Homeಮುಖಪುಟಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

ಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

- Advertisement -
- Advertisement -

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF)  ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿದೆ ಎಂದು hindustantimes.com ವರದಿ ಮಾಡಿದೆ.

ಫೆಬ್ರವರಿ 7 ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಇದನ್ನು ಸಧ್ಯ ಆಂತರಿಕ ವಿಷಯ ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸಲಾಗಿಲ್ಲ. ಪ್ರತಿಷ್ಠಾನದ ಸದಸ್ಯರೋರ್ವರ ಪ್ರಕಾರ, ಈ ಬಗ್ಗೆ ಆಂತರಿಕ ಚರ್ಚೆಗಳು ನಡೆಯುತ್ತಿವೆ ಮತ್ತು ಆದೇಶವನ್ನು ಇನ್ನೂ ಬಹಿರಂಗಗೊಳಿಸಲಾಗಿಲ್ಲ. ಮಾರ್ಚ್ 4ರಂದು ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಇನ್ನೋರ್ವ ಸದಸ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ಸಚಿವಾಲಯವನ್ನು ಮತ್ತು ಸೆಂಟ್ರಲ್ ವಕ್ಫ್ ಕೌನ್ಸಿಲ್‌ನ್ನು ಸಮೀಪಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್ ವರದಿ ತಿಳಿಸಿದೆ.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ 669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

2006ರಲ್ಲಿ ಸಾಚಾರ್ ಸಮಿತಿಯ ವರದಿಯು ಮುಸ್ಲಿಮರ ಸ್ಥಿತಿಗತಿ ಪರಿಶಿಷ್ಟ ಜಾತಿ/ಪರಿಶಿಷ್ಟ ಬುಡಕಟ್ಟುಗಳಿಗಿಂತ ಸ್ವಲ್ಪ ಸುಧಾರಿತವಾಗಿದ್ದರೂ ಇತರೆ ಹಿಂದುಳಿದ ವರ್ಗ, ಇತರ ಅಲ್ಪಸಂಖ್ಯಾತರಿಗಿಂತ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಹೇಳಿದೆ. ಈ ಸಂಶೋಧನೆಗಳಿಗೆ ಪ್ರತಿಕ್ರಿಯೆಯಾಗಿ 2006ರಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಲಾಯಿತು, ನಂತರ MAEF ಸಚಿವಾಲಯದ ಅಧೀನಕ್ಕೆ ಬಂದಿದೆ. ಮೋದಿ ಆಡಳಿತದಲ್ಲಿ ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಗಮನಾರ್ಹ ಬಜೆಟ್ ಕಡಿತವನ್ನು ಅನುಭವಿಸಿದೆ. ಅನುದಾನದಲ್ಲಿ 2021-22 ರಲ್ಲಿ ರೂ.90 ಕೋಟಿಯಿಂದ 2022-23ರಲ್ಲಿ ರೂ.1 ಲಕ್ಷ ಕೋಟಿ ಮೀಸಲಿಟ್ಟಿದೆ, ಆದರೆ ತರುವಾಯ 2024-25ನೇ ಪ್ರಸಕ್ತ ವರ್ಷದಲ್ಲಿ ಸರಕಾರ ಯಾವುದೇ ಅನುದಾನ ಮೀಸಲಿಟ್ಟಿಲ್ಲ.

ಈ ಬೆಳವಣಿಗೆಯ ಕುರಿತು ಮಾತನಾಡಿದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು, ಭಾರತದ ಮುಸ್ಲಿಂ ಸಮುದಾಯದ ನಡುವೆ ಶಿಕ್ಷಣವನ್ನು ಉತ್ತೇಜಿಸುವ MAEF ಮೇಲಿನ ಈ ಕ್ರಮವು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿಷ್ಠಾನದ ಅಡಿಯಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದರು ಮತ್ತು ಪ್ರತಿಷ್ಠಾನವನ್ನು ಮುಚ್ಚುತ್ತಿರುವುದು ದುರದೃಷ್ಟಕರವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...