Homeಮುಖಪುಟಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

ಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

- Advertisement -
- Advertisement -

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿದೆ. ಜುಲೈ 6, 2022ರಂದು 5ನೇ ಅಧಿಸೂಚನೆ ಹೊರಡಿಸಲಾಗಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಕರಡು ಪ್ರತಿಗೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು ಕೇಂದ್ರವು 60 ದಿನಗಳ ಗಡುವನ್ನು ನೀಡಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಇದನ್ನೂ ಓದಿ : ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...