Homeಕರೋನಾ ತಲ್ಲಣಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

ಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

- Advertisement -
- Advertisement -

ದೇಶಾದ್ಯಂತ ಅಪ್ಪಳಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಕುರಿತು ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಒಕ್ಕೂಟ ಸರ್ಕಾರ ತನ್ನ ವೈಫಲ್ಯವನ್ನು ರಾಜ್ಯ ಸರ್ಕಾರದ ಮೇಲೆ ಹೇರಿತ್ತು. ಈಗ ರಾಜ್ಯಗಳಿಂದ ಅಂಕಿ ಅಂಶಗಳನ್ನೇ ಕೇಳಿಲ್ಲ ಎಂದು ಛತ್ತಿಸ್‌ಘಡ ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

“ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ರೋಗಿಗಳು ಬಲಿಯಾಗಿದ್ದಾರೆಯೇ ಎಂದು ತಿಳಿಯಲು ರಾಜ್ಯ ಸರ್ಕಾರವು ದಾಖಲಾದ ಸಾವುಗಳ ಮರು ಲೆಕ್ಕಪರಿಶೋಧನೆ ನಡೆಸುತ್ತಿದೆ” ಎಂದು ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಮಾಹಿತಿ ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ಜುಲೈ 20 ರಂದು ರಾಜ್ಯಸಭೆಯಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಆಕ್ಸಿಜನ್‌ ಕೊರತೆಯ ಸಾವುಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರದಿಯನ್ನು ನೀಡಿಲ್ಲ ಎಂದು ಹೇಳಿತ್ತು. ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

“ಭಾರತ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಮದ ನಿರಂತರವಾಗಿ ಮಾಹಿತಿ ನೀಡಲಾಗಿದೆ. ಆದರೆ, ಅವರು ಆಮ್ಲಜನಕದ ಕೊರತೆಯಿಂದ ಉಂಟಾಗುವ ಸಾವುಗಳ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕೇಳಲಿಲ್ಲ. ಈಗ ರಾಜ್ಯಗಳು ಸರಿಯಾದ ಡೇಟಾ ನೀಡಲ್ಲ ಎಂದು ಹೇಳುತ್ತಿದ್ದಾರೆ. ಇದು ಅವರ ವೈಫಲ್ಯ ಅಸಮರ್ಥತೆಯನ್ನು ಮುಚ್ಚಿಕೊಳ್ಳಲು ಹೇಳುತ್ತಿರುವ ದುರುದ್ದೇಶದ ಹೇಳಿಕೆಯಾಗಿದೆ” ಎಂದು ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

“ಛತ್ತಿಸ್‌ಘಡ ರಾಜ್ಯದಲ್ಲಿ ಆಕ್ಸಿಜನ್‌ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗಿದೆ. ಹೀಗಾಗಿ ನಾವು ಆಕ್ಸಿಜನ್‌ ಕೊರತೆಗೆ ಸಂಬಂಧಿಸಿದ ಸಾವುಗಳನ್ನು ದಾಖಲಿಸಿಲ್ಲ. ಆದರೆ, ಈ ಬಗ್ಗೆ ನಾವು ಮೊಂಡುತನವನ್ನು ಪ್ರದರ್ಶಿಸುವುದಿಲ್ಲ. ನಾವು ಆಕ್ಸಿಜನ್‌ ಸಾವುಗಳ ಬಗ್ಗೆ ಜನರು ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಸಿದ್ದರಿದ್ದೇವೆ. ಆಕ್ಸಿಜನ್‌ ಸಂಬಂಧಿತ ಸಾವುಗಳ ಬಗ್ಗೆ ಮರು ಪರಿಶೀಲನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೂ, ಕೆಲವು ದೂರುಗಳನ್ನು ಪಡೆಯಲಾಗಿದೆ. ಹಾಗಾಗಿ, ಎಲ್ಲಾ ಅನುಮಾನಗಳನ್ನು ಹೋಗಲಾಡಿಸಲು ನಾವು ಮತ್ತೆ ಸಾವುಗಳ ಅಂಕಿಅಂಶಗಳನ್ನು ಮರು ಲೆಕ್ಕಪರಿಶೋಧನೆ ಮಾಡುತ್ತಿದ್ದೇವೆ” ಎಂದು ಸಿಂಗ್ ಡಿಯೋ ತಿಳಿಸಿದ್ದಾರೆ.

ದೇಶಾದ್ಯಂತ ಇದೇ ರೀತಿಯ ಸಾವುಗಳ ಲೆಕ್ಕಪರಿಶೋಧನೆ ನಡೆಸಬೇಕೆಂದು ಒಕ್ಕೂಟ ಸರ್ಕಾರವನ್ನು ಸಿಂಗ್ ಡಿಯೋ ಒತ್ತಾಯಿಸಿದ್ದಾರೆ. “ಯಾವುದೇ ಪುರಾವೆಗಳಿಲ್ಲದೆ ಲಸಿಕೆ ವ್ಯರ್ಥವಾಗಿದೆಯೆಂದು ಕೇಂದ್ರವು ಛತ್ತಿಸ್‌ಘಡದ ಮೇಲೆ ಆರೋಪ ಮಾಡುತ್ತಿದೆ. ಈ ರೀತಿ ದೇಶಾದ್ಯಂತ ತಮ್ಮ ತಂಡಗಳನ್ನು ಕಳುಹಿಸುವ ಮೂಲಕ ಎಷ್ಟು ಸಾವುಗಳು ಸಂಭವಿಸಿವೆ ಎಂಬುದನ್ನು ತಿಳಿಯಲು ಸಾಧ್ಯವಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಪಾರದರ್ಶಕತೆ ಪ್ರಜಾಪ್ರಭುತ್ವದಿಂದ ಚುನಾಯಿತವಾದ ಸರ್ಕಾರದ ಒಂದು ಅಂಶವಾಗಿದೆ. ಪಾರದರ್ಶಕತೆಗೆ ಕಾಂಗ್ರೆಸ್‌ ಬದ್ದವಾಗಿದೆ. ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಕೊರೊನಾ ರೋಗಿಯು ಸಾವನ್ನಪ್ಪಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಎನ್‌ಜಿಒಗಳು, ನಾಗರಿಕ ಸಮಾಜದ ಸದಸ್ಯರು ಮತ್ತು ರಾಜ್ಯದ ಪತ್ರಕರ್ತರಿಗೆ ನಾವು ಮನವಿ ಮಾಡುತ್ತೇವೆ” ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...