Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...