಡ ನೀಡುತ್ತಾರೆ. ಕೆಲವು ವರ್ಷಗಳ ಹಿಂದೆ ಕರ್ನಾಟಕದ ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನ ಬದಲಿಸುವ ಬಗ್ಗೆ ಕರೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದನ್ನು ಕೂಡ ಇಲ್ಲಿ ನೆನಪಿಸಿಕೊಳ್ಳಬೇಕಿದೆ. ಈಗ ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ದೇಬರಾಯ್ ಅವರ ವೈಯಕ್ತಿಕ ಅಭಿಪ್ರಾಯಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿಕೊಂಡಿದ್ದರೂ, ಸಂಘ ಪರಿವಾರ ಮತ್ತು ಬಿಜೆಪಿ ಎರಡು ನಾಲಗೆಯಲ್ಲಿ ಮಾತನಾಡುವ ಗುಣ ಇಂದು ನಿನ್ನೆಯದೇನಲ್ಲ ಎಂಬುದು ತಿಳಿದಿರುವ ಸಂಗತಿಯೇ!

ಇದನ್ನೂ ಓದಿ: “ದೇಶದ್ರೋಹ” ಕಾನೂನನ್ನು ರದ್ದು ಮಾಡಿ, ಹೊಸ ಕಾನೂನಿನಡಿ 7 ವರ್ಷ ಜೈಲು-ಅಮಿತ್ ಶಾ

ಸಂವಿಧಾನದ ಪ್ರಮುಖ ರೂವಾರಿ, ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ದೇಶದ ಎಲ್ಲ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಂವಿಧಾನವನ್ನು ಭಾರತಕ್ಕೆ ನೀಡಿದ ಬಾಬಾಸಾಹೇಬ ಅಂಬೇಡ್ಕರ್ ಅವರು ಈಗಾಗಲೇ, ಈ ದೇಬರಾಯ್ ಈಗ ಎತ್ತುತ್ತಿರುವ ಬಹುತೇಕ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಿದ್ದರೂ, ಇಂತಹ ದಾರ್ಷ್ಟ್ಯತನವನ್ನು ಮೆರೆಯುವ ಈ ಸಂಘಪರಿವಾರದವರಿಗೆ ಬಾಬಾಸಾಹೇಬರ ಮಾತುಗಳನ್ನೇ ಮುಖಕ್ಕೆ ಹಿಡಿಯಬೇಕಿದೆ. ಭಾರತ ಸಂವಿಧಾನದ ಮೊದಲ ಕರಡನ್ನು ಅರ್ಪಿಸಿ ಮಾಡುವ ಭಾಷಣದಲ್ಲಿ ಅಂಬೇಡ್ಕರ್ ಹೇಳುವ ಈ ಮಾತುಗಳನ್ನು ನೋಡೋಣ: “ಜಗತ್ತಿನ ಇತಿಹಾಸದ ಈ ಸಂದರ್ಭದಲ್ಲಿ ರಚಿಸಲಾದ ಸಂವಿಧಾನದಲ್ಲಿ ಏನಾದರೂ ಹೊಸದು ಇರಬಹುದೇ ಎಂದು ಯಾರಿಗಾದರೂ ಪ್ರಶ್ನೆ ಮೂಡಬಹುದು. ಮೊದಲ ಲಿಖಿತ ಸಂವಿಧಾನದ ಕರಡು ರಚನೆಯಾಗಿ ಸುಮಾರು ನೂರು ವರ್ಷಗಳಿಗಿಂತಲೂ ಹೆಚ್ಚುಕಾಲ ಸರಿದಿದೆ. ಬಹಳಷ್ಟು ದೇಶಗಳು ತಮ್ಮ ಸಂವಿಧಾನಗಳನ್ನು ಲಿಖಿತ ಸಂವಿಧಾನವನ್ನಾಗಿಸಿಕೊಂಡಿವೆ. ಸಂವಿಧಾನದ ಆಳ-ಅಗಲವನ್ನು ನಿಶ್ಚಯಿಸಲಾಗಿದೆ. ಅದೇರೀತಿ ಜಗತ್ತಿನಾದ್ಯಂತ ಸಂವಿಧಾನದ ಮೂಲ ಗುಣಗಳನ್ನು ಕೂಡ ಗುರುತಿಸಲಾಗಿದೆ. ಈ ವಾಸ್ತವಾಂಶಗಳ ಹಿನ್ನೆಲೆಯಲ್ಲಿ, ಮುಖ್ಯ ಅಂಶಗಳಲ್ಲಿ ಸಂವಿಧಾನ ಒಂದೇ ರೀತಿ ಕಾಣುವುದು ಸಾಮಾನ್ಯ. ಇಷ್ಟು ತಡವಾಗಿ ರೂಪುಗೊಂಡ ಸಂವಿಧಾನದಲ್ಲಿ ಏನಾದರೂ ಹೊಸತು ಇರುವುದಾದರೆ, ಹಿಂದಿನ ತಪ್ಪುಗಳನ್ನು ಸರಿಪಡಿಸಿರುವ ಬದಲಾವಣೆಗಳು ಮತ್ತು ದೇಶದ ಅಗತ್ಯಗಳಿಗೆ ತಕ್ಕಂತೆ ಅದನ್ನು ಅಳವಡಿಸಿಕೊಂಡಿರುವುದು. ಬೇರೆ ದೇಶಗಳ ಸಂವಿಧಾನಗಳನ್ನು ಕುರುಡಾಗಿ ನಕಲು ಮಾಡಲಾಗಿದೆ ಎಂಬ ಆರೋಪ, ಸಂವಿಧಾನವನ್ನು ಸರಿಯಾಗಿ ಆಧ್ಯಯನ ಮಾಡದೆ ಇರುವುದರಿಂದ ಮೂಡಿರುವಂಥದ್ದು ಎಂದು ನಾನು ಖಂಡಿತವಾಗಿ ಹೇಳಬಲ್ಲೆ” ಎನ್ನುತ್ತಾರೆ. ಅಲ್ಲದೆ 1935ರ ಗವರ್ನಮೆಂಟ್ ಆಫ್ ಇಂಡಿಯಾ ಆಕ್ಟ್‌ನ ಹಲವು ಅಂಶಗಳನ್ನು ಒಳಗೊಂಡಿದೆ ಎಂಬ ಆರೋಪಕ್ಕೆ “ನಾನು ಇದಕ್ಕೆ ಯಾವ ವಿಶಾದವನ್ನೂ ವ್ಯಕ್ತಪಡಿಸುವುದಿಲ್ಲ. ಒಂದರಿಂದ ತೆಗೆದುಕೊಳ್ಳುವುದಕ್ಕೆ ಯಾವ ನಾಚಿಕೆಯೂ ಇರಬೇಕಿಲ್ಲ. ಇದು ನಕಲು ಅಲ್ಲ. ಸಂವಿಧಾನದ ಮೂಲ ಚಿಂತನೆಗಳಿಗೆ ಯಾರೂ ಪೇಟೆಂಟ್ ಹೊಂದಿಲ್ಲ” ಎನ್ನುತ್ತಾರೆ ಬಾಬಾಸಾಹೇಬರು.

