Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...