Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...