ಇಲ್ಲಿಯವರೆಗೂ ಮನುಧರ್ಮಶಾಸ್ತ್ರವೇ ತಮ್ಮ ಸಂವಿಧಾನ ಎಂದು ಪ್ರತಿಪಾದಿಸಿಕೊಂಡು ಬಂದು, ಭಾರತದ ಸಂವಿಧಾನದ ಬಗ್ಗೆ ಹಾಗೂ ಸಾಂವಿಧಾನಿಕ ನೈತಿಕತೆಯ ಬಗ್ಗೆ ಮೂರು ಪೈಸೆಯ ಗೌರವವನ್ನೂ ತೋರದ ಸಂಘ ಪರಿವಾರಿಗಳು ಈಗ ಸಂವಿಧಾನ ಬದಲಿಸುವ ಮಾತನ್ನಾಡುತ್ತಿರುವುದು ಕುಚೋದ್ಯವೇ ಸರಿ. ಮೇಲೆ ಹೇಳಿದ ಭಾಷಣದ ಕೊನೆಗೆ ಬಾಬಾಸಾಹೇಬರು ಹೇಳುವ ಮಾತುಗಳನ್ನು, ಸಂವಿಧಾನ ಬದಲಾವಣೆಯನ್ನು ಪ್ರತಿಪಾದಿಸುವವರ ಮುಖಕ್ಕೆ ಹಿಡಿಯಬೇಕಿದೆ: “ನನಗೆ ಇದು ಕಾರ್ಯಗತವಾಗುವ, ಹೊಂದಾಣಿಕೆಗೆ ಸಾಧ್ಯ ಮಾಡಿಕೊಡುವ ಮತ್ತು ಶಾಂತಿ ಹಾಗೂ ಯುದ್ಧದ ಸಮಯದಲ್ಲಿಯೂ ದೇಶವನ್ನು ಒಟ್ಟಿಗೆ ಹಿಡಿದಿಡುವುದಕ್ಕೆ ಬಲಶಾಲಿಯಾಗಿದೆ (ಸಂವಿಧಾನ). ಬಹುಶಃ ನಾನು ಹೀಗೆ ಹೇಳಬಹುದಾದರೆ, ಹೊಸ ಸಂವಿಧಾನದಡಿಯಲ್ಲಿ ಅಂದುಕೊಳ್ಳದಂತೆ ಆಗದೆ, ಹಳ್ಳ ಹಿಡಿದರೆ, ಅದಕ್ಕೆ ಕಾರಣ ನಾವು ಕೆಟ್ಟ ಸಂವಿಧಾನ ಹೊಂದಿದ್ದೆವು ಅಂತಲ್ಲ. ನಾವು ಏನು ಹೇಳಬೇಕಾಗಬಹುದು ಅಂದರೆ ಮನುಷ್ಯ ಕೆಟ್ಟವನಾಗಿದ್ದ ಎಂದು”.

ಹೀಗೆ ಉದಾತ್ತವಾದ ನಮ್ಮ ಭಾರತ ಸಂವಿಧಾನವನ್ನು ಬಳಸಿಕೊಂಡು ದೇಶಕ್ಕೆ ಸರಿಯಾದ ಮಾರ್ಗವನ್ನು ಕಲ್ಪಿಸಿಕೊಡಲು ಸಾಧ್ಯವಾಗದ ’ಕೆಟ್ಟ’ ಮನುಷ್ಯರಷ್ಟೇ ಸಂವಿಧಾನದ ಮೂಲ ರಚನೆಯನ್ನು ಬದಲಿಸುವ ಮಾತುಗಳನ್ನಾಡಬಲ್ಲರು. ಒಳ್ಳೆಯ ಉದ್ದೇಶವಿದ್ದವರು ಎಂದಿಗೂ ಆಡುವ ಮಾತುಗಳಲ್ಲ ಅವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...