Homeಮುಖಪುಟಮನುಷ್ಯ ಜೀವಕ್ಕೆ ಅಪಾಯ: 23 "ಕ್ರೂರ" ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

ಮನುಷ್ಯ ಜೀವಕ್ಕೆ ಅಪಾಯ: 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

- Advertisement -
- Advertisement -

ದೇಶಾದ್ಯಂತ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, “ಮನುಷ್ಯನ ಜೀವಕ್ಕೆ ಅಪಾಯ” ಎಂದು ಪರಿಗಣಿಸಲಾದ 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯ ಮೇಲೆ ಕೇಂದ್ರವು ನಿಷೇಧ ಹೇರಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.

ನಿಷೇಧಿತ ನಾಯಿ ತಳಿಗಳ ಪಟ್ಟಿ: ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ, ಮತ್ತು ಸಾಮಾನ್ಯವಾಗಿ ಬ್ಯಾನ್ ಡಾಗ್‌ಗೆ ಭಾರತದಲ್ಲಿ ನಿಷೇಧವನ್ನು ವಿಧಿಸಲಾಗಿದೆ.

ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಮೇಲೆ ಉಲ್ಲೇಖಿಸಿದ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ. ಶ್ವಾನ ಸಾಕಣೆ ಮತ್ತು ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018ರ ಜಾರಿಗಾಗಿ ಕೇಂದ್ರ ಸರ್ಕಾರವು ಇದೇ ವೇಳೆ ಸೂಚಿಸಿದೆ.

ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಇಂಡಿಯಾದಿಂದ ಮನವಿ ಮಾಡಿದ ನಂತರ ಕೇಂದ್ರದ ಈ ಕ್ರಮವು ಬಂದಿದೆ. ಈ ಬಗ್ಗೆ ಪೇಟಾ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದೆ. ತನ್ನ ಅರ್ಜಿಯಲ್ಲಿ PETA, ಈ ಆದೇಶವು ಮಾನವರು ಮತ್ತು ನಾಯಿಗಳೆರಡಕ್ಕೂ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖವಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ತಿಂಗಳು ದೇಶಾದ್ಯಂತ ನಾಯಿ ಕಡಿತದಿಂದ ಹಲವಾರು ಸಾವುಗಳು ಸಂಭವಿಸಿವೆ. ಮಂಗಳವಾರ, ಹಿಮಾಚಲದ ಬಿಲಾಸ್‌ಪುರ ಪ್ರದೇಶದಲ್ಲಿ ಬೀದಿ ನಾಯಿಯ ದಾಳಿಯಿಂದ 20 ಜನರು ಗಾಯಗೊಂಡಿದ್ದರು. ದೆಹಲಿಯಲ್ಲಿ ಪಿಟ್‌ಬುಲ್‌ ದಾಳಿಯಿಂದ ಪುಟ್ಟ ಮಗು 17 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ ಗಾಝಿಯಾಬಾದ್‌ನಲ್ಲಿ ಪಿಟ್ ಬುಲ್ ದಾಳಿಗೆ 10 ವರ್ಷದ ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿತ್ತು.

ಇದನ್ನು ಓದಿ: ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...