Homeಕರ್ನಾಟಕಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು, ಎರಡು ತಿಂಗಳಲ್ಲಿ ಡಿಪಿಆರ್: ಹೆಚ್‌.ಡಿ ಕುಮಾರಸ್ವಾಮಿ

ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು, ಎರಡು ತಿಂಗಳಲ್ಲಿ ಡಿಪಿಆರ್: ಹೆಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಭದ್ರಾವತಿಯ ಸರ್.ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂದರು.

ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಇಡೀ ಕಾರ್ಖಾನೆಯನ್ನು ಹೊಸದಾಗಿ, ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ತಿಳಿಸಿದರು.

ಸುಮಾರು 8,000ರಿಂದ 10,000 ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ  ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆಯನ್ನೂ ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರ್ಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.

ಸಾರಿಗೆ ಮಾಲಿನ್ಯ ಶೂನ್ಯ ಮಟ್ಟಕ್ಕೆ; ರಾಜ್ಯಕ್ಕೆ 4,500 ಎಲೆಕ್ಟ್ರಿಕ್ ಬಸ್

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆಯೇ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದ ಮಟ್ಟಿಗೆ ದೊಡ್ಡ ತೀರ್ಮಾನ ಮಾಡಿದ್ದೇವೆ. ಪಿಎಂ ಇಡ್ರೈವ್ ಯೋಜನೆಯಡಿ ಬಸ್‌ಗಳನ್ನು ನೀಡುತ್ತಿದ್ದೇವೆ. 2030ರ ವೇಳೆಗೆ ಭೂಸಾರಿಗೆ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಬೇಕು ಎನ್ನುವ ಉದ್ದೇಶವನ್ನು ಪ್ರಧಾನಿ ಹೊಂದಿದ್ದಾರೆ. ಅವರ ಕನಸು ಸಾಕಾರಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಜನೌಷಧ ಕೇಂದ್ರಗಳ ತೆರವು ಆರೋಪ; ಕುಮಾರಸ್ವಾಮಿ ಕಿಡಿ

ರಾಜ್ಯದ ಆಸ್ಪತ್ರೆಗಳ ಆವರಣದಲ್ಲಿ ಕಡಿಮೆ ಬೆಲೆಗೆ ಔಷಧ ಮಾರಾಟ ಮಾಡುತ್ತಿರುವ ಕೇಂದ್ರದ ಜನೌಷಧ ಕೇಂದ್ರಗಳನ್ನು ತೆರವು ಮಾಡಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗುತ್ತಿರುವ ಔಷಧಗಳನ್ನು ತಪ್ಪಿಸಿ ಯಾವುದೋ ಲಾಬಿಗೆ ಅನುಕೂಲ ಮಾಡಿಕೊಡುವ ಕುತಂತ್ರ ಇದರ ಹಿಂದೆ ಅಡಗಿರುವಂತೆ ತೋರುತ್ತಿದೆ. ಜನೌಷಧ ಮಳಿಗೆಗಳನ್ನು ತೆರವು ಮಾಡಿ ಮದ್ಯವನ್ನು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತೀರಾ? ಆಕ್ರೋಶ ವ್ಯಕ್ತಪಡಿಸಿದರು.

ಇವರು ತಮ್ಮ ಗ್ಯಾರಂಟಿಗಳು ವಿಶ್ವಕ್ಕೆ ಮಾದರಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಜನರ ಹತ್ತಿರಕ್ಕೆ ಹೋಗಿ ಒಮ್ಮೆ ನೋಡಲಿ. ಅಸಲಿ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರಿಗೆ ಉಚಿತ ಮಾತ್ರೆ ಕೊಡುವ ಯೋಗ್ಯತೆ ನಿಮ್ಮ ಸರ್ಕಾರಕ್ಕೆ ಇಲ್ಲ. ಮೂಡ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪರ ವಕೀಲ ಕಪಿಲ್ ಸಿಬಲ್ ಅವರು ವಾದ ಮಾಡಲು 1.49 ಕೋಟಿ ಹಣ ಕೊಡ್ತಾ ಇದ್ದೀರಿ. ಆ ಹಣ ಯಾರದ್ದು? ಸಿದ್ದರಾಮಯ್ಯ ಅವರ ಮನೆಯ ಹಣವಾ? ಅವರು, ಅವರ ಪತ್ನಿ ಪರವಾಗಿ ಕೋರ್ಟ್‌ನಲ್ಲಿ ವಾದಿಸುವುದಕ್ಕೆ ಸರ್ಕಾರ ಯಾಕೆ ಶುಲ್ಕ ನೀಡಬೇಕು? ಎಂದು ಅವರು ಪ್ರಶ್ನಿಸಿದರು.

ಸಂಪುಟ ಸಭೆಯಲ್ಲಿ ಕೆಪಿಎಸ್ಸಿ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. 2011ರಲ್ಲಿ ನಡೆದಿದ್ದ ನೇಮಕಾತಿ ಅಕ್ರಮದ ವಿಚಾರಣೆಯನ್ನು ಕೈಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇವರಿಂದ ಕೆಪಿಎಸ್ಸಿ ಸ್ವಚ್ಛ ಮಾಡಲು ಸಾಧ್ಯವೇ? ಅರ್ಕಾವತಿ ರೀಡೂ ಮಾಡಿಕೊಟ್ಟಿದ್ದಕ್ಕೆ ಪ್ರತಿಯಾಗಿ ಅಲ್ಲಿದ್ದ ವ್ಯಕ್ತಿಯನ್ನು ತಂದು ಕೆಪಿಎಸ್ಸಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಒಂದೊಂದು ಹುದ್ದೆಗೆ ಲಕ್ಷಾಂತರ, ಕೋಟ್ಯಂತರ ರೂಪಾಯಿ ಫಿಕ್ಸ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಈಗ ಮೀಸಲಾತಿ ಅಂತ ಹೊರಟಿದ್ದೀರಿ. ಮೀಸಲಾತಿ ಕೊಟ್ಟು ಏನ್ ಮಾಡ್ತಿರಿ? ನಿಮ್ಮಿಂದ ಉದ್ಯೋಗ ಕೊಡಲು ಆಗುತ್ತಿಲ್ಲ. ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿವೆ. ಎಷ್ಟು ವರ್ಷವಾಯಿತು ಖಾಲಿ ಹುದ್ದೆ ತುಂಬಿ? ಮೀಸಲಾತಿಯಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...