Homeಮುಖಪುಟಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

ಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

- Advertisement -
- Advertisement -

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF)  ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿದೆ ಎಂದು hindustantimes.com ವರದಿ ಮಾಡಿದೆ.

ಫೆಬ್ರವರಿ 7 ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಇದನ್ನು ಸಧ್ಯ ಆಂತರಿಕ ವಿಷಯ ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸಲಾಗಿಲ್ಲ. ಪ್ರತಿಷ್ಠಾನದ ಸದಸ್ಯರೋರ್ವರ ಪ್ರಕಾರ, ಈ ಬಗ್ಗೆ ಆಂತರಿಕ ಚರ್ಚೆಗಳು ನಡೆಯುತ್ತಿವೆ ಮತ್ತು ಆದೇಶವನ್ನು ಇನ್ನೂ ಬಹಿರಂಗಗೊಳಿಸಲಾಗಿಲ್ಲ. ಮಾರ್ಚ್ 4ರಂದು ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಇನ್ನೋರ್ವ ಸದಸ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ಸಚಿವಾಲಯವನ್ನು ಮತ್ತು ಸೆಂಟ್ರಲ್ ವಕ್ಫ್ ಕೌನ್ಸಿಲ್‌ನ್ನು ಸಮೀಪಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್ ವರದಿ ತಿಳಿಸಿದೆ.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ 669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

2006ರಲ್ಲಿ ಸಾಚಾರ್ ಸಮಿತಿಯ ವರದಿಯು ಮುಸ್ಲಿಮರ ಸ್ಥಿತಿಗತಿ ಪರಿಶಿಷ್ಟ ಜಾತಿ/ಪರಿಶಿಷ್ಟ ಬುಡಕಟ್ಟುಗಳಿಗಿಂತ ಸ್ವಲ್ಪ ಸುಧಾರಿತವಾಗಿದ್ದರೂ ಇತರೆ ಹಿಂದುಳಿದ ವರ್ಗ, ಇತರ ಅಲ್ಪಸಂಖ್ಯಾತರಿಗಿಂತ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಹೇಳಿದೆ. ಈ ಸಂಶೋಧನೆಗಳಿಗೆ ಪ್ರತಿಕ್ರಿಯೆಯಾಗಿ 2006ರಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಲಾಯಿತು, ನಂತರ MAEF ಸಚಿವಾಲಯದ ಅಧೀನಕ್ಕೆ ಬಂದಿದೆ. ಮೋದಿ ಆಡಳಿತದಲ್ಲಿ ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಗಮನಾರ್ಹ ಬಜೆಟ್ ಕಡಿತವನ್ನು ಅನುಭವಿಸಿದೆ. ಅನುದಾನದಲ್ಲಿ 2021-22 ರಲ್ಲಿ ರೂ.90 ಕೋಟಿಯಿಂದ 2022-23ರಲ್ಲಿ ರೂ.1 ಲಕ್ಷ ಕೋಟಿ ಮೀಸಲಿಟ್ಟಿದೆ, ಆದರೆ ತರುವಾಯ 2024-25ನೇ ಪ್ರಸಕ್ತ ವರ್ಷದಲ್ಲಿ ಸರಕಾರ ಯಾವುದೇ ಅನುದಾನ ಮೀಸಲಿಟ್ಟಿಲ್ಲ.

ಈ ಬೆಳವಣಿಗೆಯ ಕುರಿತು ಮಾತನಾಡಿದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು, ಭಾರತದ ಮುಸ್ಲಿಂ ಸಮುದಾಯದ ನಡುವೆ ಶಿಕ್ಷಣವನ್ನು ಉತ್ತೇಜಿಸುವ MAEF ಮೇಲಿನ ಈ ಕ್ರಮವು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿಷ್ಠಾನದ ಅಡಿಯಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದರು ಮತ್ತು ಪ್ರತಿಷ್ಠಾನವನ್ನು ಮುಚ್ಚುತ್ತಿರುವುದು ದುರದೃಷ್ಟಕರವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...