Homeಕರೋನಾ ತಲ್ಲಣಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

ಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಅಂಕಿ ಅಂಶವನ್ನೇ ಕೇಳಿಲ್ಲ: ತಿರುಗೇಟು ನೀಡಿದ ಛತ್ತಿಸ್‌ಘಡ

- Advertisement -
- Advertisement -

ದೇಶಾದ್ಯಂತ ಅಪ್ಪಳಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಕುರಿತು ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಒಕ್ಕೂಟ ಸರ್ಕಾರ ತನ್ನ ವೈಫಲ್ಯವನ್ನು ರಾಜ್ಯ ಸರ್ಕಾರದ ಮೇಲೆ ಹೇರಿತ್ತು. ಈಗ ರಾಜ್ಯಗಳಿಂದ ಅಂಕಿ ಅಂಶಗಳನ್ನೇ ಕೇಳಿಲ್ಲ ಎಂದು ಛತ್ತಿಸ್‌ಘಡ ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

“ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ರೋಗಿಗಳು ಬಲಿಯಾಗಿದ್ದಾರೆಯೇ ಎಂದು ತಿಳಿಯಲು ರಾಜ್ಯ ಸರ್ಕಾರವು ದಾಖಲಾದ ಸಾವುಗಳ ಮರು ಲೆಕ್ಕಪರಿಶೋಧನೆ ನಡೆಸುತ್ತಿದೆ” ಎಂದು ಆರೋಗ್ಯ ಸಚಿವ ಟಿಎಸ್‌ ಸಿಂಗ್‌ ಡಿಯೋ ಮಾಹಿತಿ ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ಜುಲೈ 20 ರಂದು ರಾಜ್ಯಸಭೆಯಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಆಕ್ಸಿಜನ್‌ ಕೊರತೆಯ ಸಾವುಗಳ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರದಿಯನ್ನು ನೀಡಿಲ್ಲ ಎಂದು ಹೇಳಿತ್ತು. ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

“ಭಾರತ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಮದ ನಿರಂತರವಾಗಿ ಮಾಹಿತಿ ನೀಡಲಾಗಿದೆ. ಆದರೆ, ಅವರು ಆಮ್ಲಜನಕದ ಕೊರತೆಯಿಂದ ಉಂಟಾಗುವ ಸಾವುಗಳ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕೇಳಲಿಲ್ಲ. ಈಗ ರಾಜ್ಯಗಳು ಸರಿಯಾದ ಡೇಟಾ ನೀಡಲ್ಲ ಎಂದು ಹೇಳುತ್ತಿದ್ದಾರೆ. ಇದು ಅವರ ವೈಫಲ್ಯ ಅಸಮರ್ಥತೆಯನ್ನು ಮುಚ್ಚಿಕೊಳ್ಳಲು ಹೇಳುತ್ತಿರುವ ದುರುದ್ದೇಶದ ಹೇಳಿಕೆಯಾಗಿದೆ” ಎಂದು ಸಚಿವ ಟಿಎಸ್‌ ಸಿಂಗ್‌ ಡಿಯೋ ಒಕ್ಕೂಟ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

“ಛತ್ತಿಸ್‌ಘಡ ರಾಜ್ಯದಲ್ಲಿ ಆಕ್ಸಿಜನ್‌ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗಿದೆ. ಹೀಗಾಗಿ ನಾವು ಆಕ್ಸಿಜನ್‌ ಕೊರತೆಗೆ ಸಂಬಂಧಿಸಿದ ಸಾವುಗಳನ್ನು ದಾಖಲಿಸಿಲ್ಲ. ಆದರೆ, ಈ ಬಗ್ಗೆ ನಾವು ಮೊಂಡುತನವನ್ನು ಪ್ರದರ್ಶಿಸುವುದಿಲ್ಲ. ನಾವು ಆಕ್ಸಿಜನ್‌ ಸಾವುಗಳ ಬಗ್ಗೆ ಜನರು ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಸಿದ್ದರಿದ್ದೇವೆ. ಆಕ್ಸಿಜನ್‌ ಸಂಬಂಧಿತ ಸಾವುಗಳ ಬಗ್ಗೆ ಮರು ಪರಿಶೀಲನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೂ, ಕೆಲವು ದೂರುಗಳನ್ನು ಪಡೆಯಲಾಗಿದೆ. ಹಾಗಾಗಿ, ಎಲ್ಲಾ ಅನುಮಾನಗಳನ್ನು ಹೋಗಲಾಡಿಸಲು ನಾವು ಮತ್ತೆ ಸಾವುಗಳ ಅಂಕಿಅಂಶಗಳನ್ನು ಮರು ಲೆಕ್ಕಪರಿಶೋಧನೆ ಮಾಡುತ್ತಿದ್ದೇವೆ” ಎಂದು ಸಿಂಗ್ ಡಿಯೋ ತಿಳಿಸಿದ್ದಾರೆ.

ದೇಶಾದ್ಯಂತ ಇದೇ ರೀತಿಯ ಸಾವುಗಳ ಲೆಕ್ಕಪರಿಶೋಧನೆ ನಡೆಸಬೇಕೆಂದು ಒಕ್ಕೂಟ ಸರ್ಕಾರವನ್ನು ಸಿಂಗ್ ಡಿಯೋ ಒತ್ತಾಯಿಸಿದ್ದಾರೆ. “ಯಾವುದೇ ಪುರಾವೆಗಳಿಲ್ಲದೆ ಲಸಿಕೆ ವ್ಯರ್ಥವಾಗಿದೆಯೆಂದು ಕೇಂದ್ರವು ಛತ್ತಿಸ್‌ಘಡದ ಮೇಲೆ ಆರೋಪ ಮಾಡುತ್ತಿದೆ. ಈ ರೀತಿ ದೇಶಾದ್ಯಂತ ತಮ್ಮ ತಂಡಗಳನ್ನು ಕಳುಹಿಸುವ ಮೂಲಕ ಎಷ್ಟು ಸಾವುಗಳು ಸಂಭವಿಸಿವೆ ಎಂಬುದನ್ನು ತಿಳಿಯಲು ಸಾಧ್ಯವಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಪಾರದರ್ಶಕತೆ ಪ್ರಜಾಪ್ರಭುತ್ವದಿಂದ ಚುನಾಯಿತವಾದ ಸರ್ಕಾರದ ಒಂದು ಅಂಶವಾಗಿದೆ. ಪಾರದರ್ಶಕತೆಗೆ ಕಾಂಗ್ರೆಸ್‌ ಬದ್ದವಾಗಿದೆ. ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಕೊರೊನಾ ರೋಗಿಯು ಸಾವನ್ನಪ್ಪಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಎನ್‌ಜಿಒಗಳು, ನಾಗರಿಕ ಸಮಾಜದ ಸದಸ್ಯರು ಮತ್ತು ರಾಜ್ಯದ ಪತ್ರಕರ್ತರಿಗೆ ನಾವು ಮನವಿ ಮಾಡುತ್ತೇವೆ” ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...