Homeಮುಖಪುಟಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

ಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

- Advertisement -
- Advertisement -

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF)  ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿದೆ ಎಂದು hindustantimes.com ವರದಿ ಮಾಡಿದೆ.

ಫೆಬ್ರವರಿ 7 ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಇದನ್ನು ಸಧ್ಯ ಆಂತರಿಕ ವಿಷಯ ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸಲಾಗಿಲ್ಲ. ಪ್ರತಿಷ್ಠಾನದ ಸದಸ್ಯರೋರ್ವರ ಪ್ರಕಾರ, ಈ ಬಗ್ಗೆ ಆಂತರಿಕ ಚರ್ಚೆಗಳು ನಡೆಯುತ್ತಿವೆ ಮತ್ತು ಆದೇಶವನ್ನು ಇನ್ನೂ ಬಹಿರಂಗಗೊಳಿಸಲಾಗಿಲ್ಲ. ಮಾರ್ಚ್ 4ರಂದು ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಇನ್ನೋರ್ವ ಸದಸ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ಸಚಿವಾಲಯವನ್ನು ಮತ್ತು ಸೆಂಟ್ರಲ್ ವಕ್ಫ್ ಕೌನ್ಸಿಲ್‌ನ್ನು ಸಮೀಪಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್ ವರದಿ ತಿಳಿಸಿದೆ.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ 669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

2006ರಲ್ಲಿ ಸಾಚಾರ್ ಸಮಿತಿಯ ವರದಿಯು ಮುಸ್ಲಿಮರ ಸ್ಥಿತಿಗತಿ ಪರಿಶಿಷ್ಟ ಜಾತಿ/ಪರಿಶಿಷ್ಟ ಬುಡಕಟ್ಟುಗಳಿಗಿಂತ ಸ್ವಲ್ಪ ಸುಧಾರಿತವಾಗಿದ್ದರೂ ಇತರೆ ಹಿಂದುಳಿದ ವರ್ಗ, ಇತರ ಅಲ್ಪಸಂಖ್ಯಾತರಿಗಿಂತ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಹೇಳಿದೆ. ಈ ಸಂಶೋಧನೆಗಳಿಗೆ ಪ್ರತಿಕ್ರಿಯೆಯಾಗಿ 2006ರಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಲಾಯಿತು, ನಂತರ MAEF ಸಚಿವಾಲಯದ ಅಧೀನಕ್ಕೆ ಬಂದಿದೆ. ಮೋದಿ ಆಡಳಿತದಲ್ಲಿ ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಗಮನಾರ್ಹ ಬಜೆಟ್ ಕಡಿತವನ್ನು ಅನುಭವಿಸಿದೆ. ಅನುದಾನದಲ್ಲಿ 2021-22 ರಲ್ಲಿ ರೂ.90 ಕೋಟಿಯಿಂದ 2022-23ರಲ್ಲಿ ರೂ.1 ಲಕ್ಷ ಕೋಟಿ ಮೀಸಲಿಟ್ಟಿದೆ, ಆದರೆ ತರುವಾಯ 2024-25ನೇ ಪ್ರಸಕ್ತ ವರ್ಷದಲ್ಲಿ ಸರಕಾರ ಯಾವುದೇ ಅನುದಾನ ಮೀಸಲಿಟ್ಟಿಲ್ಲ.

ಈ ಬೆಳವಣಿಗೆಯ ಕುರಿತು ಮಾತನಾಡಿದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು, ಭಾರತದ ಮುಸ್ಲಿಂ ಸಮುದಾಯದ ನಡುವೆ ಶಿಕ್ಷಣವನ್ನು ಉತ್ತೇಜಿಸುವ MAEF ಮೇಲಿನ ಈ ಕ್ರಮವು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿಷ್ಠಾನದ ಅಡಿಯಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದರು ಮತ್ತು ಪ್ರತಿಷ್ಠಾನವನ್ನು ಮುಚ್ಚುತ್ತಿರುವುದು ದುರದೃಷ್ಟಕರವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...