Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...